ಹಿಂದೂ ಸಂಘಟನೆ ಕಾರ್ಯಕರ್ತ ಯತೀಶ್ ಪೆರುವಾಯಿಗೆ ಗಡಿಪಾರು ನೋಟಿಸ್; ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ

ವಿಟ್ಲ ಎಸ್‌ಐ ಅರ್ಜಿ ಆಧಾರದಲ್ಲಿ ಎಸ್ಪಿಯಿಂದ ಕಾರಣ ಕೇಳಿ ನೋಟಿಸ್; ರಾಜಕೀಯ ವಾಗ್ವಾದ ತೀವ್ರ ಬಂಟ್ವಾಳ, ಜು. 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಹಿಂದೂ ಸಂಘಟನೆ ಕಾರ್ಯಕರ್ತ ಯತೀಶ್ ಪೆರುವಾಯಿ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು (ಡಿಪೋರ್ಟ್) ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ವಿಟ್ಲ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಜಿಲ್ಲಾ ಎಸ್ಪಿ ಅರುಣ್ ಕೆ. ಈ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ….

Read More

ಉಡುಪಿಯ ಹಳೆಯ ಜಿಲ್ಲಾಧಿಕಾರಿ ಕಚೇರಿ ಪಾಳು; ಸರ್ಕಾರಿ ಆಸ್ತಿ ಸಂರಕ್ಷಣೆಗೆ ಸಾರ್ವಜನಿಕರ ಆಗ್ರಹ

ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡ ಕಟ್ಟಡ; ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವ ಆರೋಪ ಉಡುಪಿ, ಜು. 2: ಉಡುಪಿ ನಗರದ ಬನ್ನಂಜೆಯಲ್ಲಿರುವ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡು ಪಾಳು ಬಿದ್ದಿದ್ದು, ಸರ್ಕಾರದ ಅಮೂಲ್ಯ ಆಸ್ತಿಯ ದುಸ್ಥಿತಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ವರ್ಷಗಳಿಂದ ಬಳಕೆಯಿಲ್ಲದೆ ಉಳಿದಿರುವ ಈ ಕಟ್ಟಡ ಇದೀಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಒಂದೊಮ್ಮೆ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ಹಲವು ಪ್ರಮುಖ ಸರ್ಕಾರಿ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದ…

Read More

ಕೆರೆಬೈಲ್‌ನಲ್ಲಿ ಎಸ್ಟೇಟ್ ಆವರಣ ಗೋಡೆ ಕುಸಿದು ಮನೆ ನೆಲಸಮ; ಕುಟುಂಬ ಮೊದಲೇ ಸ್ಥಳಾಂತರಗೊಂಡಿದ್ದರಿಂದ ಭಾರೀ ದುರಂತ ತಪ್ಪಿತು

ನಿರಂತರ ಮಳೆಗೆ ಗೋಡೆ ಕುಸಿತ; ಅಪಾಯದ ವಲಯದಲ್ಲಿರುವ ಇತರ ಮನೆಗಳಿಗೂ ಭೀತಿ ಮಂಗಳೂರು, ಜು. 2: ಕರಾವಳಿಯಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಸಮೀಪದ ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಬೃಹತ್ ಆವರಣ ಗೋಡೆ ಕುಸಿದು ಪಕ್ಕದಲ್ಲಿದ್ದ ಮನೆ ಸಂಪೂರ್ಣ ನೆಲಸಮಗೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಾಯದ ಮುನ್ಸೂಚನೆ ಅರಿತು ಎರಡು ವಾರಗಳ ಹಿಂದೆಯೇ ಕುಟುಂಬ ಸ್ಥಳಾಂತರಗೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಕೆರೆಬೈಲ್ ಗುಡ್ಡೆಯ ನಿವಾಸಿ ಕಿಶೋರ್ ಅವರ ಮನೆ ಗೋಡೆ ಕುಸಿತದ ಹೊಡೆತಕ್ಕೆ ಸಂಪೂರ್ಣ…

Read More

ಪ್ರೇಮ ಪ್ರಕರಣ: ಮಧ್ಯಸ್ಥಿಕೆ ಕೇಂದ್ರದಲ್ಲಿ ಸಂತ್ರಸ್ತೆ-ಆರೋಪಿ ಪರ ಹೇಳಿಕೆ ದಾಖಲು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ, ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಗೊಳಿಸುವ ಸಂಬಂಧ ರಾಜ್ಯ ಹೈಕೋರ್ಟ್ ಸೂಚನೆಯಂತೆ ಎರಡೂ ಕಡೆಯವರು ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಮಧ್ಯಸ್ಥಿಕೆ ಕೇಂದ್ರದಲ್ಲಿ ಸಂತ್ರಸ್ತೆ ಹಾಗೂ ಆಕೆಯ ತಾಯಿ ನಮಿತಾ, ಮತ್ತೊಂದೆಡೆ ಆರೋಪಿಯ ತಂದೆ ಪಿ.ಜಿ. ಜಗನ್ನಿವಾಸ ರಾವ್ ಮತ್ತು ಸಂಬಂಧಿಕರೊಬ್ಬರು ನೇರವಾಗಿ ಹಾಜರಾಗಿದ್ದರು. ಆರೋಪಿ ಕೃಷ್ಣ ಜೆ….

Read More

ದಕ್ಷಿಣ ಕನ್ನಡದಲ್ಲಿ ಮತ್ತೆ ಮಳೆಯ ಅಬ್ಬರ; ನಾಗುರಿ ದುರಂತದ ಬಳಿಕ ಜಿಲ್ಲಾಡಳಿತ ಹೈ ಅಲರ್ಟ್

ಮಧ್ಯಾಹ್ನದ ಬಳಿಕ ಧಾರಾಕಾರ ಮಳೆ; ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತ ಮಂಗಳೂರು, ಜು. 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಿದ್ದು, ಮಧ್ಯಾಹ್ನದ ಬಳಿಕ ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆ ಮಳೆ ಪ್ರಮಾಣ ಕಡಿಮೆಯಾಗಿದ್ದರೂ, ನಂತರ ಸುರಿದ ನಿರಂತರ ಮಳೆಯಿಂದ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನದ ಮೇಲೆ ಪರಿಣಾಮ ಬೀರಿದೆ. ನಿನ್ನೆ ಮಂಗಳೂರಿನ ನಾಗುರಿಯಲ್ಲಿ ಮನೆ ಮೇಲಕ್ಕೆ ಕಾಂಪೌಂಡ್ ಗೋಡೆ ಕುಸಿದು ಮೂವರು…

Read More

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಬೆಳ್ತಂಗಡಿ, ಜು. 2: ಸುಮಾರು ಒಂಬತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂದು ಗುರುತಿಸಲಾಗಿದೆ. ಈತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ (ಅಪರಾಧ ಸಂಖ್ಯೆ 169/2016) ಭಾರತೀಯ ದಂಡ ಸಂಹಿತೆಯ ಕಲಂ 379 (ಕಳ್ಳತನ) ಹಾಗೂ 201 (ಸಾಕ್ಷ್ಯ ನಾಶ) ಪ್ರಕರಣದಲ್ಲಿ ಆರೋಪಿಯಾಗಿದ್ದ. ಪ್ರಕರಣ ದಾಖಲಾದ ಬಳಿಕ ಸುಮಾರು ಒಂಬತ್ತು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ…

Read More

ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕುರಿತು ಸರ್ಕಾರ ಸ್ಪಷ್ಟನೆ ನೀಡಲಿ: ವಿವೇಕಾನಂದ ಸಾಲಿನ್ಸ್

ಮಂಗಳೂರು: ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಖಾಸಗಿ ವೈದ್ಯಕೀಯ ಕಾಲೇಜುಗಳ ನಿರ್ವಹಣೆಗೆ ನೀಡುವ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣದ ಕುರಿತು ಸರ್ಕಾರ ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಒಪ್ಪಂದ (ಎಂಒಯು) ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆಯಾದರೂ, ಅದರ ವಿವರಗಳನ್ನು ಸಾರ್ವಜನಿಕ ವಲಯದಲ್ಲಿ ಪ್ರಕಟಿಸಿಲ್ಲ. ಯಾವ ಆಸ್ಪತ್ರೆಗಳು ಹಸ್ತಾಂತರವಾಗಲಿವೆ, ಬಡವರಿಗೆ ಸಿಗುವ ಸೇವೆಗಳೇನು ಹಾಗೂ ಸರ್ಕಾರದ ಷರತ್ತುಗಳೇನು…

Read More

ತೊಕ್ಕೊಟ್ಟಿನಲ್ಲಿ ಏಕದಿನ ಸಾಹಿತ್ಯ ಅಭಿಯಾನ; 65ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ರಸಪ್ರಶ್ನೆಯಲ್ಲಿ ಭಾಗಿ

‘ಕನ್ನಡದ ನಡಿಗೆ… ಮಕ್ಕಳ ಕಡೆಗೆ’ ಕಾರ್ಯಕ್ರಮದಲ್ಲಿ ಸಾಹಿತ್ಯ, ಧರ್ಮ ಶಿಕ್ಷಣದ ಮಹತ್ವದ ಕುರಿತು ಅರಿವು ಮಂಗಳೂರು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ತೊಕ್ಕೊಟ್ಟಿನ ಶ್ರೀ ನಾಗ ಕನ್ನಿಕಾ ರಕ್ತೇಶ್ವರಿ ದೈವ ಸ್ಥಾನ ಅಂಬಾವನ ಧರ್ಮ ಶಿಕ್ಷಣ ಕೇಂದ್ರದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ… ಮಕ್ಕಳ ಕಡೆಗೆ’ ಹಾಗೂ ಧರ್ಮ ಶಿಕ್ಷಣ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ…

Read More

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ

ಘಟನಾ ಸ್ಥಳಕ್ಕೆ ಸಂಸದರ ಭೇಟಿ; ಸಂತ್ರಸ್ತರಿಗೆ ತಕ್ಷಣ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ…

Read More

ತಡೆಗೋಡೆ ದುರಂತ ಸಂತ್ರಸ್ತರಿಗೆ ₹5 ಲಕ್ಷ ಪರಿಹಾರ ಚೆಕ್ ವಿತರಣೆ

ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಚಿವ ಯು.ಟಿ. ಖಾದರ್ ಮಂಗಳೂರು: ತಡೆಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ ₹5 ಲಕ್ಷ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು. ಪರಿಹಾರ ವಿತರಣೆಯ ವೇಳೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಸೇರಿದಂತೆ…

Read More
error: Content is protected !!