ಮಂಗಳೂರಿನಲ್ಲಿ CITU ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ನಾಳೆ ಚಾಲನೆ

ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ CITUನ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ನಾಳೆಯಿಂದ ಮೂರು ದಿನಗಳ ಕಾಲ ಮಂಗಳೂರಿನ ಸಂದೇಶ ಸಂಸ್ಥೆಯಲ್ಲಿ ಜರುಗಲಿದ್ದು,ಈ ಹಿನ್ನೆಲೆಯಲ್ಲಿ CITUನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು CITU ಪ್ರಕಟಣೆಯೊಂದರಲ್ಲಿ ತಿಳಿಸಿದೆ. CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್,ರಾಷ್ಟ್ರೀಯ ಉಪಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ಎಸ್ ವರಲಕ್ಷ್ಮಿ,ರಾಜ್ಯದ ಕಾರ್ಮಿಕ ಚಳುವಳಿಯ ಹಿರಿಯ ನಾಯಕರಾದ ವಿಜೆಕೆ ನಾಯರ್, ರಾಜ್ಯದ ನಾಯಕರಾದ ಕೆ ಮಹಾಂತೇಶ್,ಸೈಯ್ಯದ್ ಮುಜೀಬ್,ಪ್ರತಾಪ್…

Read More

ಮಂಗಳೂರು: ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ – ಪೊಲೀಸ್ ಸಿಬ್ಬಂದಿಗೆ ಕರ್ತವ್ಯನಿಷ್ಠೆಗೆ ಕರೆ

ಮಂಗಳೂರು: ಮಂಗಳೂರು ನಗರ ಪೊಲೀಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಹಾಗೂ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್ ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ Sudheer Kumar Reddy ಅವರು, ಪೊಲೀಸ್ ಸಿಬ್ಬಂದಿ ಸಮಾಜದಲ್ಲಿ ಅನುಕರಣೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು. ಘಟನೆಗಳು ಸಂಭವಿಸಿದಲ್ಲಿ ಅವುಗಳನ್ನು ಸಮರ್ಥವಾಗಿ…

Read More

ಬಂಟ್ವಾಳದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ, ತಜ್ಞರಿಂದ ತರಬೇತಿ ಕಾರ್ಯಾಗಾರ

ಬಂಟ್ವಾಳ: ವಿಕಾಸಂ ಸೇವಾ ಫೌಂಡೇಶನ್ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದಲ್ಲಿ ಗುರುವಾರ ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚಣೆ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಸಿವಿಲ್ ಕಾಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷರಾದ ಮಹಾಬಲ ಕೊಟ್ಟಾರಿ ಉದ್ಘಾಟಿಸಿ ಮಾತನಾಡಿ, ಆಟಿಸಂ ಕುರಿತು ವಿಕಾಸಂ ಸಂಸ್ಥೆ ತೋರುತ್ತಿರುವ ಕಾಳಜಿಯನ್ನು ಶ್ಲಾಘಿಸಿದರು. ಬಂಟ್ವಾಳ ಸಿಡಿಪಿಒ ಮಮ್ತಾಜ್ ಮಾತನಾಡಿ, ಬೆಳೆಯುವ ಹಂತದಲ್ಲೇ ಆಟಿಸಂ ಗುರುತಿಸುವಿಕೆ ಅಗತ್ಯವಾಗಿದ್ದು, ಇದು ಮುಂದಕ್ಕೂ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ…

Read More

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ – ಪತ್ನಿ ಸೌಮ್ಯ ಶೆಟ್ಟಿ ಸ್ಪಷ್ಟನೆ

ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಈ ನಡುವೆ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಹಾಜರಾಗಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ಶೆಟ್ಟಿ, ಸುದೀಪ್ ರೈ ಅವರ ತಂದೆ ಹಾಗೂ ವೇಣುಗೋಪಾಲ ಶೆಟ್ಟಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದರು. “ನನ್ನ…

Read More

ಪುತ್ತೂರು: “ನ್ಯಾಯ ಸಿಗದಿದ್ದರೆ ದೇವಸ್ಥಾನದ ಧ್ವಜಸ್ತಂಭದ ಮುಂದೆ ಪ್ರತಿಭಟನೆ” – ಸಂತ್ರಸ್ತೆಯ ತಾಯಿ ಎಚ್ಚರಿಕೆ

“ನನ್ನ ಮಗಳ ವಿಚಾರದಲ್ಲಿ ನ್ಯಾಯ ದೊರೆಯದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭದ ಮುಂದೆ ಕುಳಿತು ಪ್ರತಿಭಟನೆ ನಡೆಸುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ . ಪುತ್ತೂರಿನ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು ಒಂದು ವರ್ಷ ಕಳೆದಿದ್ದರೂ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಿ.ಜಿ. ಜಗನ್ನಿವಾಸ್ ರಾವ್ ಅವರು ಇಂದಿಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದನ್ನು ಅವರು ಪ್ರಶ್ನಿಸಿದರು. “ನನ್ನ ಮಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಅವರು…

Read More

ಪುತ್ತೂರು: ಅಡುಗೆ ಅನಿಲ ಕೊರತೆ ಕುರಿತು ಶಾಸಕರ-ಮಾಜಿ ಶಾಸಕರ ನಡುವೆ ವಾಗ್ವಾದ

ಪುತ್ತೂರು: ಅಡುಗೆ ಅನಿಲ ಕೊರತೆ ಆತಂಕ ಬೇಡ ಎಂದು ಮಾಜಿ ಶಾಸಕರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಎಲ್ಲಿಯೂ ಕೂಡಾ ಗ್ಯಾಸ್ ಇಲ್ಲ. ಹಾಗಾಗಿ ಗ್ಯಾಸ್‌ ವಿಚಾರದಲ್ಲಿ ಸುಳ್ಳು ಹೇಳುವುದನ್ನು ನಿಲ್ಲಿಸಲಿ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರತಿಕ್ರಿಯಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಅನಿಲ ಕೊರತೆ ಆತಂಕ ಬೇಡ. ಮೋದಿ ನೇತೃತ್ವದಲ್ಲಿ ಸಮರ್ಪಕವಾಗಿ ಪೂರೈಕೆ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೆ ವಿಚಾರವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ…

Read More

ಮಂಗಳೂರು: ಮಿನರ್ವಾ ಕಾಲೇಜಿಗೆ ವಿ.ಟಿ.ಯು ಅನುಬಂಧ – ವೃತ್ತಿಪರ ಕೋರ್ಸ್‌ಗಳಿಗೆ ಚಾಲನೆ

ಮಂಗಳೂರು : ವೃತ್ತಿಪರ ಶಿಕ್ಷಣದಲ್ಲಿ ಮೇಲುಗೈ ಸಾಧಿಸಿರುವ Mifse & Minerva ಕಾಲೇಜು ತನ್ನ 19 ವರ್ಷದ ಸಾಧನಾ ಪಯಣದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲನ್ನು ಸಾಧಿಸಿದೆ, ಮಿನರ್ವಾ ಕಾಲೇಜಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅನುಬಂಧ ಲಭಿಸಿದ್ದು ವೃತ್ತಿಪರ ಕೋಸ್೯ ಗಳನ್ನು ಪ್ರಾರಂಭಿಸಲು ಅವಕಾಶ ದೊರೆತಿದೆ ಎಂದು ಕಾಲೇಜಿನ ಅಧ್ಯಕ್ಷರಾದ ವಿನೋದ್ ಕೆ.ಜಾನ್ ಹೇಳಿದರು ಅವರು ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ 2007ರಲ್ಲಿ ಸ್ಥಾಪನೆಯಾದ ಮಿಫ್ಸ್ ಕರ್ನಾಟಕದಲ್ಲಿ ಫೈರ್ & ಸೆಫ್ಟಿ ಹಾಗೂ HSE ಶಿಕ್ಷಣವನ್ನು ಪರಿಚಯಿಸಿದ…

Read More

ಬಂಟ್ವಾಳ: ಕಾರು ಪಲ್ಟಿ – ಕಾಲೇಜು ವಿದ್ಯಾರ್ಥಿಗಳು ಸೇರಿ ಆರು ಮಂದಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಆರು ಮಂದಿ ಗಾಯಗೊಂಡ ಘಟನೆ ಬಿಸಿರೋಡು ಸಮೀಪದ ರಾಮಲ್ ಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ. ಗಾಯಗೊಂಡವರು ವಳಚ್ಚಿಲದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿನಯ್, ಹೇಮಂತ್, ಸುಜನ್, ದೀಕ್ಷಾರಾಜ್, ಜೈಸನ್ ಹಾಗೂ ರಕ್ಷಾಸಾಮ್ರಾಟ್ ಗಾಯಗೊಂಡವರಾಗಿದ್ದಾರೆ. ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳು ರಾತ್ರಿ ಸುಮಾರು 12 ಗಂಟೆಗೆ ಕಾಲೇಜಿನಿಂದ ಬಿಸಿರೋಡು ಕಡೆ ಚಹಾ ಕುಡಿಯಲು ತೆರಳುತ್ತಿದ್ದ ವೇಳೆ ಈ…

Read More

ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಗೆದ್ದರೆ ನನಗೆ ಶಕ್ತಿ – ಸಿಎಂ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು. ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು. ಸಮರ್ಥ್ ಅತ್ಯಂತ ವಿದ್ಯಾವಂತ ಮತ್ತು ರಾಜಕಾರಣದ ಎಲ್ಲ ಅರ್ಹತೆಗಳಿರುವ ಸಮರ್ಥ ಅಭ್ಯರ್ಥಿ….

Read More

ಉಡುಪಿ: ಅಪಹರಣ ಪ್ರಕರಣ – 7 ಮಂದಿ ಬಂಧನ, ಪ್ರಮುಖ ಆರೋಪಿಗಳ ಸುಳಿವಿಗೆ ₹50,000 ಬಹುಮಾನ

ಉಡುಪಿ: ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.ಕೊಲ್ಲೂರು ಕೆಳಮನೆಯ ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ (33), ಹಿರಿಯಡ್ಕದ ಸುಜಿತ್ (27), ಕಾಟಿಪಳ್ಳದ ಸುದೀಪ್ (22), ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ (35), ಕೈಕಂಬ ಮಿಥುನ್ ಕೈಕಂಬ (20), ಕೆಮ್ಮಣ್ಣು ಸುಹಾಸ್ (31) ಹಾಗೂ ಹೂಡೆ ಮನೋಜ್ ವಿ. ಕೊಟ್ಯಾನ್ (34) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ…

Read More
error: Content is protected !!