ಬಂಟ್ವಾಳದಲ್ಲಿ ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ: ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಸುದೀರ್ಘ 12 ವರ್ಷಗಳ ಜನಪರ ಆಡಳಿತ, ಅಭಿವೃದ್ಧಿ ಮತ್ತು ಸೇವಾ ಸಂಕಲ್ಪದ ಅಂಗವಾಗಿ ಬಂಟ್ವಾಳ ಮಂಡಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರಿಂದ ವಿಶೇಷ ಸಂಪರ್ಕ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹಿರಿಯರ ಸೂಚನೆಯಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರ ಜೊತೆ ಹಿರಿಯ ಬಿಜೆಪಿ ಕಾರ್ಯಕರ್ತರ ಮನೆಗೆ ಬೇಟಿ ನೀಡಿ ಗೌರವಿಸುವ ಕಾರ್ಯ ಮಾಡಿದ್ದೇನೆ‌…

Read More

ಸಾಮರ್ಥ್ಯ ಮೀರಿ ಪ್ರಯಾಣ: ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಪಲ್ಟಿ

ತೊಕ್ಕೊಟ್ಟು, ಜೂ.17: ದ್ವಿಚಕ್ರ ವಾಹನದಲ್ಲಿ ನಾಲ್ವರು ಬಾಲಕಿಯರು ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತೊಕ್ಕೊಟ್ಟಿನ ಎಬಿಸಿ ಕ್ಲಬ್ ಸಮೀಪ ನಡೆದಿದೆ. ವಾಹನವು ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಮಗುಚಿಬಿದ್ದಿದ್ದು, ಅಪಘಾತಕ್ಕೂ ಮುನ್ನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆಯುವ ಅಪಾಯ ಎದುರಾಗಿತ್ತು. ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳಲ್ಲಿ ಸಾಮರ್ಥ್ಯ ಮೀರಿ ಪ್ರಯಾಣಿಸುವ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ…

Read More

ಜೂನ್ 19ರಂದು ಮಂಗಳೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ ಕಾರ್ಯಕ್ರಮ

ಮಂಗಳೂರು, ಜೂ.17: ಉದ್ಯೋಗ ಸೃಷ್ಟಿ, ಸಾಮಾಜಿಕ ಭದ್ರತಾ ವ್ಯಾಪ್ತಿ ವಿಸ್ತರಣೆ ಹಾಗೂ ಉದ್ಯೋಗಾರ್ಹತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ (ಪಿಎಂವಿಬಿಆರ್‌ವೈ) ಕುರಿತ ಜಾಗೃತಿ ಮತ್ತು ಫಲಾನುಭವಿಗಳ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ನಗರದ ಬಂದರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಪಿಎಫ್ ಆಯುಕ್ತ ಸಂದೀಪ್ ಬಿಸ್ವಾಸ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಸಾಹಿತ್ಯ ಲೋಕದಿಂದ ಬೆಳ್ಳಿಪರದೆಗೆ: ‘ಅದಿತಿ’ ಚಿತ್ರದ ಮೂಲಕ ಹೊಸ ಹೆಜ್ಜೆ ಇಟ್ಟ ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್

ಮಂಗಳೂರು: ಎರಡು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಖ್ಯಾತ ಲೇಖಕ ಹಾಗೂ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮಾರ್ ಅವರ ಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಎ ಐ ಆಧಾರಿತ ‘ಅದಿತಿ’ ಚಲನಚಿತ್ರ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನದ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರದೀಪ್ ಕುಮಾರ್ ಅವರು 50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದು, ಅವುಗಳಲ್ಲಿ 30ಕ್ಕೂ ಅಧಿಕ ಕೃತಿಗಳು ‘ಸುಧಾ’, ‘ತರಂಗ’, ‘ಮಂಗಳ’, ‘ಕರ್ಮವೀರ’…

Read More

ಎತ್ತಿನಹೊಳೆ ಯೋಜನೆ ಕುರಿತು ಕರಾವಳಿ ಭಾಗದ ಆತಂಕಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ: ಎಎಪಿ ಆಗ್ರಹ

ಮಂಗಳೂರು, ಜೂ.17: ಎತ್ತಿನಹೊಳೆ (ನೇತ್ರಾವತಿ ನದಿ ತಿರುವು) ಯೋಜನೆಯಿಂದ ಕರಾವಳಿ ಭಾಗದ ಪರಿಸರ, ಜೀವವೈವಿಧ್ಯ ಹಾಗೂ ಕುಡಿಯುವ ನೀರಿನ ಭದ್ರತೆಗೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ನೀರಿನ ಕೊರತೆ ಮತ್ತು ಫ್ಲೋರೈಡ್ ಸಮಸ್ಯೆ ನಿವಾರಣೆಗೆ 2012ರಲ್ಲಿ ಆರಂಭಗೊಂಡ ಯೋಜನೆಯ ವೆಚ್ಚ ಆರಂಭಿಕ ₹9,000 ಕೋಟಿಯಿಂದ ₹23,000…

Read More

ಜೂ.20-21ರಂದು ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ

ಮಂಗಳೂರು, ಕಲ್ಕೂರ ಪ್ರತಿಷ್ಠಾನ ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿವಿಧ ತಳಿಯ ಮಾವು ಮತ್ತು ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳವು ಜೂನ್ 20 ಮತ್ತು 21ರಂದು ಕದ್ರಿ ಕಂಬಳದ ಮಲ್ಲಿಕಾ ಬಡಾವಣೆಯಲ್ಲಿರುವ ‘ಮಂಜು ಪ್ರಾಸಾದ’ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡು-ನುಡಿ ಜಾಗೃತಿ ಸಮ್ಮೇಳನ ಸರಣಿಯ ಅಂಗವಾಗಿ ಆಯೋಜಿಸಿರುವ…

Read More

ಮತದಾರರ ಜಾಗೃತಿಗೆ ಕಾಂಗ್ರೆಸ್ ಮನೆಮನೆ ಭೇಟಿ ಅಭಿಯಾನ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಜೂ. 30 ರಿಂದ ಜು. 29 ರ ವರೆಗೆ ನಡೆಯಲಿದೆ. ಚುನಾವಣಾ ಆಯೋಗದ ಮೂಲಕ…

Read More

ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರತಿನಿಧಿ ಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಅಶ್ರಫ್ ಅಡ್ಡೂರು ಆಯ್ಕೆ

ಮಂಗಳೂರು, ಜೂನ್ 17: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಜಿಲ್ಲಾ ಪ್ರತಿನಿಧಿ ಸಭೆಯು ಮಂಗಳೂರಿನ ಬಾಂಬೆಲಕ್ಕಿ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಸಾಮಾಜಿಕ ನ್ಯಾಯ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳ ರಕ್ಷಣೆ ಮತ್ತು ಪಕ್ಷದ ಸಂಘಟನೆ ಬಲವರ್ಧನೆಯ ಕುರಿತು ಅವರು ಮಾರ್ಗದರ್ಶನ ನೀಡಿದರು.ಪಕ್ಷದ ಸಿದ್ಧಾಂತಗಳನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವಲ್ಲಿ ಕಾರ್ಯಕರ್ತರ…

Read More

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಆರೋಪ ಆತಂಕಕಾರಿ: ಶೀರೂರು ಶ್ರೀ

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪರ್ಯಾಯ ಪೀಠಾಧಿಪತಿಗಳಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಮಹತ್ವದ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆರೋಪಗಳ ಹಿಂದೆ…

Read More

ಕಲ್ಲರಕೋಡಿಯಲ್ಲಿ ನೂತನ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟನೆ

ನರಿಂಗಾನ: ನರಿಂಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲರಕೋಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಉನ್ನತೀಕರಿಸಿದ ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ನೂತನ ಕಾಲೇಜು ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾಲೇಜು ಮಂಜೂರುಗೊಳಿಸುವುದಕ್ಕಿಂತ ಅದನ್ನು ಕಾರ್ಯರೂಪಕ್ಕೆ ತಂದು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದು ಹೇಳಿದರು. “ಕಲ್ಲರಕೋಡಿಗೆ ಕಾಲೇಜು ಮಂಜೂರಾದ ಬಳಿಕ ಅದನ್ನು ಉಳಿಸಿ ಬೆಳೆಸುವುದು…

Read More
error: Content is protected !!