ಜುಲೈ 31 ರಂದು ಬಂಟ್ವಾಳದಲ್ಲಿ ಬೃಹತ್ ಉದ್ಯೋಗ ಮೇಳ ಮಾಹಿತಿ ಶಿಬಿರ: ಆಕಾಂಕ್ಷಿ ಯುವಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಮತ್ತೊಂದು ಅವಕಾಶ

ಬಂಟ್ವಾಳ: ಉದ್ಯೋಗಾಕಾಂಕ್ಷಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ‘ವಿಕಸಿತ ಬಂಟ್ವಾಳ’ ವತಿಯಿಂದ ಬೃಹತ್ ಉದ್ಯೋಗ ಮೇಳ ಮಾಹಿತ ಶಿಬಿರ ಆಯೋಜಿಸಲಾಗಿದೆ.ಜುಲೈ 31 (ಶುಕ್ರವಾರ) ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಆಕರ್ಷಕ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸ್ಥಳದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುತ್ತದೆ. ಆಗಸ್ಟ್ 7 ಮತ್ತು 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್…

Read More

ವಿವಾಹಿತೆ ಸಾವಿನ ಪ್ರಕರಣ: ಅತ್ತೆ, ಮಾವ ಸೇರಿ ಮೂವರು ಬಂಧನ

ಸುಳ್ಯ, ಜು. 24: ಸುಳ್ಯ ತಾಲೂಕಿನ ಸಂಪಾಜೆ ಸಮೀಪ ವಿವಾಹಿತೆ ಫಾತಿಮತ್ ನಿಶಾನಾ (24) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾವ ಸಿ.ಪಿ. ಅಳವಿ (54), ಅತ್ತೆ ಆಯಿಷಾ ಸಿ.ಎ. ಹಾಗೂ ನಾದಿನಿ ಫಸೀಲಾ ಸಿ.ಎ. (29) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸಂಪಾಜೆಯ ಯುವಕನೊಂದಿಗೆ ವಿವಾಹವಾಗಿದ್ದ ಫಾತಿಮತ್ ನಿಶಾನಾ ಅವರು ಜುಲೈ 18ರಂದು ಮೃತಪಟ್ಟಿದ್ದರು. ಸಾವಿನ ಮುನ್ನದ ದಿನ ತಾಯಿ ಜುಬೈದಾ ಅವರಿಗೆ ಕರೆ ಮಾಡಿ, ಅತ್ತೆ-ಮಾವರಿಂದ ಕಿರುಕುಳವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು…

Read More

ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೂಡುಬಿದಿರೆ, ಜು. 24: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅದನ್ನು ಪ್ರಶ್ನಿಸಿದವರ ವಿರುದ್ಧ ಕೇಂದ್ರ ಸರ್ಕಾರ ದಮನಕಾರಿ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ…

Read More

ಕೊಳ್ನಾಡಿನಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆಗೆ ಉತ್ತಮ ಸ್ಪಂದನೆ – ಗ್ರಾಮದಾದ್ಯಂತ ಶಿಬಿರಗಳ ಯಶಸ್ವಿ ಆಯೋಜನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯುವ ಉದ್ದೇಶದಿಂದ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಬಂಟ್ವಾಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಪವಿತ್ರ ಪೂಂಜಾ ಅವರ ನೇತ್ರತ್ವದಲ್ಲಿ‌ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರಗಳಲ್ಲಿ ಭಾಗವಹಿಸಿದ ನೂರಾರು ಫಲಾನುಭವಿಗಳು ತಮ್ಮ ದಾಖಲೆಗಳ ಪರಿಶೀಲನೆ ಹಾಗೂ…

Read More

ಮುಂಗಾರು ಎದುರಿಸಲು ಎಲ್ಲಾ ಇಲಾಖೆಗಳು ಸನ್ನದ್ಧರಾಗಲಿ: ಶಾಸಕ ಡಾ. ಭರತ್ ಶೆಟ್ಟಿ

2026-27ನೇ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳು, ಬರ ಪರಿಸ್ಥಿತಿ, ಜಾನುವಾರು ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಂಗಳೂರು ತಾಲೂಕು ಟಾಸ್ಕ್ ಫೋರ್ಸ್ ಸಭೆಯು ಮಾನ್ಯ ಶಾಸಕ ಡಾ. ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನೀರಿನ ಅಭಾವ ಉಂಟಾಗುವ ಪ್ರದೇಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ. ಭರತ್ ಶೆಟ್ಟಿ, ಅಗತ್ಯವಿರುವ ಓವರ್‌ಹೆಡ್ ಟ್ಯಾಂಕ್, ಕೊಳವೆಬಾವಿ, ಪೈಪ್‌ಲೈನ್…

Read More

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದಲ್ಲಿ ಇಂದು ಪಿಯು ವರೆಗೆ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, ಜು. 24: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜುಲೈ 24, ಶುಕ್ರವಾರ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗುರುವಾರ ತಡರಾತ್ರಿ ಹೊರಡಿಸಿರುವ ಆದೇಶದ ಪ್ರಕಾರ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ…

Read More

ಶಾಂತಿಯುತ ವಿದ್ಯಾರ್ಥಿಗಳ ಮೇಲೆ ದಮನ: AICU ಕರ್ನಾಟಕ ಆಕ್ರೋಶ

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಮನವನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯ ತೀವ್ರವಾಗಿ ಖಂಡಿಸುತ್ತದೆ. ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯದ ಅಧ್ಯಕ್ಷ ಅಲ್ವಿನ್ ಡಿ’ಸೋಜಾ, ಪಾನೀರ್, ದೆಹಲಿಯಲ್ಲಿ ‘ಸಂಸತ್ ಮಾರ್ಚ್’ ನಡೆಸುತ್ತಿದ್ದ ಶಾಂತಿಯುತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಕಣ್ಣೀರಿನ ಅನಿಲ ಪ್ರಯೋಗವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಡೆದಿರುವ ಈ ಕ್ರೂರ ದೌರ್ಜನ್ಯವನ್ನು ಖಂಡಿಸುತ್ತಾ, ಎಲ್ಲಾ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಸಂವಾದದ…

Read More

ಶ್ರೀನಿವಾಸ ವಿವಿಯಲ್ಲಿ ಎಐ ಸ್ವಯಂಚಾಲಿತ ವಾಹನ, ರಿಸೆಪ್ಷನ್ ರೋಬೋಟ್ ಅನಾವರಣ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ‘ಶ್ರೀ ವಾಹನ್’ ಹಾಗೂ ಎಐ ರಿಸೆಪ್ಷನ್ ರೋಬೋಟ್ ‘ಶ್ರೀನಿಬೋಟ್’ ಅನ್ನು ಗುರುವಾರ ಮುಕ್ಕ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆರ್ಥಿಕ ಸಹಕಾರ ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದು, ಸಂಶೋಧನೆ, ನವೋದ್ಯಮ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದತ್ತ ವಿಶ್ವವಿದ್ಯಾಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ‘ಶ್ರೀ ವಾಹನ್’ ಲಿಡಾರ್, ಎಐ ವಿಷನ್, ಜಿಪಿಎಸ್ ಮತ್ತು…

Read More

ವಿದ್ಯುತ್ ಅವಘಡದಲ್ಲಿ ಯುವಕ ಸಾವು: 7 ತಿಂಗಳಾದರೂ ಪರಿಹಾರವಿಲ್ಲ ತುಂಗಪ್ಪ ಬಂಗೇರ ಆರೋಪ

ಬಂಟ್ವಾಳ: ವಿದ್ಯುತ್ ಕಾಮಗಾರಿ ವೇಳೆ ಮೃತಪಟ್ಟ ಯುವಕನ ಕುಟುಂಬಕ್ಕೆ ಏಳು ತಿಂಗಳು ಕಳೆದರೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ ಆರೋಪಿಸಿದರು. ಬಿ.ಸಿ.ರೋಡ್‌ನ ಮೆಸ್ಕಾಂ ವಿಭಾಗ ಕಚೇರಿಯಲ್ಲಿ ಗುರುವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿ, ಕಾವಳಮುಡೂರು ಗ್ರಾಮದ ಅಕ್ಬರ್ ಆಲಿ ಮೃತಪಟ್ಟ ಪ್ರಕರಣದಲ್ಲಿ ಕುಟುಂಬ ಇನ್ನೂ ಸಂಕಷ್ಟದಲ್ಲಿದ್ದು, ಮಾನವೀಯ ನೆಲೆಯಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಂಗಳೂರು ವೃತ್ತ ಅಧೀಕ್ಷಕ ಎಂಜಿನಿಯರ್…

Read More

ಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್‌ಡಿ

ಸುರತ್ಕಲ್: ಹದಿಹರೆಯದವರಲ್ಲಿ ಕಂಡುಬರುವ ಸ್ಥೂಲಕಾಯ (Obesity) ಸಮಸ್ಯೆ, ಅದರ ಕುರಿತು ಇರುವ ಜ್ಞಾನ, ಮನೋಭಾವ ಹಾಗೂ ಆಚರಣೆಗಳ ಕುರಿತು ಅಧ್ಯಯನ ನಡೆಸಿ, ಆರೋಗ್ಯ ಶಿಕ್ಷಣದ ಪರಿಣಾಮವನ್ನು ವಿಶ್ಲೇಷಿಸಿದ ಸಂಶೋಧನೆಗಾಗಿ ದೀಕ್ಷಾ ಎಂ. ಶೆಟ್ಟಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಮೈಸೂರಿನ *ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (JSS AHER)ನ *ನಿರ್ವಹಣಾ ಅಧ್ಯಯನ ವಿಭಾಗ (Faculty of Management Studies)ದಿಂದ ನಿರ್ವಹಣಾ ಶಾಸ್ತ್ರ (Management) ವಿಷಯದಲ್ಲಿ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ…

Read More
error: Content is protected !!