ಮಂಗಳೂರಿನಲ್ಲಿ ‘ಭಾವಸಂಗಮ’ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ: ಜುಲೈ 18, 19 ಹಾಗೂ 26ರಂದು ಆಯೋಜನೆ
ಮಂಗಳೂರು, ಜು.3: ಕಲಾಮೃತ ಮಂಗಳೂರು ಹಾಗೂ ನಮ್ಮ ಕುಡ್ಲ ಸಂಸ್ಥೆಗಳು, ಶಾರದಾ ವಿದ್ಯಾಲಯ ಮಂಗಳೂರು ಸಹಯೋಗದೊಂದಿಗೆ “ಭಾವಸಂಗಮ” ಜಿಲ್ಲಾ ಮಟ್ಟದ ಭಕ್ತಿಗೀತೆ, ಭಾವಗೀತೆ ಹಾಗೂ ದೇಶಭಕ್ತಿ ಗೀತೆಗಳ ವೈಯಕ್ತಿಕ ಗಾಯನ ಸ್ಪರ್ಧೆಯನ್ನು ಜುಲೈ 18, 19 ಹಾಗೂ 26ರಂದು ಮಂಗಳೂರಿನಲ್ಲಿ ಆಯೋಜಿಸಿವೆ ಎಂದು ಕಲಾಮೃತ ಸದಸ್ಯ ಗಣೇಶ್ ಸೋಮಯಾಜಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯ ಪ್ರಥಮ ಹಂತ ಜುಲೈ 18 ಮತ್ತು 19ರಂದು ನವರತ್ನ ಪ್ಯಾಲೇಸ್ನಲ್ಲಿ ನಡೆಯಲಿದ್ದು, ದ್ವಿತೀಯ ಹಂತದ ಸೆಮಿಫೈನಲ್ ಹಾಗೂ…
