ಮಂಗಳೂರು ಬಂದರಿಗೆ ರಷ್ಯಾ ತೈಲ ಟ್ಯಾಂಕರ್, ಅಮೆರಿಕ ಅನಿಲ ನೌಕೆ ಆಗಮನ

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮಂಗಳೂರಿನ ನವ ಮಂಗಳೂರು ಬಂದರಿಗೆ ರಷ್ಯಾದ ತೈಲ ಟ್ಯಾಂಕರ್ ಹಾಗೂ ಅಮೆರಿಕದ ಅನಿಲ ಸಾಗಣೆ ನೌಕೆ ಆಗಮಿಸಿರುವುದು ಗಮನ ಸೆಳೆಯುತ್ತಿದೆ. ರಷ್ಯಾದ “ಆಕ್ವಾ ಟೈಟಾನ್” (Aqua Titan) ಹೆಸರಿನ ಬೃಹತ್ ತೈಲ ಸಾಗಣೆ ಹಡಗು ಭಾನುವಾರ ಮಂಗಳೂರು ತಲುಪಿದೆ. ಮೂಲತಃ ಚೀನಾಕ್ಕೆ ತೆರಳಬೇಕಿದ್ದ ಈ ಹಡಗು ದಕ್ಷಿಣ ಚೀನಾ ಸಮುದ್ರದಲ್ಲಿ ಸಂಚರಿಸುತ್ತಿದ್ದ ವೇಳೆ ಕಳೆದ ವಾರದ ಆರಂಭದಲ್ಲಿ ಯು-ಟರ್ನ್ ಪಡೆದು ಭಾರತದತ್ತ ಮುಖ ಮಾಡಿತ್ತು ಎಂದು ತಿಳಿದುಬಂದಿದೆ. ಇದರ ಜೊತೆಗೆ…

Read More

ಮಾರ್ಚ್ 26ರಿಂದ 28ರವರೆಗೆ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 26ರಿಂದ 28ರವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತ್ರಿದಿನ ಸಮ್ಮೇಳನಕ್ಕೆ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸಾಹಿತ್ಯೋತ್ಸವದ ಅಂಗವಾಗಿ ಅಮ್ಮೆಂಬಳ ಬಾಳಪ್ಪ ದ್ವಾರದ ಉದ್ಘಾಟನೆ ನಡೆಯಲಿದ್ದು, “ತಂತ್ರಜ್ಞಾನ–ಸಾಹಿತ್ಯ–ಸಹಬಾಳ್ವೆ”…

Read More

ಸಿದ್ದಾಪುರದಲ್ಲಿ ವಿಶ್ವ ಜಲದಿನಾಚರಣೆ: ಗಂಗಾಪೂಜೆ, ಗೋಪೂಜೆ ಮೂಲಕ ಜಲ ಸಂರಕ್ಷಣೆಗೆ ಕರೆ

ಸಿದ್ದಾಪುರ: ಗ್ರಾಮ ವಿಕಾಸ ಸಮಿತಿ, ಸಿದ್ದಾಪುರ ಹಾಗೂ ಪರ್ಯಾವರಣ ಗತಿವಿಧಿ ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ಇತಿಹಾಸ ಪ್ರಸಿದ್ಧ ಕಾಶಿಕಲ್ಲು ಕೆರೆ ವಠಾರದಲ್ಲಿ ವಿಶ್ವ ಜಲದಿನಾಚರಣೆ ಅಂಗವಾಗಿ ಗಂಗಾಪೂಜೆ, ಗೋಪೂಜೆ ಮತ್ತು ಭೂಮಿ ಸುಪೋಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಮಂಗಳೂರು ವಿಭಾಗದ ಗ್ರಾಮ ವಿಕಾಸ ಪರ್ಯಾವರಣ ವಿಭಾಗ ಪ್ರಮುಖರಾದ ಶ್ರೀಮತಿ ರಮಿತಾ ಸೂರ್ಯವಂಶಿ ಹಾಗೂ ಸಿದ್ದಾಪುರ ತಾಲೂಕು ಪರ್ಯಾವರಣ ಗತಿವಿಧಿ ಪ್ರಮುಖರಾದ ಆರ್ಗೋಡು ಶ್ರೀಕಾಂತ್ ಶೆಣೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮಿತಾ ಸೂರ್ಯವಂಶಿ…

Read More

ಮಂಗಳೂರಿನಲ್ಲಿ ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್ ನೂತನ ಶೋರೂಮ್ ಉದ್ಘಾಟನೆ

ಮಂಗಳೂರು: ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್‌ನ ನೂತನ ಶೋರೂಮ್ ಉದ್ಘಾಟನಾ ಕಾರ್ಯಕ್ರಮವು ಹಂಪನಕಟ್ಟೆಯ ಕ್ಲಾಕ್ ಟವರ್ ಸಮೀಪದಲ್ಲಿರುವ ಶೋರೂಮ್‌ನಲ್ಲಿ ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಭಾನುವಾರ, ಮಾರ್ಚ್ 22ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದರು . ಮುಖ್ಯ ಅತಿಥಿಯಾಗಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಭಾಗವಹಿಸಿದರು. ವಿಶೇಷ ಅತಿಥಿಯಾಗಿ 812 ಕಿಮೀ ಓಟದ ವಿಶಿಷ್ಟ ವಿಶ್ವ ದಾಖಲೆ ಹಾಗೂ ಗಿನ್ನೆಸ್ ದಾಖಲೆ ಸಾಧಿಸಿರುವ ಚೆಮ್ಮಣೂರು ಮಾಲೀಕ…

Read More

ಹೆಜಮಾಡಿ ಟೋಲ್ ಬಳಿ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಉಡುಪಿ: ಹೆಜಮಾಡಿ ಟೋಲ್ ಸಮೀಪದ ಟಯರ್ ಪಂಕ್ಚರ್ ಅಂಗಡಿಯಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಯಿತು. ಅಗ್ನಿ ಅವಘಡದ ಪರಿಣಾಮ ಬಾನೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ಗಿಡಮರಗಳು ಬೆಂಕಿಗಾಹುತಿಯಾದವು. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಎಚ್ಚೆತ್ತು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಹತ್ತಿರದ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದ್ದು, ಭಾರೀ ಅನಾಹುತದಿಂದ ಪಾರುಗೊಂಡಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ…

Read More

ಚಾರ್ಮಾಡಿ ಘಾಟ್ ಅಪಘಾತ: ಗಾಯಾಳು ವೃದ್ಧರೊಬ್ಬರು ಮೃತ್ಯು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮೇಲನಹಳ್ಳಿ ಗ್ರಾಮದ ಒಟ್ಟು 10 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಒಂಬತ್ತು…

Read More

ಮಾದರಿ ನಾಯಕತ್ವದ ಪ್ರತಿರೂಪ: ಶಾಸಕ ಡಾ. ಮಂಜುನಾಥ ಭಂಡಾರಿ

ವಿಧಾನ ಪರಿಷತ್ ಶಾಸಕರಲ್ಲಿ ವಿಭಿನ್ನ ಚಿಂತನೆ, ಕಾರ್ಯಶೈಲಿ ಮತ್ತು ಜನಸಂಪರ್ಕದ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿರುವವರು ಡಾ. ಮಂಜುನಾಥ ಭಂಡಾರಿ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಂದ ನಿರೀಕ್ಷಿಸುವ ಗುಣಗಳನ್ನು ಸಮರ್ಥವಾಗಿ ಅನಾವರಣಗೊಳಿಸಿರುವ ಅವರ ಕಾರ್ಯಪದ್ಧತಿ ಇತರರಿಗೆ ಮಾದರಿಯಾಗಿದೆ. ರಾಜಕೀಯವನ್ನು ಕೇವಲ ಅಧಿಕಾರದ ಸಾಧನವಾಗಿ ನೋಡುವುದಕ್ಕೆ ಬದಲಾಗಿ, ಸೇವೆಯ ಮಾರ್ಗವಾಗಿ ರೂಪಾಂತರಗೊಳಿಸಿರುವ ಅವರ ದೃಷ್ಟಿಕೋನವೇ ಅವರನ್ನು ಇತರರಿಂದ ಭಿನ್ನಗೊಳಿಸಿದೆ. ಪಕ್ಷ ರಾಜಕೀಯದಿಂದ ಚುನಾವಣಾ ರಾಜಕೀಯದ ಮೂಲಕ ಸಕ್ರಿಯ ಸೇವೆಯತ್ತಹಿಂದೆ ವಿಧಾನ ಪರಿಷತ್ ಸದಸ್ಯರೆಂದರೆ ಅಧಿವೇಶನಗಳಿಗೆ ಮಾತ್ರ ಸೀಮಿತವಾಗಿರುವುದು…

Read More

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆಯಲ್ಲಿ ಬದಲಾವಣೆ: ಪ್ಯಾಸೆಂಜರ್ ರೈಲುಗಳು ರದ್ದು, ಎಕ್ಸ್‌ಪ್ರೆಸ್‌ಗಳಿಗೆ ವಿಳಂಬ

ಮಂಗಳೂರು: ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ನಡುವೆ ಸಂಚರಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಪ್ರಮುಖ ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಿಸಿದೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಹಾಗೂ ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ–ಮಂಗಳೂರು ಪ್ಯಾಸೆಂಜರ್) ರೈಲುಗಳನ್ನು ಒಟ್ಟು 35 ದಿನಗಳ ಕಾಲ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಇದರೊಂದಿಗೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಎಕ್ಸ್‌ಪ್ರೆಸ್…

Read More

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಫರಾಜ್ @ ಮೊಹಮ್ಮದ್ ಫರಾಜ್, ಬಂಧಿತ ಯುವಕ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ…

Read More

ಕೋಟಿಮುರ-ಸರಿಪಳ್ಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: 1.80 ಕೋಟಿ ಅನುದಾನ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ – ಸರಿಪಳ್ಳ ಸಂಪರ್ಕಿಸುವ ಮುಖ್ಯ ರಸ್ತೆಯು 1.80 ಕೋಟಿ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸುಮಾರು 900 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯ ಅಗತ್ಯತೆಯ ಕುರಿತು ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು,…

Read More
error: Content is protected !!