ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ಎ.12ರಂದು

ಮಂಗಳೂರು: ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕಕಲ್ಯಾಣಾರ್ಥವಾಗಿ 6ನೇ ವರ್ಷದ ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆಯನ್ನು ಏಪ್ರಿಲ್ 12ರಂದು, ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ತಿಳಿಸಿದೆ. ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರ್ ಕೊರಗಜ್ಜನ ಆದಿಕ್ಷೇತ್ರದವರೆಗೆ ಈ ಪಾದಯಾತ್ರೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಾದಯಾತ್ರೆಯ ಮೂಲಕ ಜನರಲ್ಲಿ ಆಸ್ತಿಕತೆಯನ್ನು ಬೆಳೆಸುವ ಹಾಗೂ ಧಾರ್ಮಿಕ ಚಿಂತನೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸಾಮೂಹಿಕ ಪ್ರಾರ್ಥನೆ ಮತ್ತು…

Read More

ಡೀಸೆಲ್ ಕೊರತೆ: ಮೀನುಗಾರರಿಂದ ಆಕ್ರೋಶ

ಮೀನುಗಾರಿಕಾ ಧಕ್ಕೆಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಪ್ರಾಥಮಿಕ ಮೀನುಗಾರರ ಸಂಘದ ಪೆಟ್ರೋಲ್ ಪಂಪ್‌ನಲ್ಲಿ ಮೀನುಗಾರಿಕಾ ದೋಣಿಗಳಿಗೆ ಸಮರ್ಪಕವಾಗಿ ಡೀಸೆಲ್ ಪೂರೈಕೆಯಾಗದೆ ತೊಂದರೆ ಉಂಟಾಗಿರುವ ಬಗ್ಗೆ ಬೋಟ್ ಮಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಕನ್ ವ್ಯವಸ್ಥೆಯಡಿ ನಿಯಮಿತವಾಗಿ ಡೀಸೆಲ್ ಪೂರೈಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಾಲ್ ಬೋಟ್ ಮಾಲಕರ ಸಂಘದ ಕೋಶಾಧಿಕಾರಿ ಅಬೂಬಕರ್ ಅಶ್ರಫ್, ಸಂಘದಡಿ ಸುಮಾರು 500 ಮೀನುಗಾರಿಕಾ ದೋಣಿಗಳು ಕಾರ್ಯನಿರ್ವಹಿಸುತ್ತಿವೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ತೈಲ…

Read More

ಅಹ್ಲೆ ಹದೀಸ್ ಸಮ್ಮೇಳನ ಎ.18–19ರಂದು ಮಂಗಳೂರಿನಲ್ಲಿ

ಜಮೀಯತೇ ಅಹ್ಲೆ ಹದೀಸ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಎ. 18 ಮತ್ತು 19ರಂದು ಅಹ್ಲೆ ಹದೀಸ್ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಲಾಂ ಕಾಟಿಪಳ್ಳ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎ.18ರಂದು ಬೆಳಗ್ಗೆ 10 ಗಂಟೆಗೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ ಎಂದರು. ಅಖಿಲ ಭಾರತ ಜಮೀಯತೇ ಅಹ್ಲೆ ಹದೀಸ್ ಅಧ್ಯಕ್ಷ ಅಸ್ಗರ್ ಅಲಿ ಇನಾಮ್ ಮೆಹ್ಡಿ ಮಾರ್ಗದರ್ಶನದಲ್ಲಿ, ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್‌ ವಹಾಬ್…

Read More

ಮಂಗಳೂರಿನಲ್ಲಿ ‘ಚಾಕೊಲೇಟ್ ಸ್ಟ್ರೀಟ್’ 7ನೇ ಆವೃತ್ತಿ ಎ.11–12ರಂದು

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯು (ನಿಕೋ) ವತಿಯಿಂದ ಕ್ಯಾಂಪ್ಕೋ ಸಹಯೋಗದಲ್ಲಿ ಮಂಗಳೂರಿನ ಅತಿದೊಡ್ಡ ಚಾಕೊಲೇಟ್ ಹಬ್ಬ ‘ಚಾಕೊಲೇಟ್ ಸ್ಟ್ರೀಟ್’ನ 7ನೇ ಆವೃತ್ತಿ ಎ.11 ಮತ್ತು 12 ರಂದು ನಗರದ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆಯೋಜಿಸಲಿದೆ ಎಂದು ನಿಟ್ಟೆ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಮುಖ್ಯಸ್ಥೆ ಡಾ. ಮೌಲ್ಯ ಬಾಲಾಡಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸೊಲ್ಮೆಲು ಚಾಕೊಲೇಟ್ ಸಂಸ್ಥೆಯ ಸ್ಥಾಪಕ ಮಯೂರ್…

Read More

ಸೌಹಾರ್ದದ ಸಂಕೇತ: ಕಟ್ಟತ್ತಿಲ ದರ್ಗಾ–ಕಟ್ಟತ್ತಿಲ ಮಠ ಸಂಪರ್ಕ ರಸ್ತೆ ಡಾಮರೀಕರಣಕ್ಕೆ ನಾಗರಿಕರ ಮೆಚ್ಚುಗೆ

ಕೊಳ್ನಾಡು: ಇತಿಹಾಸ ಪ್ರಸಿದ್ದ ಮುಸ್ಲಿಂ ದಾರ್ಮಿಕ ಕೇಂದ್ರವಾದ ಕಟ್ಟತ್ತಿಲ ದರ್ಗಾ ಹಾಗೂ ಹಿಂದೂ ದಾರ್ಮಿಕ ಕೇಂದ್ರ ಕಟ್ಟತ್ತಿಲ ಮಠವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಡಾಮರೀಕರಣ ಕಾರ್ಯ ಪೂರ್ಣಗೊಂಡಿದ್ದು, ವಿಶೇಷವಾಗಿ ಕಟ್ಟತ್ತಿಲ ಊರೂಸು ಸಮಾರಂಭದ ಸಂಧರ್ಭದಲ್ಲಿ ನಾಗರಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಎರಡು ಸಮುದಾಯಗಳ ಸೌಹಾರ್ದತೆಯ ಸಂಕೇತವಾಗಿ ಗುರುತಿಸಿಕೊಂಡಿರುವ ಈ ರಸ್ತೆ ಇದೀಗ ಸುಧಾರಿತ ರೂಪ ಪಡೆದುಕೊಂಡಿರುವುದು ಸ್ಥಳೀಯರಿಗೆ ಸಂತೋಷ ತಂದಿದೆ. ಈ ರಸ್ತೆಯ ಇತಿಹಾಸವನ್ನು ನೆನಪಿಸಿಕೊಂಡರೆ, ಹಲವಾರು ವರ್ಷಗಳ ಹಿಂದೆ ಕೊಳ್ನಾಡು ಗ್ರಾಮ ಪಂಚಾಯತ್‌ನ ಸುದೀರ್ಘ ಅವಧಿಯ…

Read More

ದ್ವಿತೀಯ ಪಿಯುಸಿ ಫಲಿತಾಂಶ: ಫಾತಿಮಾ ಶಝಗೆ 553 ಅಂಕಗಳೊಂದಿಗೆ ಡಿಸ್ಟಿಂಕ್ಷನ್

ಪುತ್ತೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರಿನ ವಿದ್ಯಾರ್ಥಿನಿ ಫಾತಿಮಾ ಶಝ ಗಮನಾರ್ಹ ಸಾಧನೆ ಮಾಡಿದ್ದಾರೆ. ಸಂತ ಫಿಲೋಮಿನ ಕಾಲೇಜು (St Philomena College) ಪುತ್ತೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅವರು ವಾಣಿಜ್ಯ ವಿಭಾಗದಲ್ಲಿ 553 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಮುಹ್ಯಿದ್ದೀನ್ ಜುಮಾ ಮಸೀದಿ ಸಂಪ್ಯ ಜಮಾತ್‌ಗೆ ಒಳಪಟ್ಟ ಬಶೀರ್ ಪರ್ಲಡ್ಕ ಹಾಗೂ ತಾಹಿರ ದಂಪತಿಗಳ ಪುತ್ರಿಯಾಗಿರುವ ಫಾತಿಮಾ ಶಝ ಅವರ ಈ ಸಾಧನೆಗೆ ಕುಟುಂಬದವರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ….

Read More

ಏಪ್ರಿಲ್ 12ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಇದೇ ಏಪ್ರಿಲ್ 12, ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಪುರಭವನದಲ್ಲಿ (ಟೌನ್ ಹಾಲ್) ಬಹಿರಂಗ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ತಿಳಿಸಿದರು. ನಗರದ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಐಕ್ಯತೆ…

Read More

ಡಾ. ಬಾಲಕೃಷ್ಣ ಎಸ್. ಮದ್ದೋಡಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026”

ಭಾರತ ಸರ್ಕಾರದಿಂದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿ ಸದಸ್ಯ, ಖ್ಯಾತ ಪರಿಸರ ವಿಜ್ಞಾನಿ, ಶಿಕ್ಷಣ ತಜ್ಞ ಮತ್ತು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಅವರಗೆ “ಉಡುಪಿ ಶ್ರೀಮಠದ ಕೃಷ್ಣಾನುಗ್ರಹ ಪ್ರಶಸ್ತಿ 2026” ಪರ್ಯಾಯ ಶಿರೂರು ಮಠ, ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ, ಕಥಾಬಿಂದು ಸಾಹಿತ್ಯ ವೇದಿಕೆ (ರಿ.)ರೂವಾರಿ ಪಿ. ವಿ. ಪ್ರದೀಪ್ ಕುಮಾರ್ ಸಾರತ್ಯದಲ್ಲಿ ಇದೇ ಬರುವ…

Read More

ಎನ್‌ಎಸ್‌ಯುಐ 56ನೇ ಸಂಸ್ಥಾಪನಾ ದಿನ: ಮಲ್ಲಿಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ NSUI ನ 56ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ “ಧ್ವಜಾರೋಹಣ” ಕಾರ್ಯಕ್ರಮ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ NSUI ವಿದ್ಯಾರ್ಥಿ ಸಂಘಟನೆಯ ಹೋರಾಟ, ಇತಿಹಾಸ, ಸಂಘಟನೆಯ ಕಾರ್ಯಕರ್ತರು ಸಾಮಾಜಿಕ ನ್ಯಾಯ, ಸಮಾನತೆ, ಸತ್ಯದಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡು ದೇಶಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ…

Read More

ಹಬ್ಬದ ದಟ್ಟಣೆ ಕಡಿಸಲು ರೈಲುಗಳಿಗೆ ಹೆಚ್ಚುವರಿ ಬೋಗಿಗಳು

ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.ಎ.10 ಮತ್ತು 11 ರಂದು ಚೆನ್ನೈನಿಂದ ಹೊರಡುವ ಚೆನ್ನೈ ಎಗ್ಮೋರ್ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16159 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.ಎ. 12 ಮತ್ತು 13 ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್…

Read More
error: Content is protected !!