ದ್ವತ್ ಪಿಯು ಕಾಲೇಜಿನಲ್ಲಿ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ, ಜೂ. 26: ಪರಿಶ್ರಮ, ದೃಢ ಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಮೂಲಕ ಯಾವುದೇ ಗುರಿಯನ್ನು ಸಾಧಿಸಬಹುದು. ಸಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿಖರವಾದ ಅಧ್ಯಯನ, ಸಮರ್ಪಕ ಮಾರ್ಗದರ್ಶನ ಹಾಗೂ ಸಂಶೋಧನಾತ್ಮಕ ಕಲಿಕೆಯ ಮನೋಭಾವ ಅಗತ್ಯ ಎಂದು ಯುವ ಲೆಕ್ಕಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಹೇಳಿದರು. ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ-ಪೋಷಕರ ಓರಿಯಂಟೇಶನ್ ಕಾರ್ಯಕ್ರಮ

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಬ್ಲಾಕ್-ಬಿ ಕ್ಯಾಂಪಸ್‌ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮವು ಜೂನ್ 19 ಮತ್ತು 20ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಇದು ಬ್ಲಾಕ್-ಬಿ ಕ್ಯಾಂಪಸ್‌ನ ಮೊದಲ ಶೈಕ್ಷಣಿಕ ವರ್ಷದ ಅಧಿಕೃತ ಆರಂಭಕ್ಕೆ ನಾಂದಿ ಹಾಡಿತು. ಬಿ.ಕಾಂ., ಬಿ.ಎ. (ಅರ್ಥಶಾಸ್ತ್ರ, ಪತ್ರಿಕೋದ್ಯಮ ಹಾಗೂ ಮನಃಶಾಸ್ತ್ರ), ಬಿಸಿಎ ಮತ್ತು ಬಿಬಿಎ ಪದವಿ ಕೋರ್ಸ್‌ಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ…

Read More

ಆರ್‌ಎಸ್‌ಎಸ್‌ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರಮೋದ್ ಮುತಾಲಿಕ್ ವಾಗ್ದಾಳಿ

ಚಿಕ್ಕಮಗಳೂರು,:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ಹಾಗೂ ಲೆಕ್ಕಪತ್ರಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಚಿವರು ತಮ್ಮ ಜವಾಬ್ದಾರಿಯ ಅರಿವಿನಿಂದ ನಡೆದುಕೊಳ್ಳಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು. ಮೂಡಿಗೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಕುರಿತು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. “ನೀವು ಕರ್ನಾಟಕದ ಏಳು ಕೋಟಿ ಜನರ ಸಚಿವರಾಗಿದ್ದೀರಿ. ಆದರೆ ಆರ್‌ಎಸ್‌ಎಸ್‌…

Read More

ಅಕ್ಟೋಬರ್ 18, 19ರಂದು ಮೈಸೂರು ದಸರಾ ಕಂಬಳ; ಸ್ಥಳ, ದಿನಾಂಕ ಅಂತಿಮ

ಪುತ್ತೂರು,ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಕಂಬಳ ಸ್ಪರ್ಧೆಯು ಅಕ್ಟೋಬರ್ 18 ಮತ್ತು 19ರಂದು ನಡೆಯಲಿದ್ದು, ಕಂಬಳಕ್ಕೆ ಸಂಬಂಧಿಸಿದ ಪ್ರಥಮ ಸಭೆಯಲ್ಲಿ ದಿನಾಂಕ ಹಾಗೂ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಕಂಬಳದ ರೂವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತಂತೆ ಅಧಿಕಾರಿಗಳು ಹಾಗೂ ಕಂಬಳ ಸಮಿತಿ ಪ್ರಮುಖರು ಭಾಗವಹಿಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ…

Read More

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ; ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು/ಮೈಸೂರು: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಮೊದಲ ಬಾರಿಗೆ ಕಂಬಳ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ರೈ ಅವರು ಶುಕ್ರವಾರ ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಕಳೆದ ವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ, ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು….

Read More

ಪಿವಿಎಸ್ ಕಲಾಕುಂಜ್ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ವಿಶೇಷ ದಿವ್ಯ ದರ್ಶನ

ಮಂಗಳೂರು: ನಗರದ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ದಿವ್ಯ ದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಅಲಂಕೃತಗೊಂಡಿದ್ದ ಶ್ರೀ ಶ್ರೀ ಕೃಷ್ಣ ಬಲರಾಮ, ಶ್ರೀ ಶ್ರೀ ಗೌರ ನಿತಾಯಿ ಹಾಗೂ ಜಗದ್ಗುರು ಶ್ರೀಲ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ ದಿವ್ಯ ದರ್ಶನವನ್ನು ಸಾವಿರಾರು ಭಕ್ತರು ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗಿನಿಂದಲೇ ಭಕ್ತರು ಮಂದಿರಕ್ಕೆ ಆಗಮಿಸಿ ದೇವರ ದರ್ಶನ ಪಡೆದು, ಹರಿನಾಮ ಸಂಕೀರ್ತನೆ, ಮಂಗಳಾರತಿ ಹಾಗೂ ವಿಶೇಷ…

Read More

ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹೀಗಿದ್ದರೂ ಪಕ್ಷದ ಅನುಷ್ಠಾನ ಸಮಿತಿಯ ಅಧಿಕಾರಿಗಳಿಗೆ ಗೌರವಧನವನ್ನು ಸರಿಯಾಗಿ ನೀಡಿರುವುದಾಗಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಳಿಕ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ವೈಫಲ್ಯ ಹಾಗೂ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ನಾಯಕರೇ ಬಹಿರಂಗವಾಗಿ ಮಾತನಾಡುತ್ತಿರುವುದು ಸರ್ಕಾರದ…

Read More

ನೂತನ ಕ್ಲಬ್‌ಗೆ ಭವ್ಯ ಚಾಲನೆ; ಪದಾಧಿಕಾರಿಗಳ ಪದಗ್ರಹಣ

ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ಅಡಿಯಲ್ಲಿ ನೂತನವಾಗಿ ಸ್ಥಾಪನೆಯಾದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕ್ಲಬ್‌ನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಕ್ಲಬ್ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಚುನಾಯಿತ…

Read More

ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ MSME ವಲಯದ ಪಾತ್ರ ಮಹತ್ವದ್ದು: ಸಿ.ಎ.ಎಸ್.ಎಸ್. ನಾಯಕ್

ಮಂಗಳೂರು, ಜೂ.27: ದೇಶದ ಆರ್ಥಿಕತೆ ಬಲವರ್ಧನೆ, ಉದ್ಯೋಗ ಸೃಷ್ಟಿ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಸಿ.ಎ.ಎಸ್.ಎಸ್. ನಾಯಕ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ MSME ವಲಯದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿಶ್ವಸಂಸ್ಥೆಯು 2017ರಿಂದ ಪ್ರತಿ ವರ್ಷ ಜೂನ್ 27ರಂದು ಅಂತರರಾಷ್ಟ್ರೀಯ…

Read More

ಜಮೀರ್ ಅಹ್ಮದ್ ಖಾನ್‌ಗೆ ಪ್ರಮುಖ ಸಚಿವ ಸ್ಥಾನ ನೀಡುವಂತೆ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತನ ಮನವಿ

ಬಂಟ್ವಾಳ, ಜೂನ್ 27:ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಸೇವೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಅಸೀಬ್ ರಹ್ಮಾನ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು…

Read More
error: Content is protected !!