ಏಕದಿನ ಸಾಹಿತ್ಯ ಅಭಿಯಾನ: ಏಕತೆಯ ಮಂತ್ರ ಸಾರಿದ ಡಾ. ವಾಮನ್ ರಾವ್ ಬೇಕಲ್

ಮಂಗಳೂರು, ಜೂ. 28: ಕನ್ನಡ ಭಾಷೆ, ಸಾಹಿತ್ಯ ಹಾಗೂ ಧಾರ್ಮಿಕ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ತೊಕ್ಕೊಟ್ಟಿನ ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನದ ಅಂಬಾವನ ಧರ್ಮ ಶಿಕ್ಷಣ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ “ಏಕದಿನ ಸಾಹಿತ್ಯ ಅಭಿಯಾನ – ಕನ್ನಡದ ನಡಿಗೆ… ಮಕ್ಕಳ ಕಡೆಗೆ” ಹಾಗೂ ಧರ್ಮ ಶಿಕ್ಷಣ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ…

Read More

ಜುಲೈ 1ರಂದು ದ.ಕ. ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಡಂಗಾಯ ಉಪನ್ಯಾಸ ನೀಡಲಿದ್ದಾರೆ. ಈ…

Read More

ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ

ಉಡುಪಿ ಜಿಲ್ಲೆಯ ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ರಿಯಾಜ್ ಅವರು ನದಿಯ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಕಾಪು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ…

Read More

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಬಂಟ್ವಾಳದಲ್ಲಿ ಮೆಡಿಕಲ್‌ಗಳ ಪರಿಶೀಲನೆ

ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ವತಿಯಿಂದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಮೆಡಿಕಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಪರಿಶೀಲನೆ ವೇಳೆ ಮೆಡಿಕಲ್‌ಗಳಲ್ಲಿ ಮಾರಾಟವಾಗುವ ಔಷಧಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ವೈದ್ಯರ ಪ್ರಿಸ್ಕ್ರಿಪ್ಷನ್ ಆಧಾರಿತ ಔಷಧಗಳ ವಿತರಣೆ, ನಿಷೇಧಿತ ಹಾಗೂ ದುರುಪಯೋಗಕ್ಕೆ ಒಳಪಡುವ ಔಷಧಿಗಳ ಸಂಗ್ರಹ ಮತ್ತು ಮಾರಾಟದ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ…

Read More

ರಾಮ ಮಂದಿರ ಟ್ರಸ್ಟ್ ದೇಣಿಗೆ ಲೆಕ್ಕಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಿ: ಬಿ.ಕೆ. ಹರಿಪ್ರಸಾದ್ ಆಗ್ರಹ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ಗೆ ಉದ್ಯಮಿ ಮುಕೇಶ್ ಅಂಬಾನಿ ಸೇರಿದಂತೆ ವಿವಿಧ ದಾನಿಗಳಿಂದ ನೀಡಲಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಹಾಗೂ ಅದರ ಬಳಕೆ ಕುರಿತಂತೆ ಪಾರದರ್ಶಕತೆ ಇರಬೇಕೆಂದು…

Read More

ವೆಲೆನ್ಸಿಯ ವಾರ್ಡಿನಲ್ಲಿ ₹20 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 48ನೇ ವೆಲೆನ್ಸಿಯ ವಾರ್ಡಿನ ರೆಡ್ ಬಿಲ್ಡಿಂಗ್ ರೋಹನ್ ಕಾರ್ಪೋರೇಷನ್ ಹಿಂಭಾಗ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಸುಮಾರು 300 ಮನೆಗಳಿದ್ದು ಅವರೆಲ್ಲರ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಯು ನಿರ್ಮಾಣವಾಗಲಿದ್ದು ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ…

Read More

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ಮಂಗಳೂರು, ಜೂ. 28: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಏಜೆಂಟರ (BLA)ಗಾಗಿ ಆಯೋಜಿಸಿದ್ದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ತರಬೇತಿ ಕಾರ್ಯಾಗಾರ ಭಾನುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, “ಬೂತ್ ಮಟ್ಟದ ಏಜೆಂಟರು ಕೇವಲ ಪಕ್ಷದ ಕಾರ್ಯಕರ್ತರಲ್ಲ, ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು. ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ,…

Read More

ನಗರಪಾಲಿಕೆಯಿಂದ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರುದ್ದ ಆಕ್ರೋಶ: ಪ್ರತಿಭಟನಾಕಾರರ ಬಂಧನ

ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬೀದಿಬದಿ ವ್ಯಾಪಾರಿಗಳು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದರು ಬೀದಿ ವ್ಯಾಪಾರದ ನಿಯಮನುಸಾರ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಕಾರ್ಯಾಚರಣೆ ನಡೆಸಿ ಎಂದು ಆಯುಕ್ತರಲ್ಲಿ ವಿನಂತಿಕೊಂಡರೂ ಪಾಲಿಕೆ ಆಯುಕ್ತರು ಬೀದಿಬದಿ ವ್ಯಾಪಾರಿಗಳ ಆಗ್ರಹವನ್ನು ಕಡೆಗಣಿಸಿ ಏಕಪಕ್ಷೀಯ…

Read More

ಜಿಲ್ಲೆಯಲ್ಲಿ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿ – ಐವನ್ ಡಿಸೋಜಾ

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಭಾನುವಾರ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದರೂ, ಆ ಸಾಧನೆಯನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ಮಗುವಿಗೂ ಪೋಲಿಯೊ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಪಾಲಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ 5 ವರ್ಷದೊಳಗಿನ…

Read More

ಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವಾಗಿಡುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ ರಾಜ್ಯ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 0 ರಿಂದ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದರು. ಪಲ್ಸ್ ಪೋಲಿಯೋ ಅಭಿಯಾನದ ಕುರಿತು ಮಾತನಾಡಿದ ಅವರು, “ನನ್ನ ಮೊಮ್ಮಗಳಿಗೆ ಕೇವಲ ಒಂದು ತಿಂಗಳು ವಯಸ್ಸು. ಅವಳಿಗೂ ಪೋಲಿಯೋ…

Read More
error: Content is protected !!