ಪಂಚಾಯತ್ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಮುಚ್ಚಿದ ಭೂಪ
ಉಳ್ಳಾಲ: ಪಂಚಾಯತ್ ನಿರ್ಮಿಸಿದ ಮಳೆ ನೀರಿನ ತೋಡನ್ನು ಮುಚ್ಚಿದ ಭೂಪನೋರ್ವನ ಕೃತ್ಯವನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ನಮೊಗರು ನಿವಾಸಿ ನಾಗೇಶ್ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ(56), ಅವರ ಪುತ್ರ ರವಿರಾಜ್ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು. ಇಂದು ಬೆಳಿಗ್ಗೆ 8.30 ರ…