ದೇರಳಕಟ್ಟೆ, ಕಟಪಾಡಿಯಲ್ಲಿ ಎಂಸಿಸಿ ಬ್ಯಾಂಕ್ನ ಹೊಸ ಶಾಖೆಗಳು
ಮಂಗಳೂರು, ಜೂನ್ 25: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆಯನ್ನು ಜೂನ್ 28ರಂದು ದೇರಳಕಟ್ಟೆಯಲ್ಲಿ ಹಾಗೂ 23ನೇ ಶಾಖೆಯನ್ನು ಆಗಸ್ಟ್ 2ರಂದು ಉಡುಪಿಯ ಕಟಪಾಡಿಯಲ್ಲಿ ಆರಂಭಿಸಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇರಳಕಟ್ಟೆ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಬ್ಯಾಂಕಿನ 16ನೇ ಎಟಿಎಂ ಕೂಡ ಇದೇ ಸಂದರ್ಭದಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು. 2025-26ನೇ ಹಣಕಾಸು ವರ್ಷದಲ್ಲಿ…
