ಬೋಳೂರು ಶ್ರೀ ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್‌ಗೆ ಶಾಸಕ ವೇದವ್ಯಾಸ ಕಾಮತ್ ಮನವಿ

ಮಂಗಳೂರು, ಜು. 4: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪ್ರದೇಶದಲ್ಲಿ ಹಲವು ದಶಕಗಳಿಂದ ಸ್ಥಳೀಯರನ್ನು ಕಾಡುತ್ತಿರುವ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಟಿ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಸುಮಾರು 75 ವರ್ಷಗಳಿಂದ ಈ ಪ್ರದೇಶದಲ್ಲಿ ಸಮರ್ಪಕ ಡ್ರೈನೇಜ್ ವ್ಯವಸ್ಥೆ ಇಲ್ಲದಿರುವುದು ಸ್ಥಳೀಯರ ಪ್ರಮುಖ ಸಮಸ್ಯೆಯಾಗಿದ್ದು, ಈ ಹಿಂದೆ ಕುಡ್ಸೆಂಪ್ ವತಿಯಿಂದ ಅಗತ್ಯ…

Read More

ಬೀದಿಬದಿ ವ್ಯಾಪಾರಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ: ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ

ಮಂಗಳೂರು, ಜು.3: ನಗರಪಾಲಿಕೆಯ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾಗಿರುವ ಮಂಗಳೂರು ನಗರದ ಸಂಡೆ ಬಜಾರ್ ಸೇರಿದಂತೆ ವಿವಿಧ ಪ್ರದೇಶಗಳ ಬೀದಿಬದಿ ವ್ಯಾಪಾರಿಗಳು ಗುರುವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಬೀದಿಬದಿ ವ್ಯಾಪಾರವೇ ತಮ್ಮ ಜೀವನೋಪಾಯವಾಗಿದ್ದು, ಕುಟುಂಬದ ನಿರ್ವಹಣೆಗೆ ಇದನ್ನೇ ಅವಲಂಬಿಸಿರುವುದರಿಂದ ಬದುಕುವ ಹಕ್ಕನ್ನು ರಕ್ಷಿಸಿ, ವ್ಯಾಪಾರಕ್ಕೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ವ್ಯಾಪಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಅಹವಾಲು ಆಲಿಸಿದ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಘದ ಪ್ರತಿನಿಧಿಗಳು ಸೂಚಿಸುವ ಮೂರು…

Read More

ಬಲ್ಲೂರುಗುಡ್ಡೆಯಲ್ಲಿ ಗುಡ್ಡೆ ಕುಸಿತದ ಭೀತಿ: ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಆಗ್ರಹ

ಮಂಗಳೂರು, ಜು.3: ಮಂಗಳೂರು ಮಹಾನಗರ ಪಾಲಿಕೆಯ 52ನೇ ವಾರ್ಡ್ ವ್ಯಾಪ್ತಿಯ ಬಲ್ಲೂರುಗುಡ್ಡೆ ಪ್ರದೇಶದಲ್ಲಿ ಕಳೆದ 15 ವರ್ಷಗಳಿಂದ ಗುಡ್ಡೆ ಕುಸಿತದ ಸಮಸ್ಯೆ ಮುಂದುವರಿದಿದ್ದು, ಈ ಬಾರಿಯ ಮಳೆಗಾಲದಲ್ಲಿ ಸ್ಥಳೀಯರು ಆತಂಕದ ನಡುವೆ ಜೀವನ ಸಾಗಿಸುವಂತಾಗಿದೆ. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕರ ಗಮನಕ್ಕೆ ತಂದಿದ್ದರೂ, ಶಾಶ್ವತ ಪರಿಹಾರ ಕಾಮಗಾರಿಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡೆ ಕುಸಿತದಿಂದ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸುವ ಮುನ್ನವೇ ಜಿಲ್ಲಾಡಳಿತ,…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಲುಗಡೆ ತಾಣ ಬಳಕೆಗೆ ನಿರ್ಲಕ್ಷ್ಯ: ಅಪಘಾತ ಭೀತಿ, ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಮುಖ್ಯ ರಸ್ತೆಯಲ್ಲೇ ಬಸ್ ನಿಲುಗಡೆ; ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ಬಂಟ್ವಾಳ, ಜು.3: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ನಿರ್ಮಿಸಲಾದ ಬಸ್ ಬೇಗಳನ್ನು ಬಳಸದೆ, ಹೆದ್ದಾರಿಯ ಮುಖ್ಯ ಮಾರ್ಗದಲ್ಲೇ ಬಸ್‌ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿ-ಇಳಿಸುವ ಪದ್ಧತಿ ಮುಂದುವರಿದಿದ್ದು, ಇದು ಅಪಘಾತಗಳಿಗೆ ಕಾರಣವಾಗುವ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಬಿಸಿರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳ ಬಹುಪಾಲು ನಿಗದಿತ ಬಸ್ ಬೇಗಳಿಗೆ ತೆರಳದೆ ಮುಖ್ಯ ರಸ್ತೆಯಲ್ಲೇ ಕೆಲ ಕ್ಷಣಗಳ ಕಾಲ ನಿಲ್ಲಿಸುತ್ತಿವೆ ಎಂಬ ಆರೋಪ…

Read More

8 ವರ್ಷಗಳಲ್ಲಿ ₹2 ಕೋಟಿಗೂ ಅಧಿಕ ಸಮಾಜಸೇವೆ: ರೋಟರಿ ಹಿಲ್ಸ್‌ನಿಂದ ಮಾದರಿ ಕಾರ್ಯ

2025ರಲ್ಲಿ ₹30 ಲಕ್ಷ ವೆಚ್ಚದ ಸಮಾಜಮುಖಿ ಯೋಜನೆಗಳು; ಜುಲೈ 5ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಬಂಟ್ವಾಳ, ಜು.3: ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ರೋಟರಿ ಹಿಲ್ಸ್ ಕ್ಲಬ್ ಕಳೆದ ಎಂಟು ವರ್ಷಗಳಲ್ಲಿ ₹2 ಕೋಟಿಗೂ ಅಧಿಕ ಮೊತ್ತದ ವಿವಿಧ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, 2025ನೇ ಸಾಲಿನಲ್ಲೇ ಸುಮಾರು ₹30 ಲಕ್ಷ ವೆಚ್ಚದ ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ಕ್ಲಬ್ ಅಧ್ಯಕ್ಷ ರೊ. ವಿಜಯ ಪೆರ್ನಾಂಡಿಸ್ ತಿಳಿಸಿದ್ದಾರೆ. ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ…

Read More

ನಾಗರಹಾವಿನ ಕಡಿತಕ್ಕೆ ಆಟೋ ಚಾಲಕ ಬಲಿ

ಹುಲ್ಲು ಕತ್ತರಿಸುವ ಯಂತ್ರ ಎತ್ತುವ ವೇಳೆ ದುರ್ಘಟನೆ; ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು ಬಂಟ್ವಾಳ, ಜು.3: ನಾಗರಹಾವಿನ ಕಡಿತಕ್ಕೊಳಗಾದ ಆಟೋ ಚಾಲಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕುದ್ಕಾರ್‌ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಸೆರ್ಕಳ ಕುದ್ಕಾರ್ ನಿವಾಸಿ ಸುಲೈಮಾನ್ ಅವರ ಪುತ್ರ ಹಾಗೂ ಆಟೋ ಚಾಲಕರಾದ ಹಸೈನಾ‌ರ್ (50) ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಮನೆಯ ಸಮೀಪದಲ್ಲಿ ಇರಿಸಿದ್ದ ಹುಲ್ಲು ಕತ್ತರಿಸುವ ಯಂತ್ರವನ್ನು ಎತ್ತಲು ಮುಂದಾದ ವೇಳೆ ಅದರ…

Read More

ಅಂಬೇಡ್ಕರ್ ಭವನಕ್ಕೆ ಸಮಾಜ ಕಲ್ಯಾಣ ಇಲಾಖೆ ಸ್ಥಳಾಂತರ: ನಾಮಫಲಕ ಇಲ್ಲ, ಮುಂಭಾಗದ ಬಾಗಿಲಿಗೆ ಬೀಗ; ಫಲಾನುಭವಿಗಳ ಪರದಾಟ

ಬಂಟ್ವಾಳ, ಜು.3: ದಲಿತ ಸಮುದಾಯದ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಆಡಳಿತ, ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಅಂಬೇಡ್ಕರ್ ಭವನದ ಮೇಲಂತಸ್ತಿಗೆ ಸ್ಥಳಾಂತರಿಸಿದೆ. ಹಲವು ವರ್ಷಗಳಿಂದ ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಗೆ ಸರ್ಕಾರಿ ಕಟ್ಟಡದಲ್ಲಿ ಸ್ಥಳಾವಕಾಶ ದೊರೆತಿರುವುದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಹಳೆಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಕಟ್ಟಡವನ್ನು ಕೆಡವಿದ ಬಳಿಕ ಇಲಾಖೆಯನ್ನು ಖಾಸಗಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಇಲಾಖೆಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕೆಂಬ ಬೇಡಿಕೆ ಹಲವು ಬಾರಿ…

Read More

ಬಂಟ್ವಾಳ ಎ.ಆರ್.ಟಿ.ಒ. ಕಚೇರಿಯನ್ನು ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ, ಜು.3: ಮೆಲ್ಕಾರ್‌ನ ಬಿರ್ವ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎ.ಆರ್.ಟಿ.ಒ. (ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ) ಕಚೇರಿಯನ್ನು ಖಾಸಗಿ ಕಟ್ಟಡದಿಂದ ಸ್ಥಳಾಂತರಿಸಿ ಸರ್ಕಾರಿ ಕಟ್ಟಡಕ್ಕೆ ವರ್ಗಾಯಿಸುವಂತೆ ಸಾಮಾಜಿಕ ಕಾರ್ಯಕರ್ತ ಖಾಲಿದ್ ನಂದಾವರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ಎ.ಆರ್.ಟಿ.ಒ. ಕಚೇರಿಗೆ ಸರ್ಕಾರದ ಬೊಕ್ಕಸದಿಂದ ಪ್ರತಿ ತಿಂಗಳು ಸುಮಾರು ₹4 ಲಕ್ಷ ಬಾಡಿಗೆ ಹಾಗೂ ತರಬೇತಿ ಮೈದಾನಕ್ಕಾಗಿ ಹೆಚ್ಚುವರಿಯಾಗಿ ₹25 ಸಾವಿರ ಪಾವತಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ರಾಜಕೀಯ ಪ್ರಭಾವದಿಂದ ಈ ವ್ಯವಸ್ಥೆ ಮುಂದುವರಿಯುತ್ತಿದ್ದು, ಸಾರ್ವಜನಿಕರಿಂದ ತೆರಿಗೆ ಮತ್ತು ವಿವಿಧ ಶುಲ್ಕಗಳ…

Read More

ಹಾಚಿ ಇಟ್ಟಿಗಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’

ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಜನಪ್ರಿಯ ಆಧುನಿಕ ವಚನಕಾರ ಹಾಗೂ ಸುಪ್ರಸಿದ್ಧ ಸಾಹಿತಿ ಹಾಚಿ ಇಟ್ಟಿಗಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’ ಘೋಷಿಸಲಾಗಿದೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ….

Read More

ಮಣಿಪಾಲ: ಮಾಹೆ (MAHE) ವಿಶ್ವವಿದ್ಯಾಲಯದ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ಅವರು ಜುಲೈ 1ರಂದು ಅಧಿಕಾರ ಸ್ವೀಕರಿಸಿದರು.

ಈ ಹುದ್ದೆಯಲ್ಲಿ ತಮ್ಮ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಡಾ. ನಾರಾಯಣ ಸಭಾಹಿತ್ ಅವರು ಇನ್ನು ಮುಂದೆ ಮಾಹೆ ವಿಶ್ವವಿದ್ಯಾಲಯದ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾಗಿರುವ ಡಾ. ಕರುಣಾಕರ್ ಕೋಟೆಗಾರ್ ಅವರು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ, ಸಂಶೋಧನೆ, ಶೈಕ್ಷಣಿಕ ನಾಯಕತ್ವ ಹಾಗೂ ಅಂತಾರಾಷ್ಟ್ರೀಯ ಸಹಯೋಗ ಸೇರಿದಂತೆ 29 ವರ್ಷಗಳಿಗೂ ಅಧಿಕ ಅನುಭವ ಹೊಂದಿದ್ದಾರೆ. 2024ರ ಅಕ್ಟೋಬರ್‌ನಿಂದ ಜೈಪುರದ ಮಣಿಪಾಲ ಕ್ಯಾಂಪಸ್‌ನ ಸಹ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂಐಟಿಯ ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್…

Read More
error: Content is protected !!