ವಿಟ್ಲ ತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಜನಜಾಗೃತಿ ಜಾಥಾ
ವಿಟ್ಲ, ಜೂ.23: ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಹಾಗೂ ಹಿಂದಿನ ವಿಟ್ಲ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಬೇಕು ಎಂಬ ಬೇಡಿಕೆಗೆ ಜನಬೆಂಬಲ ಒಗ್ಗೂಡಿಸುವ ಉದ್ದೇಶದಿಂದ ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಸಮಿತಿಯ ವತಿಯಿಂದ ಸೋಮವಾರ ಜೈನ ಬಸದಿಯಿಂದ ನಾಡಕಚೇರಿವರೆಗೆ ಸಾಂಕೇತಿಕ ಜಾಥಾ ನಡೆಯಿತು. ಈ ವೇಳೆ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲ ತಾಲೂಕು ರಚನೆಗೆ ಸುಮಾರು 60 ವರ್ಷಗಳ ಹಿಂದಿನಿಂದಲೂ ಬೇಡಿಕೆ ಇದ್ದರೂ ಇದುವರೆಗೆ ಅದು ಈಡೇರಿಲ್ಲ ಎಂದು ಹೇಳಿದರು….
