ಅಶೋಕ್ ರೈಗೆ ಸಚಿವ ಸ್ಥಾನ ಚರ್ಚೆ ಮತ್ತೆ ಗರಿಗೆದರಿತು.ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ತೆರಳಿದ ಶಾಸಕ
ಪುತ್ತೂರು, ಜೂನ್ 19: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯ ಸಂದರ್ಭದಲ್ಲೇ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಮೊದಲ ಹಂತದ ಸಚಿವ ಸಂಪುಟದಲ್ಲೇ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಮೂಡಿತ್ತು….
