ನಿರಂತರ ತೈಲ ಬೆಲೆಯೇರಿಕೆ,ಉಜ್ವಲ ಸಿಲಿಂಡರ್ ರಿಯಾಯಿತಿ ಇಳಿಕೆ: ಕಾರ್ಮಿಕ ವರ್ಗಗಳಿಗೆ ಕೇಂದ್ರ ಸರಕಾರದ ಅನ್ಯಾಯದ SDTU ವತಿಯಿಂದ ಅಭಿಯಾನ

ಇತ್ತೀಚೆಗೆ ನಡೆಯುತ್ತಿರುವ ಮಧ್ಯ ಪ್ರಾಚ್ಯ ರಾಷ್ಟ್ರಗಳ ಯುದ್ಧದ ನೆಪವನ್ನಿಟ್ಟುಕೊಂಡು ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ತೈಲಬೆಲೆಯೇರಿಕೆ ಮಾಡುತ್ತಿದ್ದು ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದ ಸಿಲಿಂಡರ್ ಸಂಖ್ಯೆಯನ್ನು ಕಳೆದ ವರ್ಷಕ್ಕಿಂತ ಕಡಿತಗೊಳಿಸಿ ನಾಲ್ಕಕ್ಕೆ ಸೀಮಿತಗೊಳಿಸಿರುವುದು ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ‌ ಸಂಕಷ್ಟವನ್ನುಂಟು ಮಾಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಮ್ ಗುರುವಾಯನಕೆರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ…

Read More

ಮುಖರ್ಜಿ ಕನಸನ್ನು ಮೋದಿ ಸರ್ಕಾರ ನನಸು ಮಾಡಿದೆ: ಶಾಸಕ ವೇದವ್ಯಾಸ ಕಾಮತ್

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಜನಸಂಘ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಸಂಸ್ಮರಣಾ ಕಾರ್ಯಕ್ರಮವು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು. ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಅವರನ್ನು ಕೇವಲ ಜನಸಂಘದ ಸಂಸ್ಥಾಪಕರು ಎಂಬ ಕಾರಣಕ್ಕೆ ಸ್ಮರಿಸುವುದು ಅಲ್ಲ. ಬದಲಿಗೆ ಭಾರತದ ಏಕತೆಯ ರಕ್ಷಣೆ, ಬಂಗಾಳ ಹಾಗೂ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಉಳಿಸುವುದು ಸೇರಿದಂತೆ ರಾಷ್ಟ್ರಪರ ಅನೇಕ ಹೋರಾಟಕ್ಕೆ ಸರ್ವಸ್ವವನ್ನು ಅರ್ಪಿಸಿದ ಮಹಾನ್ ವ್ಯಕ್ತಿ….

Read More

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ…

Read More

9-10ನೇ ತರಗತಿಗಳಿಗೆ ಉಪನ್ಯಾಸಕರ ಬೋಧನೆ ಪ್ರಸ್ತಾವನೆಗೆ ವಿರೋಧ

ಮಂಗಳೂರು, ಜೂನ್ 25: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಬೋಧನೆ ಮಾಡಬೇಕು ಎಂಬ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) ನೇಮಕಾತಿ ನಿಯಮಗಳ ಕರಡು ತಿದ್ದುಪಡಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ವಿರೋಧಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ., ಎಸ್‌ಇಪಿ ಜಾರಿಯ ಹಂತದಲ್ಲಿರುವ ಸಂದರ್ಭದಲ್ಲಿ ಇಂತಹ ನಿಯಮ ಬದಲಾವಣೆಯ ಅಗತ್ಯವಿಲ್ಲ. ಶಿಕ್ಷಣ ತಜ್ಞರು ಹಾಗೂ ಬೋಧಕರ ಸಮಿತಿಯಿಂದ ಸಮಗ್ರ…

Read More

ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿ: ಶ್ರೀ ವಿದ್ಯಾಸಾಗರ ತೀರ್ಥ ಶ್ರೀ

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪ್ರಶಂಸನೀಯವಾಗಿದ್ದು, ಗ್ರಾಮಸ್ಥರು ಮತ್ತು ಭಕ್ತರು ಈ ಪುಣ್ಯ ಕಾರ್ಯಕ್ಕೆ ಸಹಕಾರ ನೀಡುವ ಮೂಲಕ ದೇವರ ವಿಶೇಷ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಗಳು ಕರೆ ನೀಡಿದರು. ಪೆರ್ಡೂರಿನಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ದೇವರಿಗಿಂತಲೂ ಭಕ್ತರ ಕಲ್ಯಾಣಕ್ಕಾಗಿ ನಡೆಯುವ ಕಾರ್ಯವಾಗಿದೆ. ದೇವರ ಸೇವೆ ಮತ್ತು ಆರಾಧನೆಯನ್ನು ಕರ್ತವ್ಯ ಭಾವದಿಂದ ಮಾಡಿದಾಗ ದೇವರ…

Read More

ಕುಟುಂಬದ ದೋಷ ನಿವಾರಣೆಗೆ ‘ಪ್ರೇತ ವಿವಾಹ’: ಪುತ್ತೂರಿನ ಮುಂಡೂರಿನಲ್ಲಿ ಅಪರೂಪದ ಆಚರಣೆ

ಪುತ್ತೂರು, ಜೂನ್ 25: ತುಳುನಾಡಿನ ಅಪರೂಪದ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ‘ಪ್ರೇತ ವಿವಾಹ’ (ಕುಲೆತ ಮದಿಮೆ) ಕಾರ್ಯಕ್ರಮವು ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಸಂಪ್ರದಾಯಬದ್ಧವಾಗಿ ನೆರವೇರಿತು. ವಿವಾಹವಾಗದೆ ಮೃತಪಟ್ಟಿದ್ದ ಆನಂದ ಹಾಗೂ ಸರೋಜಾ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಕುಟುಂಬದಲ್ಲಿನ ದೋಷಗಳು ನಿವಾರಣೆಯಾಗಲಿ ಎಂಬ ನಂಬಿಕೆಯಿಂದ ಸುಮಾರು 25 ವರ್ಷಗಳ ಬಳಿಕ ಈ ವಿವಾಹ ಸಂಸ್ಕಾರ ನಡೆಸಲಾಯಿತು. ನಿಶ್ಚಿತಾರ್ಥ, ಧಾರೆ, ಮಾಂಗಲ್ಯ ಧಾರಣೆ ಸೇರಿದಂತೆ ಸಾಮಾನ್ಯ ಮದುವೆಯಲ್ಲಿ ನಡೆಯುವ ಎಲ್ಲ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ಅನುಸರಿಸಲಾಯಿತು. ಜ್ಯೋತಿಷ್ಯರ ಸಲಹೆ…

Read More

ಕಡಬದಲ್ಲಿ ಜೂನ್ 26ರಿಂದ ಮೂರು ದಿನಗಳ ‘ಹಲಸು ಮೇಳ–ಕೃಷಿ ಉತ್ಸವ’

ಕಡಬ, ಜೂನ್ 25: ಜೆಸಿಐ ಕಡಬ ಕದಂಬ ಹಾಗೂ ರೈತಕುಡ್ಲ ಪ್ರತಿಷ್ಠಾನದ ಆಶ್ರಯದಲ್ಲಿ ಜೂನ್ 26ರಿಂದ 28ರವರೆಗೆ ಕಡಬದ ಅನುಗ್ರಹ ಸಭಾಂಗಣದಲ್ಲಿ ‘ಹಲಸು ಮೇಳ–ಕೃಷಿ ಉತ್ಸವ’ ಆಯೋಜಿಸಲಾಗಿದೆ ಎಂದು ರೈತಕುಡ್ಲ ಪ್ರತಿಷ್ಠಾನದ ಮುಂದಾಳು ಜೇಸಿ ಸುಹಾಸ್ ಮರಿಕೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕೃಷಿ ಸಂಘಟನೆಗಳು, ಸಹಕಾರ ಸಂಘಗಳು ಹಾಗೂ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುವ ಈ ಉತ್ಸವದಲ್ಲಿ ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳು, ಕೃಷಿ ಯಂತ್ರೋಪಕರಣಗಳು, ಸಾವಯವ ಉತ್ಪನ್ನಗಳು, ಹಣ್ಣು ಮತ್ತು ಹೂವಿನ ಸಸ್ಯಗಳ ಪ್ರದರ್ಶನ ಹಾಗೂ…

Read More

ಉಪನ್ಯಾಸಕರಿಗೆ 9-10ನೇ ತರಗತಿ ಬೋಧನೆ ಪ್ರಸ್ತಾವನೆಗೆ ತೀವ್ರ ವಿರೋಧ

ಮಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೆ ಬೋಧನೆ ಮಾಡಬೇಕು ಎಂಬ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) ನೇಮಕಾತಿ ನಿಯಮಗಳು-2013ಕ್ಕೆ 2026ರಲ್ಲಿ ಪ್ರಸ್ತಾಪಿಸಲಾದ ಕರಡು ತಿದ್ದುಪಡಿಯನ್ನು ಅನುದಾನಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಎಜುಕಾರುಣ್ಯ ಟ್ರಸ್ಟ್‌ನಿಂದ ಜೂನ್ 26ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರು, ಜೂನ್ 25: ಆರ್ಥಿಕ ಸಂಕಷ್ಟದಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎಜುಕಾರುಣ್ಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿ. ಗುರುವಪ್ಪ ಎನ್.ಟಿ. ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರದ ಎರಡನೇ ವರ್ಷದ ಕಾರ್ಯಕ್ರಮ ಜೂನ್ 26ರಂದು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್‌ದಾಸ್ ಮರಕಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್ ಪ್ರಸ್ತುತ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವು ನೀಡುತ್ತಿದ್ದು, ಬೋಧನಾ ಶುಲ್ಕದ…

Read More

ಹೆಣ್ಣುಮಕ್ಕಳ ಸುರಕ್ಷತೆ, ಆರೋಗ್ಯ ಹಾಗೂ ಕಾನೂನು ಅರಿವಿಗೆ ವಿಶೇಷ ಒತ್ತು

ಮಂಗಳೂರು, ಜೂನ್ 24: ಇಂದಿನ ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಯಲ್ಲಿ ಹೆಣ್ಣುಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಹಾಗೂ ಮಾನಸಿಕ ಸ್ಥೈರ್ಯಕ್ಕೆ ಸಂಬಂಧಿಸಿದ ಸವಾಲುಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ ಜುಲೈ ತಿಂಗಳ ಪೂರ್ತಿ ಮಂಗಳೂರಿನ ವಿವಿಧ ಹೋಬಳಿ ಮಟ್ಟದ ಶಾಲೆಗಳಲ್ಲಿ ‘ಬಾಲಿಕಾ ಜಾಗೃತಿ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಪ್ರಚಲಿತ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಹನಿಷ ಸವಾದ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More
error: Content is protected !!