ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ: ಗಾಯಾಳು ಲಿಂಗಪ್ಪ ಗೌಡರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಿಕಿತ್ಸೆಗೆ ನೆರವು ಭರವಸೆ
ಗಂಜಿಮಠ ಬಡಗುಳಿಪಾಡಿ ಗ್ರಾಮದ ಗಣೇಶನಗರದಲ್ಲಿ ಎಲ್ಪಿಜಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಯಜಮಾನ ಲಿಂಗಪ್ಪ ಗೌಡ (68) ಅವರಿಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಲಿಂಗಪ್ಪ ಗೌಡರ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ…
