ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಮಾರ್ಗ ವ್ಯವಸ್ಥೆ: ಭಕ್ತರಿಗೆ ಸುಲಭ ದರ್ಶನ ವ್ಯವಸ್ಥೆ

ಉಡುಪಿ: ಶ್ರೀಕೃಷ್ಣ ದೇವರ ದರ್ಶನಕ್ಕಾಗಿ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ದರ್ಶನ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರತಿಯೊಬ್ಬ ಭಕ್ತನಿಗೂ ಸುಗಮವಾಗಿ ದರ್ಶನ ಸಿಗುವಂತೆ ನೂತನ ಪಥವನ್ನು ರೂಪಿಸಲಾಗಿದೆ ಎಂದು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ. ಹೊಸ ವ್ಯವಸ್ಥೆಯಂತೆ ಭಕ್ತರು ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಮಾಡಿ, ಬಳಿಕ ಶ್ರೀಚಂದ್ರಮೌಳೀಶ್ವರ ಹಾಗೂ ಶ್ರೀಅನಂತೇಶ್ವರ ದೇವರ ದರ್ಶನ ಪಡೆದು, ಶ್ರೀಮನ್ ಮಧ್ವಾಚಾರ್ಯರು ಅದೃಶ್ಯರಾದ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸಲಿದ್ದಾರೆ. ನಂತರ ನವಗ್ರಹ ಕಿಂಡಿಯಲ್ಲಿ ಭಗವಂತನ ದರ್ಶನ…

Read More

ಕನ್ನಡ ಕಲಿತವರಿಗೆ ಉದ್ಯೋಗ ಸಿಕ್ಕರೆ ಮಾತ್ರ ಭಾಷಾಭಿಮಾನ ಬೆಳೆಯಲಿದೆ

ಮಂಗಳೂರು: ಕನ್ನಡದಲ್ಲಿ ಶಿಕ್ಷಣ ಪಡೆದರೆ ಉದ್ಯೋಗ ಸಿಗುವುದಿಲ್ಲ ಎಂಬ ಧಾರಣೆ ಹೆಚ್ಚುತ್ತಿರುವ ಹಿನ್ನೆಲೆ ಇಂಗ್ಲಿಷ್‌ನಲ್ಲಿ ಕಲಿಯುವ ಅನಿವಾರ್ಯತೆ ನಿರ್ಮಾಣವಾಗಿದೆ. ಕನ್ನಡದಲ್ಲಿ ಕಲಿತವರಿಗೆ ಉದ್ಯೋಗಾವಕಾಶದ ಭರವಸೆ ದೊರಕಿದಾಗ ಮಾತ್ರ ಭಾಷೆಯ ಬಗ್ಗೆ ಅಭಿಮಾನ ಬೆಳೆಯಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ…

Read More

ಬೈಂದೂರು ಬಳಿ ಸರಣಿ ಅಪಘಾತ: ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ, ಹಲವರಿಗೆ ಗಾಯ

ಬೈಂದೂರು: ಬೈಂದೂರು–ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸೇತುವೆ ಬಳಿ ಮಂಗಳವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನವು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅದರ ಹಿಂದೆ ಬರುತ್ತಿದ್ದ ಕಾರು ಕೂಡ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಪ್ರಯಾಣಿಕರು ಹಾಗೂ ಗೂಡ್ಸ್ ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಬಂದ ಗೂಡ್ಸ್ ವಾಹನ ನಿಯಂತ್ರಣ…

Read More

ಮಾ.27ರಂದು ಪವರ್‌ ಸಂಸ್ಥೆಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ

ಉಡುಪಿ: ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್‌ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ಧೀ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್‌ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್‌ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು. ಈ‌ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಹಿಳೆಯರು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು…

Read More

ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಹೃದಯಘಾತದಿಂದ ಮೃತ್ಯು

ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಸೋಮವಾರ ಸಂಜೆ ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಬೆಳಿಗ್ಗೆ ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದರು. ಪ್ರಕಾಶ್…

Read More

ಉಡುಪಿ ರಸ್ತೆ ಅಪಘಾತದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ಗಾಣಿಗ ವಿಧಿವಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರು, ಮಂಗಳವಾರ ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು ಎಂಟು ಗಂಟೆಯ ಹೊತ್ತಿಗೆ…

Read More

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿಗೆ ಪತ್ರಿಕಾಭವದಿಂದ ಗೌರವಾರ್ಪಣೆ ….. !

ಮಂಗಳೂರು:ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಇವರಿಗೆ ಮಂಗಳೂರು ಪ್ರೆಸ್ ಕ್ಲಬ್ , , ದ.ಕ.ಜಿಲ್ಲಾ ಕಾರ್ಯನಿರತ. ಪತ್ರಕರ್ತರ ಸಂಘ , ಪತ್ರಿಕಾ ಭವನ ಟ್ರಸ್ಟ್‌ ಜಂಟಿಯಾಗಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು . ಗೌರವಾರ್ಪಣೆಯನ್ನು ಹಿರಿಯ ಪತ್ರಕರ್ತರಾದ ಕೆ.ಆನಂದ ಶೆಟ್ಟಿ ನೆರವೇರಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ…

Read More

ಸಹಕಾರ ರತ್ನ , ಸಹಕಾರ ಕ್ಷೇತ್ರದ ಭೀಷ್ಮ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಒಲಿದ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿ …

ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ತನ್ನ 27 ನೇ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ – 2025 ಪ್ರಧಾನ ಕಾರ್ಯಕ್ರಮವು ಮಾರ್ಚ್ 28 ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6:00 ರಿಂದ ನಡೆಯಲಿದ್ದು, ಪ್ರಶಸ್ತಿಯನ್ನು ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ನೀಡಿ ಗೌರವಿಸಲಾಗುವುದೆಂದು ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಎಡ್ವರ್ಡ್ ಜೆ ಕೊಯೆಲ್ಹೋ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಬಂಟ್ವಾಳದಲ್ಲಿ ಶ್ರೀರಾಮ ನವಮಿ ಅಂಗವಾಗಿ ಪೂಜೆ–ಯಾಗ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಮತ್ತು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ, ಶಿವಾಜಿನಗರ–ಕಾಮಾಜೆ, ದೈಪಲ ವತಿಯಿಂದ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗ ಮಾ. 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಕೇಶವ ದೈಪಲ ತಿಳಿಸಿದ್ದಾರೆ. ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಮೂರ್ತಿ ಶ್ರೀ ರಾಜಗೋಪಾಲಾಚಾರ್ಯ ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದರು. ರಾತ್ರಿ 8…

Read More

ಕೊಣಾಜೆಯಲ್ಲಿ ಬ್ಯಾರಿ ಜನಪದ–ವಚನ ಸಾಹಿತ್ಯ ಪ್ರಚಾರೋಪನ್ಯಾಸ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ, ನಡುಪದವಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ‘ಬ್ಯಾರಿ ಜನಪದ ಮತ್ತು ವಚನ ಸಾಹಿತ್ಯ’ ಕುರಿತ ಪ್ರಚಾರೋಪನ್ಯಾಸ ಕಾರ್ಯಕ್ರಮ ಪೇಸ್ ನಾಲೆಜ್ ಸಿಟಿಯ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಡಾ. ಧನಂಜಯ ಕುಂಬ್ಳೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾಷೆ, ಸಂಸ್ಕೃತಿ ಮತ್ತು ಜನಾಂಗದ ಕುರಿತ ಸಂಶೋಧನೆಗಳು ನಿರಂತರವಾಗಿರಬೇಕು. ಸಂಶೋಧನೆಗಳು ಏಕಮುಖವಾಗದೆ, ಪ್ರಶ್ನೆ–ಉಪಪ್ರಶ್ನೆಗಳ ಮೂಲಕ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಸಹಾಯಕ ಪ್ರಾಧ್ಯಾಪಕ…

Read More
error: Content is protected !!