ಬಿಜೆಪಿ ಸರ್ಕಾರ ಕಟ್ಟಡ ನಿರ್ಮಿಸಿತು, ಕಾಂಗ್ರೆಸ್‌ಗೆ ರಿಬ್ಬನ್ ಕತ್ತರಿಸುವ ಭಾಗ್ಯ: ಶಾಸಕ ವೇದವ್ಯಾಸ ಕಾಮತ್ ವ್ಯಂಗ್ಯ

ಮಂಗಳೂರು: “ಅಭಿವೃದ್ಧಿ ಕಾಮಗಾರಿಗಳಿಗೆ ಮುತುವರ್ಜಿ ವಹಿಸಿ ಕೋಟಿ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ. ಇದೀಗ ನಿರ್ಮಾಣ ಪೂರ್ಣಗೊಂಡ ಕಟ್ಟಡಗಳಿಗೆ ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡುವ ಭಾಗ್ಯ ಮಾತ್ರ ಕಾಂಗ್ರೆಸ್ ಸರ್ಕಾರಕ್ಕೆ ಸಿಕ್ಕಿದೆ” ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು. ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕದ್ರಿಹಿಲ್ಸ್‌ನ ನೂತನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)…

Read More

ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಬಂಧನ

ಬೆಳ್ತಂಗಡಿ: ಜಲಪಾತಕ್ಕೆ ತೆರಳಿದ್ದ ವೇಳೆ ಮೂವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತರನ್ನು ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಆರೋಪಿಗಳಾದ ಈ ಮೂವರು ಯುವಕರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದರು. ಈ ವೇಳೆ…

Read More

ಬಕ್ರೀದ್ ವೇಳೆ ಅಕ್ರಮ ಸಾಗಾಣಿಕೆ ವಿರುದ್ಧ ಎಚ್ಚರಿಕೆ-ಪುತ್ತೂರು ಪೊಲೀಸರಿಗೆ ವಿಹಿಂಪ-ಬಜರಂಗದಳ ಮನವಿ ಸಲ್ಲಿಕೆ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ…

Read More

ಮಂಗಳೂರಿನಲ್ಲಿ ನಾಲ್ಕು ಭವ್ಯ ಸಭಾಭವನಗಳ ಮಹಾ ಲೋಕಾರ್ಪಣೆ ಮೇ 23ಕ್ಕೆ

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಾಲ್ಕು ಅತ್ಯಾಧುನಿಕ ಮತ್ತು ಅದ್ದೂರಿ ಸಭಾಭವನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಾಗಿ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆಯಾಗಿ ನಾಲ್ಕು ಭವ್ಯ ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಮೇ 23ರಂದು ಅವುಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಗುವುದು…

Read More

ವಿಟ್ಲದಲ್ಲಿ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳ

ವಿಟ್ಲ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ರೇಷ್ಮೆ ಕೃಷಿಗೆ ಸೂಕ್ತ ವಾಗಿದ್ದು ಪೂರಕವಾಗಿ ರಾಜ್ಯ ಸರ್ಕಾರ ಸರ್ವ ರೀತಿಯ ಸಹಕಾರ ನೀಡಲಿದೆ. ಈ ಜಿಲ್ಲೆಗಳ ಕೃಷಿಕರ ಮನವೊಲಿಸಿ ರೇಷ್ಮೆ ಕೃಷಿಗೆ ಉತ್ತೇಜಿಸಲಾಗುವುದು ಎಂದು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ. ವೆಂಕಟೇಶ್ ಹೇಳಿದರು. ಅವರು ಬುಧವಾರ ವಿಠಲ ಪದವಿಪೂರ್ವ ಕಾಲೇಜು ಸುವರ್ಣ ರಂಗಮಂದಿರದಲ್ಲಿ ದ.ಕ. ಜಿಲ್ಲಾ ಪಂಚಾಯತಿ ರೇಷ್ಮೆ ಇಲಾಖೆ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ದ.ಕ. ಜಿಲ್ಲಾ ಮಟ್ಟದ ರೇಷ್ಮೆ…

Read More

ಮಣಿಪಾಲ: ಕಲ್ಲು ಎತ್ತು ಹಾಕಿ ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ

ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ.ಅಂಕೋಲಾ ತಾಲೂಕಿನ ಖೇಣಿ ಬಾವಿಕೇರಿ ಗ್ರಾಮದ ಸುಷ್ಮಾ ಅಣ್ಣಪ್ಪ ನಾಯ್ಕ(31) ಬಂಧಿತ ಆರೋಪಿ. ಯೋಗೀತಾ ತನ್ನ ಇಬ್ಬರು ಗೆಳತಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅವರಿಬ್ಬರು ಮೇ 12ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದರು. ಇವರು ಕೆಲಸ ಮುಗಿಸಿ ಬುಧವಾರ ಬೆಳಗ್ಗೆ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವವು ಬಿ. ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಅಗ್ರಜ ಬಿಲ್ಡರ್ಸ್’ನ ಮಾಲಕರಾದ ಸಂದೇಶ್ ಶೆಟ್ಟಿ, ಸಂಚಾಲಕರಾದ ಭುವನೇಶ್ ಪಚ್ಚಿನಡ್ಕ, ಶ್ರೀಧರ ಶೆಟ್ಟಿ ಪುಳಿಂಚ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟ, ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ…

Read More

ಮುಂಗಾರು ಎಂಟ್ರಿಗೆ ಕರಾವಳಿಯಲ್ಲಿ ಅಲರ್ಟ್-ಕೆತ್ತಿಕಲ್ ಮತ್ತೆ ಅಪಾಯ ವಲಯವಾಗಿ ಗುರುತು

ಮಂಗಳೂರು: ಕೇರಳಕ್ಕೆ ಮುಂಗಾರು ಆಗಮಿಸಿರುವ ಬೆನ್ನಲ್ಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮೂಲಕ ರಾಜ್ಯಕ್ಕೂ ಮುಂಗಾರು ಪ್ರವೇಶಿಸುವ ನಿರೀಕ್ಷೆ ಹೆಚ್ಚಾಗಿದೆ. ಜೂನ್ ಆರಂಭಕ್ಕೂ ಮುನ್ನವೇ ಈ ಬಾರಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ತಕ್ಷಣ ತಡೆಗಟ್ಟುವ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕಳೆದ ವರ್ಷಗಳ ಮಳೆ ಅವಾಂತರಗಳು ಮತ್ತು ಅನಾಹುತಗಳು ಈ ಬಾರಿಯೂ…

Read More

ಕೋಕ್ ಸಲ್ಪರ್ ಮಾಲಿನ್ಯ ವಿರುದ್ಧ ಜೋಕಟ್ಟೆ ಗ್ರಾಮಸ್ಥರ ಹೋರಾಟ ಮೂರನೇ ದಿನಕ್ಕೆ

ಮಂಗಳೂರು: ಎಂಆರ್‌ಪಿಎಲ್‌ನ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಗಂಭೀರ ಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು, ಜನವಸತಿ ಪ್ರದೇಶದಲ್ಲಿ ಹಸಿರು ವಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಸಂತ್ರಸ್ತರಿಗೆ ಪುನರ್ವಸತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೋಕಟ್ಟೆ, ಕೆಂಜಾರು ಮತ್ತು ಕಳವಾರು ಗ್ರಾಮದ ನಿವಾಸಿಗಳು ನಡೆಸುತ್ತಿರುವ ಹಗಲು-ರಾತ್ರಿ ಧರಣಿ ಮೂರನೇ ದಿನಕ್ಕೂ ಮುಂದುವರಿಯಿತು. ಎಂಆರ್‌ಪಿಎಲ್ ಕೋಕ್ ಸಲ್ಪರ್ ಘಟಕದ ಮುಂಭಾಗ ನಡೆಯುತ್ತಿರುವ ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಈ…

Read More

ಕಡೇಶಿವಾಲಯ-ಅಜಿಲಮೊಗರು ಸೌಹಾರ್ದ ಸೇತುವೆ ಶೀಘ್ರ ಉದ್ಘಾಟನೆ: ರಮಾನಾಥ ರೈ

ಬಂಟ್ವಾಳ: ಕಡೇಶಿವಾಲಯದಿಂದ ಮಣಿನಾಲ್ಕೂರು ಗ್ರಾಮವನ್ನು ಸಂಪರ್ಕ ಮಾಡುವ “ಕಡೇಶಿವಾಲಯ- ಅಜಿಲಮೊಗರು” ಸೌಹಾರ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಉದ್ಘಾಟನೆಯಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.ಇದರ ಪೂರ್ವಭಾವಿಯಾಗಿ ಸೇತುವೆಯ ಕಾಮಗಾರಿ ವೀಕ್ಷಿಸಲು ಸ್ಥಳಕ್ಕೆ ಭೇಟಿ ಈ ವಿಚಾರವಾಗಿ ಮಾತನಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಡೇಶಿವಾಲಯ ಮತ್ತು ಮಣಿನಾಲ್ಕೂರು ಗ್ರಾಮದ ಸಂಪರ್ಕದ ಕಡೇಶಿವಾಲಯ- ಅಜಿಲಮೊಗರು ಸೇತುವೆ ಬಗ್ಗೆ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಕಡೇಶಿವಾಲಯ ದೇವಸ್ಥಾನ ಹಾಗೂ ಅಜಿಲಮೊಗರು ಮಸೀದಿಯನ್ನು ಸಂಪರ್ಕ ಮಾಡುವ ಸೌಹಾರ್ದ ಸೇತುವೆ 20…

Read More
error: Content is protected !!