ಕಾನಿಪ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು ಟಿ ಖಾದರ್ ಸಲಹೆ ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು…

Read More

ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ…

Read More

ಶತಾಯುಷಿ ಕುಜುಂಬ ಅಜಿಲ ನಿಧನ — ಗ್ರಾಮದಲ್ಲಿ ಸಂತಾಪ

ಕಡಬ, ಏಪ್ರಿಲ್:ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಾಡೋಳಿ ನಿವಾಸಿಯಾದ ಶತಾಯುಷಿ ಕುಜುಂಬ ಅಜಿಲ (105) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಸಂಜೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ದೈವನರ್ತಕರಾಗಿ ಗುರುತಿಸಿಕೊಂಡಿದ್ದು, ತಮ್ಮ ಜೀವನವನ್ನು ಸಂಪ್ರದಾಯ ಹಾಗೂ ಸೇವೆಗೆ ಅರ್ಪಿಸಿಕೊಂಡಿದ್ದರು. ಶತಾಯುಷಿಯಾಗಿ ದೀರ್ಘಾಯುಷ್ಯ ಹೊಂದಿದ್ದ ಅವರು ಸ್ಥಳೀಯ ಸಮಾಜದಲ್ಲಿ ಗೌರವಾನ್ವಿತರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಬಳಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಡೆಮ್ಮoಗರ ಮಸೀದಿಯಲ್ಲಿ ಜಲಾಲಿಯ್ಯ ರಾತೀಬ್

ಪುತ್ತೂರು /ಬೆಟ್ಟoಪಾಡಿ : K K ಮಸ್ಜಿದ್ & ಬುಸ್ತಾನುಲ್ ಉಲೂಮ್ ದರ್ಸ್ ಅಹ್ದಲಿಯ ನಗರ ಡೆಮ್ಮoಗರ, ಬೆಟ್ಟoಪಾಡಿ ಇದರ ಆಶ್ರಯದಲ್ಲಿ 3 ತಿಂಗಳಿಗೊಮ್ಮೆ ನಡೆಸಿಕೊoಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮವು ಬಹು | ಅಸ್ಸಯ್ಯದ್ ಮುಖ್ತಾರ್ ತಂಗಳ್ ಕುಂಬೋಲ್ ಇವರ ನೇತೃತ್ವದಲ್ಲಿ ನಡೆಯಿತು. ಬಹು | ಅಸ್ಸಯ್ಯದ್ ಹಾಶಿಮ್ ತಂಗಳ್ ಕೊರಿಂಗಿಲ, ಬಹು|ಅಬ್ಬಾಸ್ ಸಅದಿ ಮುದರ್ರಿಸ್ ಡೆಮ್ಮoಗರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಛೇರಿ ಹಾಗೂ ಕಂಪ್ಯೂಟರ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮವನ್ನು ಬಹು | ಅನ್ವರ್ ತಂಗಳ್…

Read More

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ. ಸಾಧ್ಯವಾದಲ್ಲಿ ನಾನೂ ಕಾರ್ಯಕ್ರಮಕ್ಕೆ ಬರುವೆʼʼ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ಹುಬ್ಬಳ್ಳಿಯಲ್ಲಿ ಮತ್ತೆ ಲವ್ ಜಿಹಾದ್.ಹಿಂದೂ ಸಂಘಟನೆಗಳ ಗಂಭೀರ ಆರೋಪ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.ಸಮೀರ್ ಎಂಬಾತನಿಂದ ಹಿಂದೂ ಯುವತಿಗೆ ಲವ್ ಜಿಹಾದ್ ಬಲೆ ಬೀಸಲಾಗಿತ್ತು ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿವೆ.ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಅಲ್ಲಿಯೇ ಧರಣಿ ಕುಳಿತರು. ಆರೋಪಿ ಸಮೀರ್ ಗಾಂಜಾ ವ್ಯಸನಿಯಾಗಿದ್ದಾನೆ ಎಂದ‌ ಸಂಘಟನೆ ಕಾರ್ಯಕರ್ತರು ಆತನನ್ನು ಬಂಧಿಸಲು ಆಗ್ರಹಿಸಿದರು.ಸಮೀರ್ ನ ಮೊಬೈಲ್ ವಶಕ್ಕೆ ಪಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆ ಮೊಬೈಲ್ ನಲ್ಲಿ ಗಾಂಜಾ, ಮಾದಕ ವಸ್ತುಗಳ…

Read More

ಕುಂದಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ.ಶಾರದಾ ಅವರು ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್…

Read More

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾದರ್ ಮೆಲ್ವಿನ್ ಪಿಂಟೋ ನಿಧನ

ಮಂಗಳೂರು: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾದರ್ ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ಶಿಕ್ಷಣ ಕ್ಷೇತ್ರಕ್ಕೆ ತುಂಬಾ ದುಃಖಕರವಾಗಿದೆ ಎಂದು ಮಾಜಿ ಸಚಿವ ಬಿ. ರಾಮನಾಥ ರೈ ತಿಳಿಸಿದ್ದಾರೆ. ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಸ್ಮರಿಸಿದ ರಾಮನಾಥ ರೈ, ಅವರ ಅಗಲಿಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಫಾ. ಮೆಲ್ವಿನ್ ಪಿಂಟೋ ಅವರ ಆತ್ಮೀಯತೆ, ಸರಳತೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಪ್ರೀತಿ ಎಂದಿಗೂ ಮರೆಯಲಾಗದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅನೇಕ…

Read More

ಎ.15ರಿಂದ 18ರವರೆಗೆ ‘ರಂಗೋತ್ಸವ-2026’ ಮಕ್ಕಳ ಬೇಸಿಗೆ ಶಿಬಿರ – ಮರಕಡದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಹಬ್ಬ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಂಗ ಸ್ವರೂಪ ಕುಂಜತ್ತಬೈಲ್,ಮಂಗಳೂರು ಇದರ ಆಶ್ರಯದಲ್ಲಿ ಎ. 15 ರಿಂದ 18 ರ ವರೆಗೆ ‘ರಂಗೋತ್ಸವ-2026’ ಮಕ್ಕಳ ಬೇಸಿಗೆ ಶಿಬಿರವು ಮರಕಡ ದ.ಕ. ಜಿ.ಪಂ. ಮಾ. ಹಿ. ಪ್ರಾ. ಶಾಲೆಯಲ್ಲಿ ನಡೆಯಲಿದೆ.ಪ್ರಶಸ್ತಿ ವಿಜೇತ ಕ್ರಿಯಾಶೀಲ ಶಿಕ್ಷಕ ಚೇತನ್ ಕೊಪ್ಪ ಶಿಬಿರ ಉದ್ಘಾಟಿಸಲಿರುವರು. ಈ ವಿಶಿಷ್ಟ ಶಿಬಿರದಲ್ಲಿ ಮಕ್ಕಳಿಗಾಗಿ ಗೋಡೆ ಪತ್ರಿಕೆ, ಕ್ರಿಯಾತ್ಮಕ ಚಿತ್ರಕಲೆ, ಹಾಡು, ರೇಖಾ ಚಿತ್ರ, ಮುಖವಾಡ ತಯಾರಿ, ನಾಟಕ, ಗೂಡುದೀಪ, ಗಾಳಿಪಟ, ಕ್ರಿಯಾತ್ಮಕ ಬರೆವಣಿಗೆ, ಕೊಲಾಜ್, ಮಿಮಿಕ್ರಿ, ಮೂಕಾಭಿನಯ,…

Read More

ವೇದಿಕೆಯಲ್ಲಿ ಕುಸಿದು ಯುವ ನಿರೂಪಕ ಸಾವು – ಬಂಟ್ವಾಳದಲ್ಲಿ ದುರ್ಘಟನೆ

ಬಂಟ್ವಾಳ: ಯುವ ನಿರೂಪಕನೋರ್ವ ಮದರಂಗಿ‌ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾನೆ.ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದುದ್ದಾಗಿದೆಯಾದರೂ ಅದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.ಬಂಟ್ವಾಳ…

Read More
error: Content is protected !!