ಬಿಳಿನೆಲೆ ಸಿಎ ಬ್ಯಾಂಕ್ ವಿರುದ್ಧದ ಆರೋಪಗಳು ಆಧಾರರಹಿತ: ವಾಡ್ಯಪ್ಪ ಗೌಡ
ಕಡಬ,ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಸಿಎ ಬ್ಯಾಂಕ್) ವ್ಯವಹಾರಗಳ ಕುರಿತು ಕೆಲವರು ಸುಳ್ಳು ಆರೋಪ ಹಾಗೂ ಅಪಪ್ರಚಾರ ನಡೆಸುತ್ತಿದ್ದು, ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ಅಥವಾ ಅವ್ಯವಹಾರ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಸ್ಪಷ್ಟಪಡಿಸಿದರು. ಮಂಗಳವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಆಡಳಿತ ಮಂಡಳಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯ ಬಹಿರಂಗವಾಗಲೆಂದು ಕೋಡಿಂಬಾಳದ ಕಾರಣಿಕ ಕ್ಷೇತ್ರ ಮಜ್ಜಾರು ಶ್ರೀ ರಾಜನ್ ದೈವದ…
