ಕಲ್ಲಡ್ಕ ಫ್ಲೈಓವರ್ ನಿರ್ಮಾಣ ಪೂರ್ಣ; ಸಮಸ್ಯೆಗಳು ಮಾತ್ರ ಯಥಾಸ್ಥಿತಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಂಡಿರುವ 2.1 ಕಿ.ಮೀ ಉದ್ದದ ಫ್ಲೈಓವರ್ ರಾಜ್ಯದ ಗಮನ ಸೆಳೆದಿದ್ದರೂ, ಸ್ಥಳೀಯರ ಸಮಸ್ಯೆಗಳು ಮಾತ್ರ ಇನ್ನೂ ಬಗೆಹರಿದಿಲ್ಲ ಎಂಬ ಆರೋಪ ಕೇಳಿಬಂದಿದೆ. ಫ್ಲೈಓವರ್ ನಿರ್ಮಾಣದ ಅವಧಿಯಲ್ಲಿ ಧೂಳು, ವಾಹನ ಸಂಚಾರದ ಅಡಚಣೆ ಹಾಗೂ ವ್ಯಾಪಾರ ವಹಿವಾಟಿನ ಕುಸಿತದಿಂದ ಸ್ಥಳೀಯ ವ್ಯಾಪಾರಿಗಳು ಸಂಕಷ್ಟ ಅನುಭವಿಸಿದ್ದರು. ಕಾಮಗಾರಿ ಪೂರ್ಣಗೊಂಡ ಬಳಿಕವೂ ಸರ್ವೀಸ್ ರಸ್ತೆಯ ಅವ್ಯವಸ್ಥೆ, ಪಾರ್ಕಿಂಗ್ ಸಮಸ್ಯೆ ಹಾಗೂ ಸಂಚಾರ ನಿಯಮ ಉಲ್ಲಂಘನೆಗಳು ಮುಂದುವರಿದಿವೆ ಎಂದು…

Read More

ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ: ಗೃಹ ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಒತ್ತಾಯ

ಕಾವೂರು: ಮಹಿಳಾ ಗೃಹ ಕಾರ್ಮಿಕರ ಸಬಲೀಕರಣ ಯೋಜನೆ-ಸೇವಕ ಮಂಗಳೂರು ಇದರ ವತಿಯಿಂದ ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕಾವೂರು ಸೊಸೈಟಿ ಹಾಲ್‌ನಲ್ಲಿ ನಡೆಯಿತು. ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಮನೆ ಚೆನ್ನಾಗಿದ್ದರೆ ನಮ್ಮ ಮನಸ್ಸು ಇಡೀ ಪ್ರಪಂಚ ಚೆನ್ನಾಗಿರುತ್ತೆ ಇದಕ್ಕೆಲ್ಲ ಕಾರಣ ಗೃಹ ಕಾರ್ಮಿಕರು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲೆ ಮಾನಸ ಹೆಗಡೆ ಸಂಪನ್ಮೂಲ…

Read More

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: AI, ಮೆಕ್ಯಾನಿಕಲ್ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಪ್ರವೇಶ ಆರಂಭ

ಮಂಗಳೂರು:ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಕೆಲವು ಕೋರ್ಸ್‌ಗಳಲ್ಲಿ ಸೀಟುಗಳು ಖಾಲಿ ಉಳಿದಿವೆ ಎಂದು ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್…

Read More

ಸಜಿಪದಲ್ಲಿ ಭೀಕರ ರಸ್ತೆ ಅಪಘಾತ 22 ವರ್ಷದ ಅಹಮದ್ ಆಸೀರ್ ಸ್ಥಳದಲ್ಲೇ ಸಾವು

ಬಂಟ್ವಾಳ, ಜೂನ್ 20: ಮುಡಿಪು–ಬಿ.ಸಿ.ರೋಡ್ ರಸ್ತೆಯ ಸಜಿಪ ಎಂಬಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಹಮದ್ ಆಸೀರ್ ಅವರು ಸಂಜೆ ತಮ್ಮ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ…

Read More

ಕಳೆದ ವರ್ಷ ತುಂಬಿ ಹರಿದ ನದಿ, ಈ ವರ್ಷ ಮರಳುಗಾಡು: ಉಪ್ಪಿನಂಗಡಿಯಲ್ಲಿ ಆತಂಕ

ಸಂಗಮ‌ ತಾಣವೆಂದು ಪ್ರಸಿದ್ಧಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು ಕಾಣುತ್ತಿರುವ ಪೋಟೋ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.ಕಳೆದ ವರ್ಷ 2025 ರ ಜೂನ್ ತಿಂಗಳ 15 ರಂದು ನದಿಯ ನೀರನ ಮಟ್ಟ ಹಾಗೂ 2026 ರ ಜೂನ್ ತಿಂಗಳ 15 ರಂದು ನದಿಯ ನೀರಿನ‌ ಮಟ್ಟವನ್ನು ತುಲನೆ ಮಾಡಿದ ಪೋಟೋ ಸಖತ್ ವೈರಲ್ ಆಗಿದೆ. ನೇತ್ರಾವತಿ – ಕುಮಾರದಾರ ಸಂಗಮ ಕ್ಷೇತ್ರ ಎಂದೇ…

Read More

ಮಂಗಳೂರಿನಿಂದ ಬಂಟ್ವಾಳಕ್ಕೆ ಸೆನ್ ಠಾಣೆ ಸ್ಥಳಾಂತರ? ಕಟ್ಟಡ ಕಾಮಗಾರಿ ಬಹುತೇಕ ಪೂರ್ಣ

ಬಂಟ್ವಾಳ: ಡಿಜಿಟಲ್ ಯುಗದ ಜೀವನ ಶೈಲಿಯ ಪ್ರಸ್ತುತದ ದಿನಗಳಲ್ಲಿ ಅತೀ ಹೆಚ್ಚು ಅಪರಾಧಗಳು ನಡೆಯುವ ಸೈಬರ್ ಕ್ರೈಮ್ ಗಳ ಶೀಘ್ರ ಪತ್ತೆಗೆ ಅನುಕೂಲವಾಗುವಂತೆ ಬಂಟ್ವಾಳ ದಲ್ಲಿ ನಿರ್ಮಾಣವಾಗುತ್ತಿರುವ ಸೆನ್ ಪೋಲೀಸ್ ಠಾಣೆಯ ಕೆಲಸ ಕಾರ್ಯಗಳು ಬಹುತೇಕ ಪೂರ್ಣವಾಗಿದ್ದು ಇನ್ನೇನು ಉದ್ಘಾಟನೆ ಭಾಗ್ಯ ಕಾಣಬೇಕಾಗಿದೆ‌. ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸೆನ್(ಸೈಬರ್, ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್) ಪೊಲೀಸ್ ಠಾಣೆಯನ್ನು ಬಂಟ್ವಾಳಕ್ಕೆ ಸ್ಥಳಾಂತರಿಸುವ ದೃಷ್ಟಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹಿಂಬದಿ ಇರುವ ಠಾಣೆಯ ಹಳೆಯ ಕಟ್ಟಡವನ್ನು ಮಂಗಳೂರು…

Read More

ಮಂಗಳೂರು ದಕ್ಷಿಣ ಜೆಡಿಎಸ್ ಸಂಘಟನಾ ಸಭೆ ಯಶಸ್ವಿ ಹಲವರ ಪಕ್ಷ ಸೇರ್ಪಡೆ; ಸಂಘಟನೆ ಬಲವರ್ಧನೆಗೆ ಮುಖಂಡರ ಕರೆ

ಮಂಗಳೂರು, ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ (203)ದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು, ಮುಂಬರುವ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸುವುದು ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಷೇತ್ರ ಕಾರ್ಯಾಧ್ಯಕ್ಷ ವಸಂತ ಪೂಜಾರಿ, ಜೆಡಿಎಸ್ ಪಕ್ಷದ ತತ್ವ-ಸಿದ್ಧಾಂತಗಳು, ರೈತಪರ ಹಾಗೂ ಜನಪರ…

Read More

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ,ಹಳೀರ ದಲ್ಲಿ ರಸ್ತೆಯಲ್ಲಿಯೇ ನೀರು ತುಂಬಿದೆ, ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು,ಈ ಕಾಮಗಾರಿ ಆರಂಭಗೊಂಡು ಇಂದಿನವರೆಗೆ ಅಂದರೆ ನಾಲ್ಕು ಐದು ವರ್ಷಗಳಿಂದ ಜನರು ಮತ್ತು ವಾಹನ ಸವಾರರು ಅನುಭವಿಸಿದ ಸಂಕಷ್ಟಗಳು ಅಷ್ಟಿಷ್ಟಲ್ಲ,ಆಯಾ ಪರಿಸರದ ಜನರು ಮತ್ತು ವಾಹನ ಸವಾರರು ಅದೆಷ್ಟೇ ಸಂಕಷ್ಟಪಟ್ಟರೂ ಕ್ಯಾರೇ ಅನ್ನದ ಗುತ್ತಿಗೆ ವಹಿಸಿಕೊಂಡ ಕೆಎನ್‌ಆರ್ ಕಂಪೆನಿಯು ತಮಗೆ ಮನಸ್ಸು ಬಂದಂತೆ ವಟ್ರಾಸಿ ಕೆಲಸ ಮಾಡುತ್ತಾ ಹೋಗುತ್ತಿದೆ,ಮಂಗಳೂರು ಕಡೆಯಿಂದ ಮಾಣಿ ಪೇಟೆ ಪ್ರವೇಶಿಸಲು ಅಥವಾ ಪುತ್ತೂರು ಮೈಸೂರು ರಸ್ತೆ ಪ್ರವೇಶಿಸಲು ಬರುವ ವಾಹನಗಳು ಮಾಣಿ ಗ್ರಾಮದ ಹಳೀರ…

Read More

ಅಂಗವೈಕಲ್ಯ ಹಕ್ಕುಗಳ ಕುರಿತು ‘ಡಿಎನ್‌ಎ ಕರಾವಳಿ ಧ್ವನಿ’ ಜಾಗೃತಿ ಕಾರ್ಯಕ್ರಮ ಜೂನ್ 23ರಂದು

ಮಂಗಳೂರು,: ಅಂಗವೈಕಲ್ಯ ಹಕ್ಕುಗಳು, ಸಮಗ್ರ ಅಭಿವೃದ್ಧಿ ಹಾಗೂ ಸಮಾಜದ ಭಾಗವಹಿಸುವಿಕೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಡಿಎನ್‌ಎ ಕರಾವಳಿ ಧ್ವನಿ” ಎಂಬ ಒಂದು ದಿನದ ಜಾಗೃತಿ ಮತ್ತು ಸಂವಾದ ಕಾರ್ಯಕ್ರಮವು ಜೂನ್ 23ರಂದು ಮಂಗಳೂರಿನ ಕದ್ರಿಯ ಸರ್ಕ್ಯೂಟ್ ಹೌಸ್ ಸಮೀಪದ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಲಿದೆ ಎಂದು ಅರಿವು ಅರ್ಲಿ ಇಂಟರ್ವೆನ್ಷನ್ ಸೆಂಟರ್‌ನ ಸ್ಥಾಪಕ ನಿರ್ದೇಶಕಿ ಪೂರ್ಣಿಮಾ ಭಟ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಮೂಲದ ಡಿಸೆಬಿಲಿಟಿ ಎನ್‌ಜಿಒ…

Read More

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಮಂಗಳೂರು, ಜೂನ್ 19: ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ವ್ಯಕ್ತಿತ್ವ ವಿಕಸನವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಸಿಸಿ ಬ್ಯಾಂಕ್ ಅಧ್ಯಕ್ಷ…

Read More
error: Content is protected !!