ಹೂಡಿಕೆದಾರರಿಗೆ ಸುಗಮ ಮಾರ್ಗ ಕಲ್ಪಿಸಿ, ಇಲಾಖಾ ಕಿರಿಕಿರಿಗೆ ಅಂತ್ಯ ಹಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು, ಜೂನ್ 20: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಹೆಚ್ಚಿನ ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೂಡಿಕೆದಾರರಿಗೆ ಸುಗಮ ಮತ್ತು ಸರಳವಾದ ವ್ಯವಸ್ಥೆ ಕಲ್ಪಿಸಬೇಕು. ಉದ್ಯಮಿಗಳು ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಕಿರಿಕಿರಿ…

Read More

ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನ: ವೆನ್ಲಾಕ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದ ಎನ್‌ಎಸ್‌ಯುಐ

ಮಂಗಳೂರು, ಜೂನ್ 19: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮೇಧಾವಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಎನ್‌ಎಸ್‌ಯುಐ (NSUI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ಹಣ್ಣುಹಂಪಲು ವಿತರಿಸಿ, ಅವರ ಆರೋಗ್ಯ ಶೀಘ್ರ ಸುಧಾರಿಸಲೆಂದು ಹಾರೈಸಲಾಯಿತು. ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಸೇವೆಗೆ ಹೆಚ್ಚಿನ…

Read More

ಕಲುಷಿತ ನೀರು ಪೂರೈಕೆ ಆರೋಪ: ಬಟ್ಟಗುಡ್ಡೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತುರ್ತು ಸಭೆ

ಮಂಗಳೂರು, ಜೂನ್ 20: ನಗರದ ಕೆಲವೆಡೆ ಸಾರ್ವಜನಿಕರಿಗೆ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೋಡು ಬಟ್ಟಗುಡ್ಡೆ ಪರಿಸರದ ಕೆಳಭಾಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಡ್ರೈನೇಜ್ ನೀರು ಸೇರಿಕೊಂಡು ಹಲವು ಮನೆಗಳಿಗೆ ಕಲುಷಿತ ನೀರು…

Read More

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ: ವಿಧಾನಸೌಧದಲ್ಲಿ ಮಹತ್ವದ ಸಮಾಲೋಚನಾ ಸಭೆ

ಬೆಂಗಳೂರು, ಜೂನ್ 19: ರಾಜ್ಯದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮಹತ್ವದ ಸಮಾಲೋಚನಾ ಸಭೆ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರಾವಳಿ ಭಾಗಗಳ ಸಮಗ್ರ ಅಭಿವೃದ್ಧಿ, ಪ್ರವಾಸೋದ್ಯಮ ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಹೂಡಿಕೆ ಆಕರ್ಷಣೆಯ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ.ಟಿ. ದೇವೇಗೌಡ ಹಾಗೂ ಸತೀಶ್ ಸೈಲ್…

Read More

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ ರಮಣೀಯ ಪ್ರದೇಶ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 21ರ ಭಾನುವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ 3ನೇ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ

ಸರಕಾರಿ ಪ್ರೌಢ ಶಾಲೆ, ಮಂಚಿ – ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ (ರಿ.) ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವಿಟ್ಲ ಘಟಕದ ಸಹಯೋಗದೊಂದಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ನಾಟ್ಯ ತರಗತಿಯ ಯಕ್ಷಧ್ರುವ ಯಕ್ಷ ಶಿಕ್ಷಣ – 2026 ಕಾರ್ಯಕ್ರಮವು ದಿನಾಂಕ: 19.06.2026 ರ ಶುಕ್ರವಾರ ಶಾಲಾ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ದೀಪ ಬೆಳಗಿ ಉದ್ಘಾಟಿಸಿದ ಶಾಲಾ…

Read More

ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಜೂ.23ರಂದು ಸಾಂಕೇತಿಕ ವೇಗ ಜಾಥಾ

ವಿಟ್ಲ, ಜೂನ್ 20: ವಿಟ್ಲವನ್ನು ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಜೂನ್ 23ರಂದು ವಿಟ್ಲ ಜೈನ ಬಸಡಿಯಿಂದ ನಾಡಕಚೇರಿವರೆಗೆ ಸಾಂಕೇತಿಕ ವೇಗ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕಾನಾ ಈಶ್ವರ ಭಟ್ ತಿಳಿಸಿದ್ದಾರೆ. ವಿಟ್ಲ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಟ್ಲ ತಾಲೂಕು ರಚನೆಗಾಗಿ ಪಕ್ಷಾತೀತವಾಗಿ ಹೋರಾಟ ನಡೆಸಲಾಗುತ್ತಿದ್ದು, ಸಮಾಜದ ಎಲ್ಲ ವರ್ಗಗಳ ಜನರು ಈ ಹೋರಾಟಕ್ಕೆ ಬೆಂಬಲ ನೀಡುವಂತೆ…

Read More

ಮುಂಗಾರು ಮಳೆ ಕೊರತೆ: ನಾಡದೋಣಿ ಮೀನುಗಾರರಲ್ಲಿ ಆತಂಕ

ಉಡುಪಿ, ಕರಾವಳಿಯಲ್ಲಿ ಮುಂಗಾರು ಪ್ರವೇಶಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವುದು ನಾಡದೋಣಿ ಮೀನುಗಾರರ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ಎರಡು ತಿಂಗಳ ನಿಷೇಧ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಆರಂಭವಾಗಬೇಕಿದ್ದರೂ, ಸಮುದ್ರದ ಪರಿಸ್ಥಿತಿ ಅನುಕೂಲಕರವಾಗದ ಕಾರಣ ಮೀನುಗಾರರು ಇನ್ನೂ ಸಮುದ್ರಕ್ಕಿಳಿಯಲು ಸಾಧ್ಯವಾಗದೆ ಕಾಯುತ್ತಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದಂತೆ ನಾಡದೋಣಿ ಮೀನುಗಾರರು ದೋಣಿಗಳು, ಬಲೆಗಳು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ಮಳೆಗಾಲದ ಅವಧಿಯಲ್ಲಿ ಯಾಂತ್ರಿಕ ದೋಣಿಗಳಿಗೆ ನಿಷೇಧ ಇರುವುದರಿಂದ ಇದೇ ಸಮಯದಲ್ಲಿ ನಾಡದೋಣಿ ಮೀನುಗಾರಿಕೆಯೇ ಸಾವಿರಾರು ಕುಟುಂಬಗಳ…

Read More

ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ತಾಯಿ ಪುಷ್ಪ ನಿಧನ

ಪುತ್ತೂರು: ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಕುಮಾ‌ರ್ ಅವರ ತಾಯಿ ಪುಷ್ಪ (86ವ) ರವರು ಜೂ.19 ರಂದು ಬೆಳಿಗ್ಗೆ ನಿಧನರಾದರು. ಮರೀಲ್ ಪ್ರಗತಿ ಲೇಔಟ್‌ನ ದಿ.ಆನಂದ ರಾವ್ ಅವರ ಪತ್ನಿ ಪುಷ್ಪ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪುತ್ರರಾದ ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್‌ ಕುಮಾರ್, ದಿನೇಶ್ ಕುಮಾ‌ರ್, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Read More

ಮಂಗಳೂರು ವಿವಿ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,:2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ ಕಾಲೇಜುಗಳಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ, ಮೂಡಬಿದಿರೆ ಕಾಲೇಜುಗಳ ಪದವಿ ಕಾರ್ಯಕ್ರಮಗಳಿಗೆ ನೇಮಕಾತಿ ನಡೆಯಲಿದೆ. ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/ಬಿಸಿಎ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ವಾಣಿಜ್ಯ ಮತ್ತು ನಿರ್ವಹಣೆ, ದೈಹಿಕ…

Read More
error: Content is protected !!