ಸಂವಿಧಾನ ಪೀಠಿಕೆ ಜಾಗೃತಿ: ಬ್ಯಾಂಕ್ಗಳು, ಸಹಕಾರ ಸಂಘಗಳಲ್ಲಿ ಬೋರ್ಡ್ ಅಳವಡಿಕೆ ಅಭಿಯಾನ
ಮಂಗಳೂರು: ನೇತಾಜಿ ಸುಭಾಸ್ಚಂದ್ರಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಮಂಗಳೂರು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ವ್ಯವಸ್ಥಾಪಕ ಸಂಗೊಳ್ಳಿ ಸೋಮಣ್ಣ ಮಾತನಾಡಿ, ಸಹಕಾರ ಇಲಾಖೆ ಅಡಿಯಲ್ಲಿ ಬರುವ ಖಾಸಗಿ ಬ್ಯಾಂಕ್ಗಳು, ಪತ್ತಿನ ಸಹಕಾರ ಸಂಘಗಳು, ಕೋಆಪರೇಟಿವ್ ಸಂಸ್ಥೆಗಳು ಹಾಗೂ ಕೆಎಂಎಫ್ ಡೈರಿ ಮತ್ತು ಹಾಲು ಉತ್ಪಾದಕರ ಸಂಘಗಳಲ್ಲಿ ಭಾರತದ ಸಂವಿಧಾನದ ಪೀಠಿಕೆ ಬೋರ್ಡ್ ಅಳವಡಿಸಲು ಅನುಮತಿ ದೊರೆತಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆ…