ವೇಣೂರು ಕಂಬಳದಲ್ಲಿ ನಿರೂಪಕರ ಮಾತಿಗೆ ಆಕ್ಷೇಪ: ಛಾಯಾಗ್ರಾಹಕರಿಂದ ಮನವಿ

ಬಂಟ್ವಾಳ: ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರೊಬ್ಬರು ಛಾಯಾಗ್ರಾಹಕರ ವೃತ್ತಿಯ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆ ಉಭಯ ಜಿಲ್ಲೆಯ ಛಾಯಾಗ್ರಾಹಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. South Canara Photographers Association ಅಧ್ಯಕ್ಷ ನವೀನ್ ರೈ ಪಂಜಳ ಅವರ ನೇತೃತ್ವದಲ್ಲಿ ಛಾಯಾಗ್ರಾಹಕರ ಪ್ರತಿನಿಧಿಗಳು ಕಂಬಳ ಸಮಿತಿ ರಾಜ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ವೇಣೂರು ಕಂಬಳದಲ್ಲಿ ನಿರೂಪಕರಾಗಿದ್ದ ರಾಜೀವ್ ಶೆಟ್ಟಿ ಅವರು ಛಾಯಾಗ್ರಾಹಕರ ವೃತ್ತಿಯ ಬಗ್ಗೆ ಅವಮಾನಕಾರಿ ಹಾಗೂ ಅಗೌರವಪೂರ್ಣ ಮಾತುಗಳನ್ನು ಆಡಿದ್ದಾರೆ…

Read More

ಮಂಗಳೂರು ನಗರದಲ್ಲಿ ಸಿಟಿ ಬಸ್ ಸಮಸ್ಯೆ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಅನೇಕ ಸಿಟಿ ಬಸ್‌ಗಳು ನಿಗದಿತ ಮಾರ್ಗಗಳಿಗೆ ಸಂಚರಿಸದಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ನಗರದ ಕೆಲವು ಖಾಸಗಿ ಸಿಟಿ ಬಸ್‌ಗಳು ಆರ್ಥಿಕ ಕಾರಣಗಳನ್ನು ಉಲ್ಲೇಖಿಸಿ ಕೆಲ ಪ್ರದೇಶಗಳಿಗೆ ಸೇವೆಯನ್ನು ಕಡಿತಗೊಳಿಸಿರುವುದು, ಟ್ರಿಪ್‌ಗಳನ್ನು ರದ್ದುಪಡಿಸಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಬಸ್‌ಗಳನ್ನು ನಿಯೋಜಿಸಲಾಗಿದ್ದರೂ, ಅವುಗಳ ಸೇವೆಯೂ ನಂತರ ಸ್ಥಗಿತಗೊಂಡಿದೆ ಎಂದು ಅವರು ಆರೋಪಿಸಿದರು. ಈ ಪರಿಣಾಮವಾಗಿ ಶಕ್ತಿನಗರ, ಬಜಾಲ್-ಪಡ್ಪು-ಕೊಟ್ಟಾರ, ಪಡೀಲ್-ಕಣ್ಣಗುಡ್ಡೆ,…

Read More

ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್…

Read More

ಕದ್ರಿ ಮೈದಾನದಲ್ಲಿ ಮಾ.26ರಿಂದ 29ರ ತನಕ ರಜತ ಮಹೋತ್ಸವ ಶ್ರೀ ರಾಮೋತ್ಸವ … !

ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು . ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ…

Read More

ಮಾ. 26 ರಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ 14 ಮಹಿಳಾ ಸಾಧಕಿಯರಿಗೆ ಸನ್ಮಾನ ….!

ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 26ರಂದು ನಗರದ ಬಿಜೈನ ಮೆಸ್ಕಾಂ ಕಚೇರಿ ಬಳಿಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ‘ವಿಶೇಷ ಮಹಿಳಾ ದಿನಾಚರಣೆ’ ಮತ್ತು ಸಾಧಕಿಯರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ, ಹಿರಿಯ ಪತ್ರಕರ್ತರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು…

Read More

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ (ಮೇ-26): ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ…

Read More

ಹುತಾತ್ಮರ ದಿನಾಚರಣೆ: ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ, ಯುವಜನರಲ್ಲಿ ದೇಶಭಕ್ತಿ ಜಾಗೃತಿ

ಪುತ್ತೂರು/ಮಂಗಳೂರು, ಮಾರ್ಚ್ 23, 2026: ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಥಾಪರ್ ಅವರ ತ್ಯಾಗವನ್ನು ಸ್ಮರಿಸುವ ಹುತಾತ್ಮರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪಾದಯಾತ್ರೆ ನಡೆಯಿತು. ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (ಮೈ ಭಾರತ್), ದಕ್ಷಿಣ ಕನ್ನಡ, ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ 250ಕ್ಕೂ…

Read More

ವಿಟ್ಲ ಸಮೀಪ ಭೀಕರ ಅಪಘಾತ: ಬೈಕ್ ಸವಾರರು ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ–ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ವೀರಕಂಬ ಮೂಲದವರಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿಟ್ಲದ…

Read More

ಮಸೀದಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ಬಂಟ್ವಾಳದಲ್ಲಿ ಕೌಂಟರ್ ಪ್ರಕರಣ ದಾಖಲು

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳೂ ಪರಸ್ಪರ ದೂರು ನೀಡಿದ್ದು, ಕೌಂಟರ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ನಡು ಗ್ರಾಮದ ತಲೆಮೊಗರು ಮಸೀದಿ ಸಮೀಪ ಈ ಗಲಾಟೆ ನಡೆದಿದ್ದು, ಒಟ್ಟು 17 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ ದಾವೂದ್ ಅವರ ತಂಡ ಬಂದು ಹಲ್ಲೆ ನಡೆಸಿದೆ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ ಪತ್ರಿಕೆ ಬಿಡುಗಡೆ

ಮಂಗಳೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ದೇವಸ್ಥಾನದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಶಾಸಕ Vedavyas Kamath ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಯ್ಯಪ್ಪ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದು ಪುಣ್ಯದ ಫಲವಾಗಿದ್ದು, ಇಂತಹ ದೇವತಾ ಕಾರ್ಯಗಳು ಊರಿನ ಉನ್ನತಿಗೆ ಕಾರಣವಾಗುತ್ತವೆ ಎಂದರು. ಬ್ರಹ್ಮಕಲಶ ನಡೆಯುವ ಊರಿಗೆ ಸಂಕಷ್ಟಗಳು ದೂರವಾಗುತ್ತವೆ ಎಂದು…

Read More
error: Content is protected !!