ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ, ಶಾಶ್ವತ ಪುನರ್ವಸತಿಗೆ ಎಸ್ಡಿಟಿಯು ಆಗ್ರಹ
ಮಂಗಳೂರು, ಜು. 1: ನಗರದ ಗರೋಡಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಎಸ್ಡಿಟಿಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದರೊಂದಿಗೆ, ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡ ಕುಟುಂಬಗಳಿಗೆ ಶಾಶ್ವತ…
