ಪೈಪ್ ಒಡೆದು ನಗರ ಜಲಾವೃತ: ಬಿಸಿರೋಡು ರಸ್ತೆಯಲ್ಲಿ ಸಂಚಾರ ಸಂಕಷ್ಟ

ಬಂಟ್ವಾಳ: ಕಂಪೆನಿಯೊಂದರ ಕಾಮಗಾರಿ ನಡೆಸುವ ವೇಳೆ ಕುಡಿಯುವ ನೀರಿನ ಪೈಪ್ ಗೆ ಹಾನಿಯಾಗಿ ಬಿಸಿರೋಡು ನಗರದ ರಾಷ್ಟ್ರೀಯ ಹೆದ್ದಾರಿ ಸಹಿತ ಅಂಗಡಿ ಬಾಗಿಲುಗಳಲ್ಲಿ ಕೆಸರು ಮಿಶ್ರಿತ ನೀರು ಶೇಖರಣೆಯಾಗಿದೆ. ಶನಿವಾರ ಬೆಳ್ಳಂಬೆಳಗ್ಗೆ ಬಿ.ಸಿ.ರೋಡಿನ ಮೂಲಕ ಸಂಚರಿಸುವವರು ಇಲ್ಲೇನು ಮಳೆ ಬಂದಿದೆಯೇ ಅಂದುಕೊಂಡಿರಬಹುದು. ಬಿಸಿರೋಡು ನಗರ ಸುತ್ತಲೂ ಕೃತಕ ನೆರೆಯಂತಾಗಿದ್ದು, ಪಾದಾಚಾರಿಗಳು ನಡೆದಾಡಲೂ ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ಬಿ.ಸಿ.ರೋಡಿನ ಫ್ಲೈಓವರ್ ನ ಮುಂಭಾಗ ಧಾರಾಳವಾಗಿ ನೀರು ರಸ್ತೆಯ ಮೇಲೆ ಹರಿದುಹೋಗುತ್ತಿದ್ದು, ವಾಹನ ಸವಾರರ ಚಕ್ರವೆಲ್ಲಾ ತೊಳೆದುಹೋಗುವಂತೆ ನೀರು ರಸ್ತೆಯಲ್ಲಿದೆ….

Read More

ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಂಕ್ರೀಟೀಕರಣಕ್ಕೆ ಭೂಮಿ ಪೂಜೆ – ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33 ನೇ ಕದ್ರಿ ದಕ್ಷಿಣ ವಾರ್ಡಿನ ಮೈದಾನದಿಂದ ಕದ್ರಿ ಕಂಬಳ ಜಂಕ್ಷನ್ ವರೆಗಿನ ರಸ್ತೆಯು ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಹಲವು ಸಮಯದ ಬೇಡಿಕೆಯಾಗಿದ್ದು ಪ್ರತಿವರ್ಷ ಮಳೆಗಾಲದ ಸಂದರ್ಭದಲ್ಲಿ ಇಡೀ ರಸ್ತೆ ಹಾಳಾಗಿ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಹಾಗಾಗಿ ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯಲ್ಲಿ ಈ ಕಾಮಗಾರಿಗೆ ವಿಶೇಷ ಅನುದಾನವನ್ನು…

Read More

ಕೃತಕ ಬುದ್ಧಿಮತ್ತೆ ವೈದ್ಯಕೀಯ ಕ್ಷೇತ್ರಕ್ಕೆ ಸವಾಲು: ಡಾ. ಶರಣ್ ಪ್ರಕಾಶ ಪಾಟೀಲ್

ಮಂಗಳೂರು:ಆಧುನಿಕ ಯುಗದಲ್ಲಿ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರಮುಖ ಸ್ಥಾನ ಪಡೆದಿದ್ದು, ಇದು ವೈದ್ಯಕೀಯ ಕ್ಷೇತ್ರಕ್ಕೆ ಸ್ಪರ್ಧಾತ್ಮಕ ಸವಾಲಾಗಿ ಹೊರಹೊಮ್ಮುತ್ತಿದೆ ಎಂದು ಸಚಿವ Dr. Sharan Prakash Patil ಅಭಿಪ್ರಾಯಪಟ್ಟರು. ನಗರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ವೈದ್ಯಕೀಯ ಸೇವೆಯ ಸ್ವರೂಪವನ್ನೇ ಬದಲಾಯಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ವೈದ್ಯ ವೃತ್ತಿಯಲ್ಲಿ ಮಾನವೀಯತೆ ಮತ್ತು ನೈತಿಕ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

ಕುಂದಾಪುರ: ಕೋಡಿ ಬೀಚ್‌ನಲ್ಲಿ ಸಮುದ್ರಕ್ಕೆ ಬಿದ್ದ ಡ್ರೋನ್- ಡ್ರೋನ್ ಕ್ಯಾಮೆರಾ ಪತ್ತೆಹಚ್ಚಿದ ಮುಳುಗು ತಜ್ಞ ದಿನೇಶ್ ಖಾರ್ವಿ

ಉಡುಪಿ: ಕುಂದಾಪುರ ಕೋಡಿ ಬೀಚ್‌ನಲ್ಲಿ ಡ್ರೋನ್ ಕ್ಯಾಮರಾ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವೀಡಿಯೊ ಚಿತ್ರೀಕರಣಕ್ಕಾಗಿ ಡ್ರೋನ್ ಹಾರಿಸುತ್ತಿದ್ದ ವೇಳೆ ಅಚಾನಕ್ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದು, ತಕ್ಷಣವೇ ಡ್ರೋನ್ ಮಾಲೀಕರು ಮುಳುಗು ತಜ್ಞ ದಿನೇಶ್ ಖಾರ್ವಿಯನ್ನು ಸಂಪರ್ಕಿಸಿದ್ದಾರೆ ಆ ಸಂದರ್ಭದಲ್ಲಿ ದಿನೇಶ್ ಖಾರ್ವಿ ಅವರು ಮುರುಡೇಶ್ವರದಲ್ಲಿ ಕೆಲಸದ ನಿಮಿತ್ತ ಇದ್ದರೂ, ಘಟನೆಯ ತುರ್ತು ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ಕುಂದಾಪುರಕ್ಕೆ ಆಗಮಿಸಿ, ಡ್ರೋನ್ ಬಿದ್ದಿರುವ ಸ್ಥಳದ ಮಾಹಿತಿ ಸಂಗ್ರಹಿಸಿ ಸಮುದ್ರಕ್ಕೆ ಇಳಿದು ಶೋಧ ಕಾರ್ಯ…

Read More

ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲರು

ದಕ್ಷಿಣ ಕನ್ನಡ ಜಿಲ್ಲೆ: “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದತ್ತ ನೋಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರ, ಹನುಮಾನಗಿರಿ ದೇವಸ್ಥಾನದ ಗೋಪುರ ಮತ್ತು ಮಂಟಪದ ಉದ್ಘಾಟನೆ ಮತ್ತು ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು….

Read More

“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ ಮುಟ್ಟುವ ಕೆಲಸ…

Read More

ಡ್ರೋನ್ ತರಬೇತಿ ಅಕಾಡೆಮಿ ಉದ್ಘಾಟನೆ – ಭವಿಷ್ಯದ ವಿಮಾನಯಾನ ತಜ್ಞರ ತಯಾರಿ : ಕ್ಯಾ.ಸುಧೀರ್ ಅಮೀನ್

ಮಂಗಳೂರು: ಮೂಡಬಿದ್ರೆಯ ಅಳ್ವಾಸ್ ಕಾಲೇಜು ಮೂಡಬಿದ್ರೆ ಆವರಣದಲ್ಲಿ, ವಿಮಾನಯಾನ ಹಾಗೂ ತಂತ್ರಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಏರೋಡೈನಾಮಿಕ್ಸ್ ಡ್ರೋನ್ ತರಬೇತಿ ಅಕಾಡೆಮಿಯು ಏಪ್ರಿಲ್ 14ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಕ್ಯಾ.ಸುಧೀರ್ ಅಮೀನ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಅಕಾಡೆಮಿಯು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಶನ್ (DGCA) ಮಾನ್ಯತೆ ಪಡೆದ ಅತ್ಯಾಧುನಿಕ ರಿಮೋಟ್ ಪೈಲಟ್ ತರಬೇತಿ ಸಂಸ್ಥೆಯಾಗಿದ್ದು, ಡ್ರೋನ್ ಕಾರ್ಯಾಚರಣೆ,…

Read More

ಆರ್‌ಎಸ್‌ಎಸ್ ವಿರುದ್ಧ ಖರ್ಗೆ ಹೇಳಿಕೆಗೆ ಕಿಡಿ – ಹಿಂದೂ ಸಮಾಜಕ್ಕೆ ಅವಮಾನ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ ಆರ್‌ಎಸ್‌ಎಸ್. ಈ ಸಂಘಟನೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಡಿರುವ ಮಾತು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು. ಉಡುಪಿಯಲ್ಲಿ‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖರ್ಗೆಯವರ ಹಿರಿತನವನ್ನು ನಾವು ಗೌರವಿಸುತ್ತೇವೆ. ನಿನ್ನೆ ಅವರು ಆಡಿರುವ ಮಾತು ಸರಿಯಲ್ಲ. ಆರ್‌ಎಸ್‌ಎಸ್ ಬಗ್ಗೆ ಅತ್ಯಂತ ಕೀಳುಮಟ್ಟದ ಮಾತನಾಡಿದ್ದಾರೆ. ಆರ್‌ಎಸ್‌ಎಸ್ ಅನ್ನು ಕೊಲ್ಲಬೇಕು ಎಂದಿದ್ದಾರೆ. ಇಡೀ ಭಾರತದಲ್ಲಿ ಹಿಂದೂಗಳ ಪರ ಧ್ವನಿ ಎತ್ತಬಲ್ಲ ಸಂಘಟನೆ ಆರ್‌ಎಸ್‌ಎಸ್. ಸಮಾಜದ ಎಲ್ಲರನ್ನೂ…

Read More

ಕಾರ್ಕಳ ಪುರಸಭೆಯಲ್ಲಿ ಆರ್‌ಟಿಐ ಗೊಂದಲ – ಮಾಹಿತಿ ಸಿಗದೆ ಕಛೇರಿಯಲ್ಲೇ ಪ್ರತಿಭಟನೆ

ಉಡುಪಿ: ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಅಂಬಾಭವಾನಿ ದೇವಸ್ಥಾನ ರಸ್ತೆಗೆ ಪುರಸಭಾ ವತಿಯಿಂದ 2011 – 2012…

Read More

ಶ್ರೀರಾಮ–ಹನುಮ ಜ್ಯೋತಿ ಗ್ರಾಮದರ್ಶನ ಪೂರ್ಣ – ಹನುಮಗಿರಿಗೆ ಅದ್ಧೂರಿ ರಥಯಾತ್ರೆ

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು. ಪಂಚಲಿಂಗೇಶ್ವರ ದೇವಳದ ಬಳಿಯಿಂದ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಗೆ ರಥಯಾತ್ರೆಗೆ ಚಾಲನೆ ನೀಡಲಾಯಿತು. ದೇವಳದ ಪವಿತ್ರಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಅವರು ತೆಂಗಿನಕಾಯಿ ಒಡೆಯುವ ಮೂಲಕ ರಥಯಾತ್ರೆ ಆರಂಭಿಸಿದರು.ಈಶ್ವರಮಂಗಲದ ಉನ್ನಿಕೃಷ್ಣನ್ ವೃತ್ತದಿಂದ ಆರಂಭವಾದ ಮೆರವಣಿಗೆಯಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ…

Read More
error: Content is protected !!