ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026ಕ್ಕೆ ನವೀದ್ ಮುಲ್ಲಾ ಆಯ್ಕೆ

ಕಾಸರಗೋಡು: ಧಾರವಾಡ ಜಿಲ್ಲೆಯ ಖ್ಯಾತ ಲೇಖಕ, ಸಾಹಿತಿ ಹಾಗೂ ಸಮಾಜಸೇವಕರಾದ ನವೀದ್ ಮುಲ್ಲಾ ಅವರು ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026”ಗೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ “ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನವೀದ್…

Read More

ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ದೀನ್ ದಯಾಳ್ ಹಾಸ್ಟೆಲ್ ; ಸಚಿವ ಯು.ಟಿ.ಖಾದರ್ ಅವರಿಂದ ಪರಿಶೀಲನೆ

ಕೊಣಾಜೆ: ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ದೀನ್ ದಯಾಳ್ ವಿದ್ಯಾರ್ಥಿಗಳ ವಸತಿ‌ ಸಮುಚ್ಚಯ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ಈ ಹಾಸ್ಟೆಲ್ ಕಟ್ಟಡವು ಕರಾವಳಿಯಲ್ಲಿಯೇ ಅತ್ಯಂತ ಬೃಹತ್ತಾದ ವಸತಿ ಸಮುಚ್ಚಯವಾಗಿದೆ. ಸುಮಾರು ಆರು ಸುವ್ಯವಸ್ಥಿತ ಕಟ್ಟಡದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಉಳಿದುಕೊಳ್ಳುವ…

Read More

ಗ್ರಾಮೀಣ ಯುವಕರಿಗೆ ಉದ್ಯೋಗದ ಸೇತು: ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ಮಂಗಳೂರು, ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ ಆಳ್ವಾಸ್ ಪ್ರಗತಿ ಇಂದು ದೇಶದ ಅತ್ಯಂತ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಈ ಸಾಲಿನ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯುವಜನರಿಗೆ…

Read More

ಮಂಗಳೂರಿನ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತ ಶಂಕೆ

ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ-ಬೇಧಿ; ಪಾಲಿಕೆ ನೀರು ಕುಡಿಯಲು ಅಯೋಗ್ಯ ವರದಿ ಮಂಗಳೂರು, ಜೂನ್ 20: ನಗರದ ಬಿಜೈ ನ್ಯೂ ರಸ್ತೆ, ಬಟ್ಟಗುಡ್ಡೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸರಬರಾಜು ಮಾಡಿದ ಕುಡಿಯುವ ನೀರನ್ನು ಸೇವಿಸಿದ ಬಳಿಕ ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ-ಬೇಧಿ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಂಡುಬಂದಿರುವ ಆತಂಕಕಾರಿ ಘಟನೆ ವರದಿಯಾಗಿದೆ. ನೀರಿನ ಮಾದರಿಗಳ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿರುವುದು ಪರಿಸ್ಥಿತಿಯನ್ನು ಗಂಭೀರಗೊಳಿಸಿದೆ. ಕಳೆದ ಒಂದು ತಿಂಗಳಿನಿಂದ ಈ…

Read More

ಡಾ.ಎಚ್. ಏನ್. ಉದಯಶಂಕರ್ ಪಿ. ಎಚ್. ಡಿ. ನಿವ್ರಿತ್ತ ಪ್ರಾದ್ಯಾಪಕರು ಮಣಿಪಾಲ ಯೂನಿವರ್ಸಿಟಿ ರೀಗೆ ” ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “

ಉನ್ನತ ಶಿಕ್ಷಣ, ವಿಶ್ವವಿದ್ಯಾಲಯ ಆಡಳಿತ, ಭೂವಿಜ್ಞಾನ ಸಂಶೋಧನೆ ಹಾಗೂ ಪರಿಸರ ಅಧ್ಯಯನ ಕ್ಷೇತ್ರಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಡಾ. ಎಚ್.ಎನ್. ಉದಯ ಶಂಕರ್ ಅವರು ಶಿಕ್ಷಣ ಮತ್ತು ಸಂಶೋಧನಾ ವಲಯದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ. 1961ರ ಮೇ 20ರಂದು ಜನಿಸಿದ ಡಾ. ಉದಯ ಶಂಕರ್ ಅವರು ಮೈಸೂರು ವಿಶ್ವವಿದ್ಯಾಲಯದಿಂದ 1981ರಲ್ಲಿ ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಭೂವಿಜ್ಞಾನ ವಿಷಯಗಳಲ್ಲಿ ಬಿ.ಎಸ್‌ಸಿ. ಪದವಿ ಪಡೆದರು. ಬಳಿಕ 1983ರಲ್ಲಿ ಭೂವಿಜ್ಞಾನದಲ್ಲಿ ಎಂ.ಎಸ್‌ಸಿ. ಪದವಿಯನ್ನು ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿ…

Read More

ಸ್ನೇಹಾಲಯದ ಸೇವಾ ಕಾರ್ಯಗಳಿಗೆ ನಿಧಿ ಸಂಗ್ರಹಾರ್ಥ ಜೂನ್ 21ರಂದು ಸಂಗೀತ ರಸಮಂಜರಿ

ಮಂಗಳೂರು, ಮಾನಸಿಕ ಅಸ್ವಸ್ಥರ ರಕ್ಷಣೆ, ಚಿಕಿತ್ಸೆ, ಪುನರ್ವಸತಿ ಹಾಗೂ ಸಮಾಜದ ಮುಖ್ಯವಾಹಿನಿಗೆ ಮರುಸೇರಿಸುವ ಕಾರ್ಯದಲ್ಲಿ ತೊಡಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಬಾಚಳಿಕೆಯ ಸ್ನೇಹಾಲಯ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ನಿಧಿ ಸಂಗ್ರಹಾರ್ಥ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಜೂನ್ 21ರಂದು ಸಂಜೆ 6 ಗಂಟೆಗೆ ಮಂಗಳೂರಿನ ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ. 2009ರಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಕಳೆದ 17 ವರ್ಷಗಳಲ್ಲಿ 1,750ಕ್ಕೂ ಅಧಿಕ ಮಾನಸಿಕ ಅಸ್ವಸ್ಥರನ್ನು ರಕ್ಷಿಸಿ, ಚಿಕಿತ್ಸೆ ನೀಡಿ, ಅವರ ಕುಟುಂಬಗಳೊಂದಿಗೆ ಪುನರ್ಮಿಲನಗೊಳಿಸಿ ಪುನರ್ವಸತಿ ಕಲ್ಪಿಸಿರುವುದಾಗಿ ಸಂಸ್ಥೆ ತಿಳಿಸಿದೆ….

Read More

ಬಂಟ್ವಾಳದಲ್ಲಿ ಎರಡು ಸರ್ಕಾರಿ ಶಾಲೆಗಳಿಗೆ ಶೂನ್ಯ ದಾಖಲಾತಿ; ಶಾಲೆ ಮುಚ್ಚುವ ಭೀತಿ

ಬಂಟ್ವಾಳ, ಜೂನ್ 20: 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾತಿಯಾಗದ ಹಿನ್ನೆಲೆಯಲ್ಲಿ ಶಾಲೆಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತವಾಗಿದೆ. ತಾಲೂಕಿನ ಎಲಿಯನಡುಗೋಡು ಹಾಗೂ ನೇರಳಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು (ಎಲ್.ಪಿ. ಶಾಲೆ) ಈ ವರ್ಷ ಶೂನ್ಯ ದಾಖಲಾತಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗೆ ಯಾವುದೇ ವಿದ್ಯಾರ್ಥಿಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಈ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುವ ಭೀತಿ ಎದುರಿಸುತ್ತಿವೆ ಎಂದು ಸ್ಥಳೀಯರು ಕಳವಳ…

Read More

ಎಂಆರ್‌ಜಿ ಸಮೂಹಕ್ಕೆ ಖಾಸಗಿ ವಿಮಾನ ಸೇರ್ಪಡೆ: ಕರಾವಳಿಯ ಮೊದಲ ಉದ್ಯಮಿ ಎಂಬ ಹೆಗ್ಗಳಿಕೆಗೆ ಡಾ. ಕೆ. ಪ್ರಕಾಶ್ ಶೆಟ್ಟಿ

ಮಂಗಳೂರು, ಜೂನ್ 20: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಅತ್ಯಾಧುನಿಕ ಖಾಸಗಿ ವಿಮಾನವನ್ನು ಸೇರ್ಪಡೆಗೊಳಿಸಿದ್ದು, ಕರ್ನಾಟಕ ಕರಾವಳಿಯ ಉದ್ಯಮಿಗಳ ಪೈಕಿ ಖಾಸಗಿ ವಿಮಾನ ಹೊಂದಿರುವ ಮೊದಲ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆತಿಥ್ಯೋದ್ಯಮ, ರಿಯಲ್ ಎಸ್ಟೇಟ್ ಹಾಗೂ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಡಾ. ಪ್ರಕಾಶ್ ಶೆಟ್ಟಿ ಅವರು ಅಮೆರಿಕದಿಂದ ತರಿಸಲಾದ 14 ಆಸನಗಳ ‘ಎಂಬ್ರೇಯರ್…

Read More

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ

ಕರಾವಳಿ ಕರ್ನಾಟಕಕ್ಕೆ ಹೈಸ್ಪೀಡ್ ರೈಲು ಸಂಪರ್ಕದ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಮಂಗಳೂರು, ಜೂನ್ 20: ಬೆಂಗಳೂರು ಮತ್ತು ಮಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆಗೆ ಮತ್ತಷ್ಟು ಬಲ ಸಿಕ್ಕಿದ್ದು, ಜೂನ್ ಅಂತ್ಯದ ವೇಳೆಗೆ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ರೈಲಿನ ಪ್ರಾಯೋಗಿಕ ಸಂಚಾರ ನಡೆಯುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಭಾಗವನ್ನು ರಾಜ್ಯ ರಾಜಧಾನಿ ಬೆಂಗಳೂರಿನೊಂದಿಗೆ ವೇಗದ ರೈಲು ಸಂಪರ್ಕದ ಮೂಲಕ ಜೋಡಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಈ…

Read More

ವಾಚನಾ ವಾರಾಚರಣೆಗೆ ಚಾಲನೆ: ಓದುವಿಕೆ ಜ್ಞಾನ ವೃದ್ಧಿಗೆ ಪ್ರಮುಖ ಸಾಧನ – ರಾಜೇಶ್ವರಿ.ಬಿ

ಚೇವಾರು, ಜೂನ್ 20: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಓದುವಿಕೆ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪ್ರಮುಖ ಸಾಧನವಾಗಿದ್ದು, ಉತ್ತಮ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರವಿಕುಮಾರ್ ವಹಿಸಿದ್ದು, ವಾಚನಾ ವಾರಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಂಪನ್ಮೂಲ…

Read More
error: Content is protected !!