ಬಾರ್ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕ್ರಮ – ಅಬಕಾರಿ ಇಲಾಖೆ ಎಚ್ಚರಿಕೆ
ಉಡುಪಿ, ಜೂ.25: ಇತ್ತೀಚೆಗೆ ಮೈಸೂರಿನ ಪಬ್ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಅಬಕಾರಿ ಜಿಲ್ಲಾಧಿಕಾರಿ ಟಿ.ಎಂ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗಾಗಿ ಅಗ್ನಿ ಅವಘಡ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ಕಾರ್ಯಾಗಾರವನ್ನು ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಮಾತನಾಡಿದ ಅವರು,…
