ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನ
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿರುವ ಘಟನೆ ಬಿಸಿರೋಡು ಸಮೀಪದ ಪಾಣೆಮಂಗಳೂರು ಪ್ರದೇಶದಲ್ಲಿ ನಡೆದಿದೆ. ಗೂಡಿನ ಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಪಾಣೆಮಂಗಳೂರು ನೂತನ ಸೇತುವೆಯ ಕೆಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ನಡೆಸುತ್ತಿದ್ದ ವೇಳೆ ನದಿಯಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ ಬಂಟ್ವಾಳ ನಗರ…