ಜೂ. 28ರಂದು ‘ವಿಧಾತ್ರಿ ಸಂಭ್ರಮ-2026’; ‘ಜೈ ಹನುಮಾನ್’ ನಾಟಕ ಪ್ರದರ್ಶನ
ಮಂಗಳೂರು, ಜೂ.25: ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ (ರಿ.) ಸಂಸ್ಥೆಯ ವತಿಯಿಂದ ‘ವಿಧಾತ್ರಿ ಸಂಭ್ರಮ-2026’ ಕಾರ್ಯಕ್ರಮವು ಜೂನ್ 28ರಂದು ಸಂಜೆ 4.30ಕ್ಕೆ ನಗರದ ಪುರಭವನ (ಟೌನ್ ಹಾಲ್)ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಚಿದಾನಂದ ಅಡ್ಯಪಾಡಿ ಸಾರಥ್ಯದಲ್ಲಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಹಾಗೂ ಭರತ್ ಎಸ್. ಕರ್ಕೇರ ರಚನೆಯ ತುಳು-ಕನ್ನಡ ದ್ವಿಭಾಷಾ ನಾಟಕ ‘ಜೈ ಹನುಮಾನ್’ ಪ್ರದರ್ಶನಗೊಳ್ಳಲಿದೆ. ಈ ಕುರಿತು ಮಾಹಿತಿ ನೀಡಿದ ತುಳು ರಂಗಭೂಮಿ ಕಲಾವಿದ ಚಿದಾನಂದ…
