ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಲೋಕ ಅದಾಲತ್: ಜುಲೈ 18 ಮತ್ತು ನವೆಂಬರ್ 21ರಂದು ಆಯೋಜನೆ
ಮಂಗಳೂರು, ಜೂ.16: ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ 2026ರ ಜುಲೈ 18 ಹಾಗೂ ನವೆಂಬರ್ 21ರಂದು ವಿಶೇಷ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಖಾಯಂ ಜನತಾ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸಮನ್ಸ್ ಮತ್ತು ವಾರಂಟ್ ಜಾರಿಯಿಂದ ಪೊಲೀಸ್ ಇಲಾಖೆಯ ಮೇಲೂ ಹೆಚ್ಚಿನ ಒತ್ತಡ ಉಂಟಾಗುತ್ತಿದೆ…
