ಸಾವಿರ ಸೀಮೆಯ ಒಡತಿ ಪೊಳಲಿ ಜಾತ್ರೆ: ಕೊಡಿ ಚೆಂಡಿನ ಉತ್ಸವಕ್ಕೆ ಭಕ್ತರ ಸಾಕ್ಷಿ

ಬಂಟ್ವಾಳ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವಸ್ಥಾನದ ಒಂದು ತಿಂಗಳ ಕಾಲದ ವಾರ್ಷಿಕ ಜಾತ್ರೆಯಲ್ಲಿ ಪುರಲ್ಲ ಚೆಂಡ್ ಎಂದೇ ಪ್ರಸಿದ್ದಿ ಪಡೆದಿರುವ 5 ದಿನಗಳ ಚೆಂಡಿನ ಉತ್ಸವ ವಿಶೇಷವಾಗಿದ್ದು, ಸಂಪ್ರದಾಯದಂತೆ ಎ.6 ರಂದು ಸೋಮವಾರ ಸಂಜೆ ಕೊಡಿ ಚೆಂಡಿನ (ಮೊದಲ ಚೆಂಡು) ಉತ್ಸವ ನಡೆಯಿತು. ಮೊದಲ ದಿನದ ಚೆಂಡಿನ ಉತ್ಸವದಲ್ಲಿ ದೇಗುಲದ ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿಯ ಮೊಕ್ತೇಸರರು ಹಾಗೂ ದೇವಳದ ಪ್ರಮುಖರು ಪಾಲ್ಗೊಂಡಿದ್ದು, ದೇವಿಯಲ್ಲಿ ಪ್ರಾರ್ಥಿಸಿ ಬಳಿಕ ಕೊಂಬು, ವಾದ್ಯ ಬಿರುದಾವಳಿಯೊಂದಿಗೆ…

Read More

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ವಸತಿ ಗೃಹ ವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ಬಂಧಿಸಲಾಗಿದೆ. 2026 ರ ಮಾ.21 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023…

Read More

ಪಾಲ್ತಾಜೆ ಪರಿಶಿಷ್ಟ ಜಾತಿ ಕಾಲೋನಿಗೆ ಕುಡಿಯುವ ನೀರಿನ ಯೋಜನೆ ಉದ್ಘಾಟನೆ

ಬಂಟ್ವಾಳ: ಪಾಲ್ತಾಜೆ ಸಾಲೆತ್ತೂರು ಮಾರಿಗುಡಿ ಬಳಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕೊಳವೆಬಾವಿ ಹಾಗೂ ವಿದ್ಯುತ್ ಸಂಪರ್ಕ ಸಹಿತ ಕಾಲೋನಿಗೆ ಕುಡಿಯುವ ನೀರಿನ ಯೋಜನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರಾದ ಮಾಧವ ಮಾವೆ ಪ್ರಾಸ್ತಾವಿಕ ಭಾಷಣ ಮಾಡಿದರು, ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ್ ಶೆಟ್ಟಿ ಮಲಾರಬೀಡು, ಆನಂದ ಪೂಜಾರಿ ಮಾವೆ , ಪ್ರಶಾಂತ್ ಶೆಟ್ಟಿ ಅಗರಿ, ಬೂತ್ ಸಮಿತಿ ಅಧ್ಯಕ್ಷೆ ಸುನೀತಾ ಯು ರೈ, ಕಾರ್ಯದರ್ಶಿ ಸಂದೇಶ್…

Read More

ಮಂಗಳೂರಿನಲ್ಲಿ ಏಪ್ರಿಲ್ 9ರಂದು “ಶ್ರೀರಾಮ್ ಸಾರಥಿ ಸಂಗಮ” — ಸಾರಿಗೆ ಕ್ಷೇತ್ರದ ಕಾರ್ಮಿಕರು, ಮಾಲಕರಿಗೆ ವಿಶೇಷ ಕಾರ್ಯಕ್ರಮ

ಮಂಗಳೂರು: ಸಾರಿಗೆ ಕ್ಷೇತ್ರದ ಕಾರ್ಮಿಕರು ಮತ್ತು ಮಾಲೀಕರಿಗಾಗಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಏಪ್ರಿಲ್ 9 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ “ಶ್ರೀರಾಮ್ ಸಾರಥಿ ಸಂಗಮ” ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಮಂಗಳೂರು ವಲಯದ ಅಧ್ಯಕ್ಷ ಶರಶ್ಚಂದ್ರ ಭಟ್ ಕಾಕುಂಜೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ ಪ್ರಮುಖ ಬ್ಯಾಂಡ್ ಗಳ ಹೊಸ ವಾಹನಗಳು ಮತ್ತು ಯಂತ್ರಗಳ ಪ್ರದರ್ಶನ ನಡೆಯಲಿದ್ದು, ಅಂದು ಬುಕ್ಕಿಂಗ್ ಮಾಡುವ ವಾಹನಗಳ ಮೇಲೆ ವಿಶೇಷ…

Read More

ಎಂಸಿಸಿ ಬ್ಯಾಂಕ್ ಬೆಳವಣಿಗೆಯ ಹಾದಿಯಲ್ಲಿ: ₹13 ಕೋಟಿ ಲಾಭ, 25 ಶಾಖೆಗಳ ಗುರಿ ಘೋಷಣೆ

ಮಂಗಳೂರು: ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ಗಳಿಸಿದೆ , ನಿವ್ವಳ ಎನ್‌ಪಿಎ ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ ಎಂದು ಎಂಸಿಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದರು . ಅವರು ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಬಾರಿ ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ…

Read More

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ: ಉಪಚುನಾವಣೆಯಲ್ಲಿ ಸೋಲಿಸಲು ಕರೆ – ಮಂಜುನಾಥ್ ಭಂಡಾರಿ

ಬಾಗಲಕೋಟೆ/ದಾವಣಗೆರೆ:ರಾಜ್ಯದಲ್ಲಿ ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಂತೆ ಕರೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಟೋ ಚಾಲಕರಿಗೂ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅವರು ಆರೋಪಿಸಿದರು. “ಬಿಜೆಪಿ ಕಾರ್ಯಕರ್ತರೂ ಸಹ ಈ ಬೆಲೆ ಏರಿಕೆಯಿಂದ…

Read More

ಉರ್ವಮಾರ್ಕೆಟ್ ಉಪಕೇಂದ್ರದಲ್ಲಿ ನಿರ್ವಹಣೆ: ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮಂಗಳೂರು:ನಗರದ 33/11 ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಇಂದು (07.04.2026) ಬೆಳಿಗ್ಗೆ 10.00 ರಿಂದ ಸಂಜೆ 5.30ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ಡೊಮಿನಿಕ್ ಚರ್ಚ್ ಮತ್ತು ಹೊಯಿಗೆಬೈಲ್ ಫೀಡರ್ ವ್ಯಾಪ್ತಿಯಲ್ಲಿ:ಲೈನ್ ನಿರ್ವಹಣೆ, ಟ್ರೀ ಕಟಿಂಗ್ ಹಾಗೂ ತುರ್ತು ಕಾಮಗಾರಿಗಳ ಕಾರಣ ಗೋಕುಲ್ ಹಾಲ್, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್ ಎಂಪಾಯರ್ ರೋಡ್, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್, ಕೋಡಿಕಲ್ ಕಟ್ಟೆ, ಶಾಂತಿ ಲೇನ್, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ…

Read More

ಬಲ್ಮಠ ಮಹಿಳಾ ಕಾಲೇಜಿನಲ್ಲಿ 118ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಯಶಸ್ವಿ

118ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಜಂಟಿ ಆಶ್ರಯದಲ್ಲಿ 118ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಏಪ್ರಿಲ್ 6 ರಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ .ಕೆ .ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಎಸ್ .ವಿ .ಎಸ್ .ಟೆಂಪಲ್ ಪದವಿ ಪೂರ್ವ ಕಾಲೇಜು ಬಂಟ್ವಾಳ ಪ್ರಾಂಶುಪಾಲರಾದ ಕೆ.ಎನ್ .ಗಂಗಾಧರ ಆಳ್ವ…

Read More

ಪುತ್ತೂರು–ಸುಳ್ಯ ಹೆದ್ದಾರಿಯಲ್ಲಿ ಪಿಕಪ್ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ

ಪುತ್ತೂರು (ದಕ್ಷಿಣ ಕನ್ನಡ):ಪುತ್ತೂರು–ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಲೈಟಿಂಗ್ಸ್ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮೋರಿಗೆ ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ವಾಹನಕ್ಕೆ ಭಾರೀ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಈ ಪಿಕಪ್ ಸುಳ್ಯ ಮರ್ಕಂಜದ ಲೈಟಿಂಗ್ಸ್ ಅಂಗಡಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ…

Read More

ಕೊಕ್ಕಡ ಸಮೀಪ ಸರ್ಕಾರಿ ಬಸ್–ಕಾರಿನ ಮುಖಾಮುಖಿ ಡಿಕ್ಕಿ — ಮಹಿಳೆಗೆ ಗಾಯ

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಕಾಪಿನಬಾಗಿಲು ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಘಟನೆಯಲ್ಲಿ ಕಾರಿನಲ್ಲಿದ್ದ ಕವಿತಾ ಎಂಬವರು ಸಣ್ಣಪುಟ್ಟ ಗಾಯಗೊಂಡಿದ್ದು ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಕವಿತಾ ಅವರಿಗೆ ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ….

Read More
error: Content is protected !!