ಬಂಟ್ವಾಳ: ಗ್ಯಾಸ್ ಪಂಪ್‌ನಲ್ಲಿ ಹೆಚ್ಚುವರಿ ದರ ಆರೋಪ – ರಿಕ್ಷಾ ಚಾಲಕರಿಂದ ಮತ್ತೆ ಪ್ರತಿಭಟನೆ

ಬಂಟ್ವಾಳ: ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ರಿಕ್ಷಾ ಚಾಲಕರು ಗ್ಯಾಸ್ ಪಂಪ್ ಎದುರು ಸತತ ಎರಡನೇ ಬಾರಿ ಪ್ರತಿಭಟನೆ ನಡೆಸಿದ ಘಟನೆ ತಲಪಾಡಿ, ಬಿಸಿರೋಡು ಪ್ರದೇಶದಲ್ಲಿ ನಡೆದಿದೆ. ತಲಪಾಡಿಯಲ್ಲಿರುವ ಅಟೋ ಗ್ಯಾಸ್ ಪಂಪ್‌ನಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ದುಪ್ಪಟ್ಟು ಹಣವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ. ಇದಲ್ಲದೆ, ಪಂಪ್ ಸಿಬ್ಬಂದಿ ದರ್ಪದ ಮಾತುಗಳಿಂದ ಬೆದರಿಸುವುದೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವಿಚಾರವಾಗಿ ಕೆಲವು ದಿನಗಳ ಹಿಂದೆಯೂ ಇದೇ…

Read More

ಬಜಪೆ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಅಂತರ್ ರಾಜ್ಯ ಆರೋಪಿಯ ಬಂಧನ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮೂಲದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಿಂಡಿಗುಲ್ ಜಿಲ್ಲೆಯ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 03, 2026 ರಂದು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ಮೂರು ಕಾಣಿಕೆ ಹುಂಡಿಗಳನ್ನು ಒಡೆದು ಸುಮಾರು 25,000 ರೂಪಾಯಿ ನಗದನ್ನು…

Read More

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯ ಜಾತ್ರೋತ್ಸವದ ಪೂರ್ವಭಾವಿ ಸಭೆ – ಭಾರಿ ಸಿದ್ಧತೆ

ಪುತ್ತೂರು; ಪುತ್ತೂರು ಮಹತೋಬಾರ ಪುತ್ತೂರು ಮಹಾಲಿಂಗೇಶ್ವರದ ದೇವಳದ ಜಾತ್ರೋತ್ಸವವು ಎ.10-20 ತನಕ ನಡೆಯಲಿದ್ದು, ಜಾತ್ರೆಯ ಯಶಸ್ವಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಬಾವಿ ಸಭೆಯು ದೇವಳದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ರೈ ಅವರು ಮಾತನಾಡಿ, ಜಾತ್ರೋತ್ಸವಕ್ಕೆ ಎರಡು ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು, ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ನಿರ್ವಹಿಸಲು ಇಲಾಖೆಗಳ ಸಹಭಾಗಿತ್ವ ಅಗತ್ಯವಿದೆ. ವಿವಿಧ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಮಹಾರಥೋತ್ಸವ ಎ.17ರಂದು…

Read More

ಕಾವೂರು: ದೋಣಿ ಮಗುಚಿ ಇಬ್ಬರು ಯುವಕರು ನೀರುಪಾಲು – ಶೋಧ ಕಾರ್ಯ ಮುಂದುವರಿಕೆ

ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್‌ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು. ಬುಧವಾರ ಮುಂಜಾನೆ ಸುಮಾರು 1:30ರ ವೇಳೆಗೆ ಗಣೇಶ್, ರಾಯಲ್ ಹಾಗೂ ನಿತೇಶ್ ಫಲ್ಗುಣಿ ನದಿಗೆ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಇದ್ದ ದೋಣಿ ಹಠಾತ್ತನೆ ನದಿಯಲ್ಲಿ ಮಗುಚಿ ಬಿದ್ದಿದೆ. ಈ ಸಮಯ ಈಜಲು…

Read More

ಮಂಗಳೂರು: ಕಲಾಕೃತಿಯಿಂದ ಅಲಂಕೃತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಭವ್ಯ ಸ್ವಾಗತ

ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಇದು ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನ “ಟೇಲ್ಸ್ ಆಫ್ ಇಂಡಿಯಾ’ ಉಪಕ್ರಮದ ಭಾಗವಾಗಿದೆ. ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿ ಬೋಯಿಂಗ್ 737-8 (ವಿಟಿ-ಬಿ ಡಬ್ಲ್ಯುವಿ) ವಿಮಾನವನ್ನು ಫೈಯಿಂಗ್ ಕ್ಯಾನ್ ವಾಸ್ (ಹಾರಾಡುವ ಕಲಾಕೃತಿ) ಆಗಿ ನಿಯೋಜಿಸಲಾಗಿದೆ. ಇದು ಸಾಂಪ್ರದಾಯಿಕ ಕಲೆಗಳನ್ನು ಆಧುನಿಕ ಶೈಲಿಯೊಂದಿಗೆ ಸಂಯೋಜಿಸಿ, ಪ್ರಯಾಣವನ್ನು ಒಂದು ಚಲಿಸುವ ಸಾಂಸ್ಕೃತಿಕ ಅನುಭವವನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.ಈ ವಿಮಾನ ಮಂಗಳೂರು…

Read More

ಮೆಲ್ಕಾರ್-ಮುಡಿಪು ಹೆದ್ದಾರಿಯಲ್ಲಿ ಅಪಘಾತ: ಮಹಿಳೆಗೆ ಗಂಭೀರ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದ ಗುಳಿಗಜ್ಜ ಕಟ್ಟೆ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಭಾರತಿ ಎಂದು ಗುರುತಿಸಲಾಗಿದೆ. ಅವರು ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆ ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ರಸ್ತೆ ಅಂಚಿಗೆ ತಲುಪಿದ ವೇಳೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತಿ ಅವರನ್ನು…

Read More

ಕೊರಿಂಗಿಲ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ

ಪುತ್ತೂರು : ಅಶ್ಬಾಲುಲ್ ಇಸ್ಲಾಮ್ ವೆಲ್ಫೇರ್ ಅಸೋಸಿಯೇಷನ್ (AIWA) ಕೊರಿಂಗಿಲ ಇದರ ವತಿಯಿಂದ ಮಿಸ್ಬಾಹುಲ್ ಹುದಾ ಮದ್ರಸದ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು. ಅಶ್ಬಾಲುಲ್ ಇಸ್ಲಾಂ ವೆಲ್ಫೇರ್ ಅಸೋಸಿಯೇಷನ್ ಸಮಿತಿ ವತಿಯಿಂದ ಕೊರಿಂಗಿಲ ಮದ್ರಸದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಕೊಡುತ್ತಿದ್ದು ಉತ್ತಮ ಸೇವೆ ಮಾಡುತ್ತಿರುವುದು ಶ್ಲಾಘನೀಯ. ಕಾರ್ಯಕ್ರಮದಲ್ಲಿ ಖತೀಬರಾದ ಬಹು | ಅಲ್ಹಾಜ್ GH ಅಯ್ಯೂಬ್ ವಹಬಿ, ಸಹ ಅಧ್ಯಾಪಕರಾದ ಬಹು | ಅಬೂಬಕ್ಕರ್ ಮದನಿ, ಕೊರಿಂಗಿಲ ಜಮಾತ್ ಆಡಳಿತ…

Read More

ಜನಗಣತಿ: ಮನೆಗಣತಿಗೆ ಸ್ಪೀಕರ್ ಚಾಲನೆ

ಮಂಗಳೂರು: ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.ನಾಗರಿಕರು…

Read More

ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವವಿದ್ಯೆ ಜೀವನದ ಯಶಸ್ಸಿಗೆ ಮುಖ್ಯ ಆಧಾರ: ಅಬ್ದುಲ್ ನಾಸಿರ್ ಸಅದಿ

ಮಂಗಳೂರು: ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವ ಹಾಗೂ ಫತ್ಹೇ ಮುಬಾರಕ್ ಕಾರ್ಯಕ್ರಮ ಜಮಾಅತ್ ಅಧ್ಯಕ್ಷ ಅಬ್ದುಲ್ ರವೂಫ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಇಲ್ಲಿನ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಬ್ದುಲ್ ನಾಸಿರ್ ಸಅದಿ, ಜನರು ಸಂಪಾದಿಸುವುದರಲ್ಲಿ ಅತ್ಯುತ್ತಮವಾದದ್ದು ವಿದ್ಯೆ. ವಿದ್ಯೆಯನ್ನು ಪಡೆದವನು ಎಲ್ಲವನ್ನೂ ಕರಗತ ಮಾಡಿಕೊಳ್ಳಲು ಸಾಧ್ಯ. ವಿದ್ಯೆ ಮಾನವನಿಗೆ ಸನ್ಮಾರ್ಗವನ್ನು ತೋರಿಸುವ ದೀಪವಾಗಿದೆ. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿ, ನೈತಿಕ ಮೌಲ್ಯಗಳನ್ನು ಬೆಳೆಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More

ಮಂಗಳೂರು: ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಜನರು ನೆರೆ ಸಮಸ್ಯೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆಯೇ ಕೆಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣವಾಗಿದ್ದರೂ ಅನಿವಾರ್ಯ ಕಾರಣಗಳಿಂದ ಒಂದಷ್ಟು ಬಾಕಿ ಇದ್ದು, ಇದೀಗ ಆ ಕಾಮಗಾರಿಯನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ….

Read More
error: Content is protected !!