ಯುವಶಕ್ತಿ ಸೇವಾಪಥ ಘಟಕದ 4ನೇ ವಾರ್ಷಿಕೋತ್ಸವ ಜೂನ್ 22ರಂದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವಶಕ್ತಿ ಸೇವಾಪಥ ಘಟಕದ ವತಿಯಿಂದ, ಟೀಮ್ ಸನಾತನ್ ಮಂಗಳೂರು ಆಶ್ರಯದಲ್ಲಿ 4ನೇ ವಾರ್ಷಿಕ ಕಾರ್ಯಕ್ರಮವು ಜೂನ್ 22ರಂದು ಉರ್ವದ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ವಿವಿಧ ಸೇವಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಟೀಮ್ ಸನಾತನ್ ಮಂಗಳೂರು ಅಧ್ಯಕ್ಷ ಸಾಯಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರದೊಂದಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಯಿಂದ ಕೀರ್ತನ್ ನಾಯ್ಕ್…

Read More

ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಬಂಧನಕ್ಕೆ ಸುಮತಿ ನಾಯಕ್ ಆಗ್ರಹ …. !

ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ಹಾನಿ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್ಸೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಆಗ್ರಹಿಸಿದ್ದಾರೆ . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಈ ಸಂಬಂಧವಾಗಿ…

Read More

ಮಂಗಳೂರು ಬಜಾಲ್‌ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಶುಕ್ರವಾರ ಸಂಭ್ರಮದಿಂದ ಈದುಲ್ ‌ಫಿತ್ರ್ ಆಚರಿಸಲಾಯಿತು.ಈದ್ ಸಂದೇಶ ನೀಡಿ ಮಾತನಾಡಿದ ಖತೀಬ್ ಅಲ್ ಹಾಜ್ ಅಬ್ದುಲ್ ನಾಸೀರ್ ಸಾದಿ, ಬಡವರು, ಅನಾಥರು ಮತ್ತು ಅಸಹಾಯಕರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ ಆಗಿದೆ. ಈದ್ ಹಬ್ಬವು ಕೇವಲ ಸಂಭ್ರಮದ ಹಬ್ಬವಲ್ಲ, ಅದು ತ್ಯಾಗ, ಸಹಾನುಭೂತಿಯ ಸಂಕೇತವಾಗಿರಬೇಕು ಎಂದು ಹೇಳಿದರು. ನಾವು ಪರಸ್ಪರ ವೈಷಮ್ಯ, ಕಚ್ಛಾಟಗಳನ್ನು ಬದಿಗಿಟ್ಟು ಸೌಹಾರ್ದತೆಯಿಂದ ಜೀವನ ನಡೆಸಬೇಕು. ಅಲ್ಲಾಹು ನೀಡಿದ ಆರೋಗ್ಯ, ಸಂಪತ್ತು ಮತ್ತು ಸಮಯ ಎಂಬ ಅಮೂಲ್ಯ…

Read More

ಪೆರ್ಡೂರು ಶ್ರೀ‌ ಅನಂತಪದ್ಮನಾಭ ದೇವಸ್ಥಾನದ ಅಸ್ಥಿತ್ವ ಉಳಿಸಲು ಹೋರಾಟ ಅನಿವಾರ್ಯ- ತಂತ್ರಿ ವಿದ್ವಾನ್‌ ಕೆ.ಪಿ. ಕುಮಾರ ಗುರು

ದೇವಸ್ಥಾನದ ಭೂಮಿ, ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣವಾಗಲಿ ಉಡುಪಿ: ಪೆರ್ಡೂರು ಶ್ರೀ‌ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ನಾವೆಲ್ಲರೂ ಕಟಿಬದ್ಧರಾಗಿ ಪಾಲ್ಗೊಳ್ಳಬೇಕು.‌ ದೇವಸ್ಥಾನದ ಭೂಮಿ ಹಾಗೂ ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯಬೇಕು ಎಂದು ದೇವಸ್ಥಾನದ ತಂತ್ರಿ ವಿದ್ವಾನ್‌ ಕೆ.ಪಿ. ಕುಮಾರ ಗುರು ಕರೆನೀಡಿದರು.ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ‌ ಅವರು ಮಾತನಾಡಿದರು. ದೇವಸ್ಥಾನದ ಭೂಮಿ ಮತ್ತು ಪರಿದಿಯನ್ನು ಉಳಿಸುವುದು ಪ್ರತಿಯೊಂದು ಗ್ರಾಮಸ್ಥರ ಕರ್ತವ್ಯ. ಅರ್ಜಿಯ ಮೂಲಕ‌ ಸಮಸ್ಯೆ ಬಗೆಹರಿಯುವುದಿಲ್ಲ‌. ಇದಕ್ಕೆ ಹೋರಾಟವೇ…

Read More

ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಗಣೇಶ್…

Read More

ನೂರುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ಪ್ರದೇಶದಲ್ಲಿರುವ ನೂರುದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಸೀದಿಯಲ್ಲಿ ಸಾಮೂಹಿಕ ಈದ್ ನಮಾಜ್ ಹಾಗೂ ಖುತ್ಬಾ ಪಾರಾಯಣ ಕಾರ್ಯಕ್ರಮಗಳು ನೆರವೇರಿದವು. ನೂರುದ್ದೀನ್ ಜುಮಾ ಮಸೀದಿಯ ಖತೀಬರಾದ ಆಸಿಫ್ ದಾರಿಮಿ ಅವರು ನಮಾಜ್ ಹಾಗೂ ಖುತ್ಬಾ ನೆರವೇರಿಸಿ, ಭಕ್ತರಿಗೆ ಶಾಂತಿ, ಸಹನೆ ಮತ್ತು ಸಹಬಾಳ್ವೆಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮಸೀದಿ ಅಧ್ಯಕ್ಷ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಗಳೂರು: ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸವನ್ನು ಆಚರಿಸಿದ ಮುಸ್ಲಿಂ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದಲೇ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು, ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆಯಿತು. ಹಬ್ಬದ ಅಂಗವಾಗಿ ನೆರೆಮನೆ ಹಾಗೂ ಬಂಧು-ಬಳಗದ ಮನೆಗಳಿಗೆ ಭೇಟಿ ನೀಡಿ ಸೌಹಾರ್ದತೆಯನ್ನು ಬಲಪಡಿಸಲಾಯಿತು. ಜಿಲ್ಲೆಯ ಬಹುತೇಕ…

Read More

ತಲೆನೋವಿಗೆ ಔಷಧಿ ಸೇವಿಸಿ 10 ವರ್ಷದ ಬಾಲಕ ಸಾವು: ಕಡಬದಲ್ಲಿ ಪ್ರಕರಣ ದಾಖಲು

ಕಡಬ: ತಲೆನೋವಿನ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕಡಬ ತಾಲೂಕಿನಲ್ಲಿ ವರದಿಯಾಗಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ದೂರಿನಂತೆ, ಅವರ 10 ವರ್ಷದ ಮಗನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಮಾರ್ಚ್ 18, 2026 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಬಳಿಕ ಬಾಲಕ ಅಸ್ವಸ್ಥಗೊಂಡು ಮನೆಯಲ್ಲಿ ಹೊರಳಾಡುತ್ತಿರುವುದಾಗಿ ಪತ್ನಿ ತಿಳಿಸಿದ್ದಾಳೆ. ತಕ್ಷಣ ಮನೆಗೆ ಬಂದ ಸಂಜೀವ ಪೂಜಾರಿ ಅವರು ಮಗನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ…

Read More

ಬಂಟ್ವಾಳದಲ್ಲಿ ಕುಡಿಯುವ ನೀರಿನ ಸಂಕಷ್ಟ: ನೇರಂಬೋಳು ನಿವಾಸಿಗಳ ಸಂಕಟ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ನೇರಂಬೋಳು ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಿ, ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪುರಸಭೆಯ ಗಮನ ಸೆಳೆಯಲು ಮುಂದಾಗಿದ್ದಾರೆ. ಈ ಪ್ರದೇಶದಲ್ಲಿ ಎರಡು ದಿನಕ್ಕೊಮ್ಮೆ ಕೇವಲ ಅರ್ಧ ಗಂಟೆ ಮಾತ್ರ ನೀರು ಸರಬರಾಜಾಗುತ್ತಿದ್ದು, ಅದೂ ಸಹ ಸಮರ್ಪಕ ಒತ್ತಡದಲ್ಲಿ ಬರದೆ ಸುಮಾರು 750 ಲೀಟರ್ ಮಾತ್ರ ಸಂಗ್ರಹವಾಗುತ್ತಿದೆ. ಈ ಪ್ರಮಾಣ ದಿನನಿತ್ಯದ ಅಗತ್ಯಗಳಿಗೆ ಸಾಲದೆ, ಮನೆಮಠದ ಕೆಲಸಗಳು ಕಷ್ಟಕರವಾಗಿವೆ. ಆರ್ಥಿಕವಾಗಿ…

Read More

ಯುಗಾದಿ ಹಬ್ಬಕ್ಕೆ ಕರಾವಳಿಗೆ ಶುಭಾಶಯ: ಶರವು ಮಹಾಗಣಪತಿ ದೇವಸ್ಥಾನದಲ್ಲಿ ಉತ್ಸವ ಆರಂಭ

ಮಂಗಳೂರು: ಕರಾವಳಿ ಭಾಗದ ಸಮಸ್ತರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಶರವು ಮಹಾಗಣಪತಿ ದೇವಾಲಯ ಹಾಗೂ ಆಡಳಿತ ಮಂಡಳಿಯ ಪರವಾಗಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಹೊಸ ಸಂವತ್ಸರವನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶರವು ಮಹಾಗಣಪತಿ ದೇವಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೂರ್ಯೋದಯ–ಸೂರ್ಯಾಸ್ತಗಳ ನಡುವೆ ಕಾಲಚಕ್ರ ನಿರಂತರವಾಗಿ ಮುಂದುವರಿಯುತ್ತಿದ್ದು, ವರ್ಷಗಳ ಬದಲಾವಣೆಯೊಂದಿಗೆ ಋತುಗಳ ಪರಿವರ್ತನೆ ಸಹ ಸಹಜವಾಗಿವೆ ಎಂದು ಹೇಳಿದರು. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಸಂವತ್ಸರ ಬದಲಾವಣೆಗೆ ವಿಶೇಷ ಮಹತ್ವವಿದ್ದು, ಯುಗಾದಿ…

Read More
error: Content is protected !!