₹25 ಕೋಟಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕಿ ವಿರುದ್ಧ ಕಾಂಗ್ರೆಸ್ ಆರೋಪ
ಕಡಬ, ಜೂನ್ 27:ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ₹25 ಕೋಟಿ ವಿಶೇಷ ಅಭಿವೃದ್ಧಿ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ಎಸಗಿ ಸಾರ್ವಜನಿಕ ಹಣ ದುರ್ಬಳಕೆ ಮಾಡಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದರು. ಶುಕ್ರವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲದೆ ಬಿಜೆಪಿ ಮುಖಂಡರು, ಬಿಜೆಪಿ ಬೆಂಬಲಿತ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಅಗತ್ಯವಿರುವ ಹಲವು ಅಭಿವೃದ್ಧಿ…
