ನೇತ್ರಾವತಿ ಸ್ನಾನಘಟ್ಟದ ಬಳಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ

ಧರ್ಮಸ್ಥಳ (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ನೇತ್ರಾವತಿ ಸ್ನಾನಘಟ್ಟದ ಬಳಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಮೃತದೇಹ ಕಂಡುಬಂದಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೊಲೀಸರು ಮೃತದೇಹದ ಮಹಜರು ನಡೆಸಿ ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ…

Read More

ಜಪ್ಪಿನಮೊಗರು ವಾರ್ಡಿನಲ್ಲಿ ವೈದ್ಯನಾಥ ಆಟೋ ಪಾರ್ಕ್ ಸುಧಾರಣೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್‌ ಗೆ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಅಳವಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಆಟೋ ಚಾಲಕರು ಶ್ರಮಿಕ ವರ್ಗವಾಗಿದ್ದು, ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುವವರು. ಸದ್ಯ ಎಲ್ಲೆಡೆ ವಿಪರೀತ ಬಿಸಿಲಿನ ವಾತಾವರಣವಿದ್ದು ತಮ್ಮ ಆಟೋಗಳು ಬಿಡುವಿನ ವೇಳೆ ನೆರಳಲ್ಲಿ ಇರಬೇಕು ಎಂದು ಬಯಸುತ್ತಾರೆ. ಅವರ ಬೇಡಿಕೆಗೆ ಅನುಗುಣವಾಗಿ ಇಲ್ಲಿಗೆ ಸುಸಜ್ಜಿತ ಮೇಲ್ಛಾವಣಿ…

Read More

ವಿಷು ರಜೆ ಹಿನ್ನೆಲೆ: ಮಂಗಳೂರು–ಚೆನ್ನೈ ನಡುವೆ ವಿಶೇಷ ರೈಲು ಸೇವೆ ಘೋಷಣೆ

ಮಂಗಳೂರು:ವಿಷು ರಜಾದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದಕ್ಷಿಣ ರೈಲ್ವೆ ಇಲಾಖೆ ಮಂಗಳೂರು ಸೆಂಟ್ರಲ್ ಹಾಗೂ ಚೆನ್ನೈ ಎಗ್ಮೋರ್ ನಡುವೆ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಏಪ್ರಿಲ್ ತಿಂಗಳಲ್ಲಿ ಹಬ್ಬದ ಸಂದರ್ಭದ ಜನಸಂದಣಿಯನ್ನು ನಿರ್ವಹಿಸಲು ಪ್ರತಿ ದಿಕ್ಕಿನಲ್ಲಿ ಎರಡು ವಿಶೇಷ ಸೇವೆಗಳನ್ನು ಅನುಮತಿಸಲಾಗಿದೆ ಎಂದು ಪಾಲಕ್ಕಾಡ್ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ. ದೇವದಾನಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲು ಸಂಚಾರ ವಿವರಗಳು: ಪ್ರಮುಖ ನಿಲ್ದಾಣಗಳು (ಮಂಗಳೂರುದಿಂದ):ಕಾಸರಗೋಡು, ಕಾಞಂಗಾಡ್, ಪಯ್ಯನ್ನೂರು, ಕಣ್ಣೂರು, ತಲಶ്ശೇರಿ, ವಡಕರ, ಕೋಝಿಕ್ಕೋಡ್,…

Read More

ಗ್ಯಾಸ್ ಸಿಲಿಂಡರ್ ವಿಚಾರದಿಂದ ಬಯಲಾಯ್ತು ಜೀವಮರಣ ಹೋರಾಟ: ಬದುಕುಳಿದ ಶ್ರೀನಿವಾಸ ಆಚಾರ್ಯ

ಉಡುಪಿ : ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಮರಣ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದ ಘಟನೆ ನಡೆದಿದೆ.ಶನಿವಾರ ಸಂಜೆ ತಮ್ಮ ಮನೆಯ ಮುಂದಿರುವ ಸುಮಾರು 20 ಅಡಿ ಆಳದ ಬಾವಿಯಿಂದ ಪಂಪ್ ಪೈಪ್‌ಗೆ ಕಟ್ಟಿದ್ದ ಹಗ್ಗವನ್ನು ಎಳೆಯುವ ವೇಳೆ ಹಗ್ಗ ತುಂಡಾಗಿ ಅವರು ಬಾವಿಗೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗಿದರೂ, ಅಲ್ಲಿ ಇದ್ದ ಫುಟ್‌ಬಾಲ್ ಪೈಪ್ ಹಗ್ಗವನ್ನು ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅವರ…

Read More

ವಿಶ್ವ ಆರೋಗ್ಯ ದಿನಾಚರಣೆ: ಇಂಡಿಯಾನಾ ಆಸ್ಪತ್ರೆಯ ವಿಶೇಷ ಆಫರ್ – ಗೋಲ್ಡ್ ಕಾರ್ಡ್ ₹99ಕ್ಕೆ, ಸಿಲ್ವರ್ ಕಾರ್ಡ್ ಉಚಿತ!

ಮಂಗಳೂರು:ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯು ಏಪ್ರಿಲ್ 8 ರಿಂದ 14 ರವರೆಗೆ ರೂ. 399/-ಬೆಲೆಯ ಇಂಡಿಯಾನಾ ಆರೋಗ್ಯ ಗೋಲ್ಡ್ ಕಾರ್ಡ್ ನ್ನು ರೂ. 99ಕ್ಕೂ ಹಾಗೂ ಹೆಚ್ಚುವರಿಯಾಗಿ ಏಪ್ರಿಲ್ 7 ರ ಎಲ್ಲಾ ಹೊರರೋಗಿಗಳು ಮತ್ತು ಒಳರೋಗಿಗಳಿಗೆ ಇಂಡಿಯಾನಾ ಪ್ರಿವಿಲೇಜ್ ಸಿಲ್ವರ್ ಕಾರ್ಡ್ ಅನ್ನು ಉಚಿತವಾಗಿ ನೀಡುತ್ತಿದೆ ಎಂದು ಇಂಡಿಯಾನಾ ಆಸ್ಪತ್ರೆಯ ಅಧ್ಯಕ್ಷ ಡಾ. ಅಲಿ ಕುಂಬ್ಳೆ ತಿಳಿಸಿದರು . ಅವರು ನಗರದ ಇಂಡಿಯಾನ ಆಸ್ಪತ್ರೆಯ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಡ್…

Read More

ಹಿರಿಯಡಕ: ಟಿಪ್ಪರ್ ಡಿಕ್ಕಿ ಹೊಡೆದು ಗರ್ಭಿಣಿ ಹಸು ಮೃತ್ಯು

ಉಡುಪಿ: ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸುವೊಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಹಸು ಕಾರೊಂದನ್ನು ಕಂಡು ಹಿಂದಕ್ಕೆ ಸರಿದು ಬಂದಿದೆ. ಈ ವೇಳೆ ಅತೀ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗರ್ಭಿಣಿ ಹಸು ಸ್ಥಳದಲ್ಲೇ ಮೃತಪಟ್ಟಿದೆ.

Read More

ನಾಲ್ಕು ದಿನಗಳ ಬಳಿಕ ಕಾಡಿನೊಳಗೆ ಕಾಣೆಯಾಗಿದ್ದ ಯುವತಿ ಸುರಕ್ಷಿತವಾಗಿ ಪತ್ತೆ: ರೋಚಕ ರಕ್ಷಣಾ ಕಾರ್ಯಾಚರಣೆ

ವಿರಾಜಪೇಟೆ: ಕೇರಳದ ಶರಣ್ಯ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಎ . ಎಸ್ . ಪೊನ್ನಣ್ಣ ಅವರ ಮಾರ್ಗದರ್ಶನದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸ್ಥಳೀಯರ ಸಹಕಾರ ಮತ್ತು ಅತ್ಯಾಧುನಿಕ ಉಪಕರಣಗಳ ನೆರವಿನಿಂದ ನಡೆದ ಶೋಧ ಕಾರ್ಯಾಚರಣೆಯ ನಡುವೆ, ಕುಡಿಯ ಜನಾಂಗದವರು ತಮ್ಮ ಕುಲದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಅಂತಿಮವಾಗಿ ಭಾನುವಾರ ನಾಲ್ಕು ದಿನಗಳ ಬಳಿಕ ಶರಣ್ಯ ಜೀವಂತವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ…

Read More

ಅಮಾಸೆಬೈಲು: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ- ಮೂವರ ಬಂಧನ

ಉಡುಪಿ: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ.ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್(29), ಸಲೀಂ ಹುಸೇನ್ ಸಾಬ್ ನದಾಫ್(33), ಕಂಡ್ಲೂರಿನ ನದೀಂ ಅಬ್ದುಲ್ ಖಾದರ್(34) ಬಂಧಿತ ಆರೋಪಿಗಳು. ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿದಾಗ ಮೂರು ಎತ್ತು ಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ…

Read More

ಪೊಳಲಿ ದೇವಸ್ಥಾನಕ್ಕೆ ಭಾರೀ ಪಾದಯಾತ್ರೆ: ಸಾವಿರಾರು ಭಕ್ತರ ಬೇಡಿಕೆಗಳೊಂದಿಗೆ ಭಕ್ತರ ಮೆರವಣಿಗೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಭಕ್ತಿಭಾವದಿಂದ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಪಾದಯಾತ್ರೆ ಸುಮಾರು 8:30ಕ್ಕೆ ದೇವಸ್ಥಾನ ತಲುಪಿತು. ಈ ಪಾದಯಾತ್ರೆ 7ನೇ ವರ್ಷದದ್ದು ಆಗಿದ್ದು, ಸುಮಾರು ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು. ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದು, ಗೋಶಾಲೆ ನಿರ್ಮಾಣ, ಹಾಗೂ ಅನ್ಯಮತೀಯರಿಗೆ ವ್ಯಾಪಾರ ಅವಕಾಶ ನೀಡಬಾರದು ಎಂಬ ಬೇಡಿಕೆಗಳನ್ನು ಮುಂದಿರಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ…

Read More

ಶಿರ್ಲಾಲಿನಲ್ಲಿ ಬಾಲಕನ ದೈವ ನರ್ತನ ವೈರಲ್

ಅಜೆಕಾರು:ಅಜೆಕಾರು ಸಮೀಪದ ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದಲ್ಲಿ ನಡೆದ ತನ್ನಿಮಾನಿಗ ನೇಮದಲ್ಲಿ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲ ನಿರ್ವಹಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬಾಲಕನ ದೈವ ನರ್ತನ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿರ್ಲಾಲು ಶಾಲೆಯ ಸಮರ್ಥ್ ಎಂಬ ಬಾಲಕ, ತನ್ನ ಅಜ್ಜ ಹಾಗೂ ತಂದೆಯವರಿಂದ ಬಂದಿರುವ ಪರಂಪರಾಗತ ಕಲೆಯನ್ನು ಸಣ್ಣ ವಯಸ್ಸಿನಲ್ಲೇ ಅಳವಡಿಸಿಕೊಂಡು ದೈವ ಕುಣಿತ ಪ್ರದರ್ಶಿಸಿದ್ದಾನೆ. ತಂದೆ ಹರೀಶ ಅವರ ಮಾರ್ಗದರ್ಶನದಲ್ಲಿ ಸಮರ್ಥ್ ತನ್ನಿಮಾನಿಗ ಹೆಣ್ಣು ದೈವದ ಬಣ್ಣ…

Read More
error: Content is protected !!