ಎಸ್‌ಸಿಡಿಸಿಸಿ ಬ್ಯಾಂಕ್‌ದಿಂದ ದಾಖಲೆ ಸಾಧನೆ: ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ), 2025-26ನೇ ಹಣಕಾಸು ವರ್ಷದಲ್ಲಿ ₹20,226.19 ಕೋಟಿಗಳ ದಾಖಲೆಯ ಒಟ್ಟು ವ್ಯವಹಾರ ನಡೆಸಿ ಹೊಸ ಇತಿಹಾಸ ನಿರ್ಮಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಬ್ಯಾಂಕಿನ ವಾರ್ಷಿಕ ಪ್ರಗತಿಯ ಕುರಿತು ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬ್ಯಾಂಕ್ ಕಳೆದ ವರ್ಷಕ್ಕೆ ಹೋಲಿಸಿದರೆ ವ್ಯವಹಾರದಲ್ಲಿ ಶೇ.16.47 ರಷ್ಟು ಏರಿಕೆ…

Read More

ಮಂಗಳೂರಿನ ಪಿ.ಎ. ಕಾಲೇಜಿನಲ್ಲಿ ರಾಗಿಂಗ್ ಗುಂಪು ಘರ್ಷಣೆ: ವಿದ್ಯಾರ್ಥಿಗಳ ಆತಂಕ

ಮಂಗಳೂರು: ವಿದ್ಯೆ ಕಲಿಯಲು ಪವಿತ್ರ ತಾಣಗಳಾಗಿರಬೇಕಾದ ಶಿಕ್ಷಣ ಸಂಸ್ಥೆಗಳು ಇಂದು ರಣರಂಗವಾಗುತ್ತಿರುವ ಉದಾಹರಣೆként ಮಂಗಳೂರಿನ ಪ್ರತಿಷ್ಠಿತ P.A. College of Engineering ನಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಕಾಲೇಜಿನಲ್ಲಿ ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಲಕ್ಷಾಂತರ ರೂಪಾಯಿ ಶುಲ್ಕ ಕಟ್ಟಿಕೊಂಡು ವಿದ್ಯಾಭ್ಯಾಸಕ್ಕಾಗಿ ದೂರದ ಊರುಗಳಿಂದ ಹಾಗೂ ಇತರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಇಲ್ಲಿ ಇಂತಹ ಘಟನೆಗಳಿಗೆ ಒಳಗಾಗುತ್ತಿರುವುದು…

Read More

ಏಪ್ರಿಲ್ 7 ಮತ್ತು 8 ಕ್ಕೆ ಹರಿಕಥಾ ರಂಗದಲ್ಲಿ ವಿಶಿಷ್ಟ ಪ್ರಯೋಗಕ್ಕೆ ಸಾಕ್ಷಿಯಾಗಲಿದೆ ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯ

ಮಂಗಳೂರು: ಹರಿಕಥಾ ಕಲೆಯ ಮೇರು ಚೇತನವಾದ ದಿವಂಗತ ಡಾ. ಶೇಣಿ ಗೋಪಾಲ ಕೃಷ್ಣ ಭಟ್ಟರ ಜಯಂತ್ಯುತ್ಸವದ ಅಂಗವಾಗಿ ನಾಡಿನ ಕಿರಿಯ ಹಿರಿಯ ೧೨ ಹರಿದಾಸರ ಸಮ್ಮಿಲನ ಕಾರ್ಯಕ್ರಮವು ಕಾಸರಗೋಡು ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಏಪ್ರಿಲ್ 7 ಮತ್ತು 8ರಂದು ಬೆಳಿಗ್ಗೆ ಗಂಟೆ 9 ರಿಂದ ಸಂಜೆ 6.30 ರ ತನಕ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಕೂಡ್ಲು ಮಹಾಬಲ ಶೆಟ್ಟಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಎಂ. ಮೋಹನ್ ಆಳ್ವರಿಗೆ ಗೌರವ ಡಾಕ್ಟರೇಟ್ ಘೋಷಣೆ

ಬೆಂಗಳೂರು: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಮಹತ್ವದ ಕೊಡುಗೆ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 4ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ…

Read More

ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳು: ಜಾಗೃತಿ ಅಭಿಯಾನ – ಪಿ.ಎಂ. ಮಾಲತೇಶ್

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿರುವುದು ಸಂತಸದ ವಿಷಯವಾಗಿದ್ದು, ಈ ಯೋಜನೆಗಳ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪಿ.ಎಂ. ಮಾಲತೇಶ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಹಾಗೂ ನಿಗಮದ ವಿವಿಧ ಯೋಜನೆಗಳ ಮಾಹಿತಿ ಕೈಪಿಡಿ ಮೂಲಕ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ…

Read More

ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ಸಂಭ್ರಮ

ಭಟ್ಕಳ ತಾಲೂಕು ಅನೇಕ ದೇವಾಲಯಗಳ ಒಂದು ಬ್ರಹತ್ ಸಮುಚ್ಛಯ ಎಂದರೆ ತಪ್ಪಾಗಲಾರದು ಅನ್ನಿಸುತ್ತದೆ.ಒಮ್ಮೆ ಮೆರವಣಿಗೆಯೊಂದರಲ್ಲಿ ಸಾಗಿ ಬಂದ ಸ್ವಾಮಿಜೀಯೊಬ್ಬರು ಒಂದು ಮಾರ್ಗದಲ್ಲಿ ಇಷ್ಟೊಂದು ದೇವಾಯಗಳನ್ನು ಇದೇ ಮೊದಲ ಬಾರಿ ಭಟ್ಕಳದಲ್ಲಿಯೇ ಕಂಡಿದ್ದು ಎಂದು ಹೇಳಿದ ಮಾತೂ ನೆನಪಿಗೆ ಬರುತ್ತಿದೆ ನನಗೆ.ಇಲ್ಲಿ ಲೆಕ್ಕವಿಲ್ಲದಷ್ಟು ದೇವಾಲಯಗಳಿವೆ. ಬಸಿದಿಗಳಿವೆ ಗುಡಿಗಳಿವೆ.ಒಂದೊಂದು ದೇವಾಲಯಗಳು ಕೂಡ ತನ್ನದೇ ಆದ ಇತಿಹಾಸವನ್ನು ಸಾರಿ ಹೇಳುತ್ತವೆ.ಇಂತಹ ಅನೇಕ ದೇವಾಲಯಗಳ ಪೈಕಿ ಸುಮಾರು ೬೦೦ ವರುಷಗಳ ಇತಿಹಾಸವಿರುವ ಭವ್ಯ ವಾಸ್ತುಶಿಲ್ಪದ ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ಅತ್ಯಂತ ಪ್ರಮುಖವಾಗಿದೆ….

Read More

ಮಹಾಲಿಂಗೇಶ್ವರ ದೇವಾಲಯ ವಿವಾದ: ‘ಇದು ವೈಯಕ್ತಿಕ ವಿಷಯ, ದೇವಸ್ಥಾನಕ್ಕೆ ಸಂಬಂಧವಿಲ್ಲ’ – ಅಧ್ಯಕ್ಷ ಈಶ್ವರ ಭಟ್

ಪುತ್ತೂರು : ಮಹಾಲಿಂಗೇಶ್ವರ ದೇವಾಲಯದ ಕೊಡಿಮರದ ಅಡಿಯಲ್ಲಿ ಕುಳಿತು ನ್ಯಾಯ ಕೇಳುವುದಕ್ಕೆ ಇದು ದೇವಸ್ಥಾನಕ್ಕೆ ಸಂಬಂಧಿಸಿದ ವಿಷಯ ಅಲ್ಲ. ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ. ದೇವಸ್ಥಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ ಎಂದು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾನಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಪ್ರತಿಕ್ರಿಯಿಸಿದ್ದಾರೆ. ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಗಳಿಂದ ದೇವಾಲಯದ ವಾಸ್ತು ಇಂಜಿನಿಯರ್ ಪಿ ಜಿ ಜಗನ್ನಿವಾಸ್ ರಾವ್ ಅವರನ್ನ ಹೊರಗಿಡಬೇಕು. ಇಲ್ಲವಾದಲ್ಲಿ ನಾನು ಕೊಡಿಮರದ ಅಡಿಯಲ್ಲಿ…

Read More

ಗ್ಯಾಸ್ ಅಭಾವದಿಂದ ಪುತ್ತೂರಿನಲ್ಲಿ ಆಟೋ ಸಂಚಾರ ಅಸ್ತವ್ಯಸ್ತ

ಪುತ್ತೂರು: ನಗರದಲ್ಲಿ ತಲೆದೋರಿರುವ ಗ್ಯಾಸ್‌ ಕೊರತೆ ಇದೀಗ ಆಟೋ ರಿಕ್ಷಾ ಚಾಲಕರಿಗೂ ತೀವ್ರ ಸಂಕಷ್ಟ ಉಂಟುಮಾಡಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದಲೇ ಪುತ್ತೂರಿನ ಬೋಲ್ವಾರ್, ಸಂಪ್ಯ ಪ್ರದೇಶದ ಗ್ಯಾಸ್ ಪಂಪ್, ಮುಕ್ರಂಪಾಡಿ ಬಳಿ ಆಟೋಗಳು ಕಿಲೋಮೀಟರ್‌ಗಳಷ್ಟು ಉದ್ದದ ಸಾಲಿನಲ್ಲಿ ನಿಂತು ಕಾಣಿಸಿಕೊಂಡವು. ಗ್ಯಾಸ್‌ ತುಂಬಿಸಿಕೊಳ್ಳಲು ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನನಿತ್ಯದ ಉದ್ಯೋಗಕ್ಕೆ ಇದರಿಂದ ದೊಡ್ಡ ಹೊಡೆತ ಬಿದ್ದಿದೆ.ಬೆಳಿಗ್ಗೆಯಿಂದಲೇ ಪಂಪ್ ಮುಂದೆ ವಾಹನಗಳ ದಟ್ಟಣೆ ಹೆಚ್ಚಾಗಿ, ಸಂಚಾರಕ್ಕೂ ಅಡಚಣೆ ಉಂಟಾದ ದೃಶ್ಯ ಕಂಡುಬಂದಿತು.ಗ್ಯಾಸ್‌ ಕೊರತೆಯಿಂದಾಗಿ ಪ್ರಯಾಣಿಕರಿಗೆ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ,…

Read More

ಕಾಪು ರಂಗ ತರಂಗ ತಂಡದ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ

ಉಡುಪಿ: ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು. ಪ್ರಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಪಾತ್ರಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ, ಪ್ರೇಕ್ಷಕರ ಮನ ಗೆದ್ದಿದ್ದರು. ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗ ತರಂಗ ಕಲಾವಿದರು ತಂಡದ ಸ್ಥಾಪಕ ಸದಸ್ಯರಾಗಿ, ತಂಡದ ಸಮಗ್ರ ನಿರ್ವಹಣೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು. ಕೆಲವು…

Read More
error: Content is protected !!