ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಲೋಕ ಅದಾಲತ್: ಜುಲೈ 18 ಮತ್ತು ನವೆಂಬರ್ 21ರಂದು ಆಯೋಜನೆ

ಮಂಗಳೂರು, ಜೂ.16: ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ 2026ರ ಜುಲೈ 18 ಹಾಗೂ ನವೆಂಬರ್ 21ರಂದು ವಿಶೇಷ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಖಾಯಂ ಜನತಾ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸಮನ್ಸ್ ಮತ್ತು ವಾರಂಟ್ ಜಾರಿಯಿಂದ ಪೊಲೀಸ್ ಇಲಾಖೆಯ ಮೇಲೂ ಹೆಚ್ಚಿನ ಒತ್ತಡ ಉಂಟಾಗುತ್ತಿದೆ…

Read More

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ: ಅಬ್ದುಲ್ ಮಜೀದ್

ಬಿಸಿ ರೋಡ್, ಜೂನ್ 16: ಟಿಎಂಸಿಯ 20 ಲೋಕಸಭಾ ಸದಸ್ಯರು ಮತದಾರರು ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಾಳಯವನ್ನು ಸೇರಿರುವುದು ಜನತಂತ್ರದ ಮೌಲ್ಯಗಳಿಗೆ ವಿರುದ್ಧವಾದ ನಡೆ ಹಾಗೂ ಮತದಾರರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪ್ರಜಾಪ್ರಭುತ್ವದ ಸವಾಲುಗಳು ಹಾಗೂ ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಕುರಿತು…

Read More

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್‌ ಫೆಸ್ಟ್‌ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಮಾ. 28ರಿಂದ ಮೇ 10ರ ವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ಲಕ್ಕಿ ಡ್ರಾ ಕೂಪನ್ ಗಳನ್ನು ವಿತರಿಸಲಾಗಿದ್ದು, ಅವುಗಳಲ್ಲಿ ಆಯ್ಕೆಯಾದ ಅದೃಷ್ಟಶಾಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ಗ್ರಾಹಕರಿಂದದೊರೆತ ಅಭೂತಪೂರ್ವ ಪ್ರತಿಕ್ರಿಯೆಯಿಂದ ಡೈಮಂಡ್ ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು. ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ…

Read More

ಚಾರ್ಮಾಡಿ ಘಾಟ್‌ನಲ್ಲಿ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಎಸ್ಪಿ ಸಿ.ಎ. ಸೈಮನ್ ಅವರು, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸಮೀಪ ಇನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ…

Read More

ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

ಕರ್ನಾಟಕದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿರುವ ಮಹತ್ವದ ಸಾಧನೆಯಲ್ಲಿ, ಮಂಗಳೂರಿನ Presidency PU College ವಿದ್ಯಾರ್ಥಿ ಹಾಗೂ ಪ್ರತಿಭಾವಂತ ಬಾಸ್ಕೆಟ್‌ಬಾಲ್ ಆಟಗಾರ ದೀಕ್ಷಿತ್ ಅಮೀನ್ ಅವರು ಶಾಲಾ ಕ್ರೀಡಾ ಮಹಾಸಂಘ (SGFI) ವತಿಯಿಂದ ಆಯ್ಕೆಯಾದ ಭಾರತೀಯ ಶಾಲಾ ಬಾಲಕರ ಅಂಡರ್-18 ಬಾಸ್ಕೆಟ್‌ಬಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಜೂನ್ 13ರಿಂದ 23ರವರೆಗೆ ಸರ್ಬಿಯಾದ ಜ್ಲಾಟಿಬೋರ್‌ನಲ್ಲಿ ನಡೆಯಲಿರುವ ವಿಶ್ವ ಶಾಲಾ ಬಾಲಕರ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಸಾಧನೆಯನ್ನು ಇನ್ನಷ್ಟು ವಿಶೇಷಗೊಳಿಸುವ ಅಂಶವೆಂದರೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ…

Read More

ಇಂಧನ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ: ಪದ್ಮರಾಜ್ ಪೂಜಾರಿ

ಮಂಗಳೂರು:ಕೇಂದ್ರ ಸರ್ಕಾರದ ಇತ್ತೀಚಿನ ಗ್ಯಾಸ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬೆಲೆ ಏರಿಕೆಯ ಹೊರೆ ನೇರವಾಗಿ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಬಿದ್ದಿದೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ಅದರ ಪ್ರಯೋಜನವನ್ನು ಕೇಂದ್ರ ಸರ್ಕಾರ ಜನರಿಗೆ ತಲುಪಿಸುತ್ತಿಲ್ಲ ಎಂದು ಟೀಕಿಸಿದರು….

Read More

ಪ್ರೊ.ಬಾಲಕೃಷ್ಣ ಗಟ್ಟಿ ನಿಧನಕ್ಕೆ ಪತ್ರಕರ್ತರಿಂದ ಸಂತಾಪ ಸೂಚಕ ಸಭೆ

ಮಂಗಳೂರು, ಜೂ.16;ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಯವರ ನಿಧನಕ್ಕೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರುಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸಂತಾಪ ಸೂಚಕ ಸಭೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಈ ಸಂತಾಪ ಸೂಚಕ ಸಭೆಯಲ್ಲಿಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ ಮಾತನಾಡುತ್ತಾ, ಬಾಲಕೃಷ್ಣ ಗಟ್ಟಿಯವರು ಶಿಕ್ಷಣ, ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದವರು ಜೊತೆಗೆ ಸಂಘಟ ನೆಗೂ ಒತ್ತು ನೀಡಿದವರು ಎಂದು ಅವರ ಜೊತೆಗಿನ ಅನುಭವ…

Read More

ಹೊಸ ನಾಯಕತ್ವದಲ್ಲಿ ಸರ್ಕಾರ, ಪಕ್ಷ ಇನ್ನಷ್ಟು ಬಲಿಷ್ಠ: ಜಿಲ್ಲಾ ಕಾಂಗ್ರೆಸ್

ಮಂಗಳೂರು:ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ನಡೆದಿರುವ ಇತ್ತೀಚಿನ ನೇಮಕಾತಿಗಳು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಲಿದ್ದು, ಹೊಸ ನಾಯಕತ್ವದಡಿ ಸರ್ಕಾರ ಹಾಗೂ ಪಕ್ಷ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದರು. ಇದೇ ವೇಳೆ…

Read More

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಕೇವಲ ಪರಿಷ್ಕರಣೆ ಮಾತ್ರ: ಕಾಂಗ್ರೆಸ್ ಸ್ಪಷ್ಟನೆ

ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ಪಷ್ಟಪಡಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಅದರ ಪ್ರಯೋಜನ ರಾಜ್ಯದ ಮನೆಮನೆಗೂ ತಲುಪಿದೆ ಎಂದರು….

Read More

ಕಡಬದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ

ದಕ್ಷಿಣ ಕನ್ನಡ :ಕಡಬದ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ರಸ್ತೆಯಲ್ಲಿ ದಿನಾಂಕ:13 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿದ್ದು, ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಇದರಲ್ಲಿ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ, ಪಿಕಪ್ ವಾಹನದ ಚಾಲಕ ಹಾಸನ ಅರಕಲಗೂಡು ನಿವಾಸಿಗಳಾದ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಎಂಬವರುಗಳನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ವಿಚಾರಣೆಗೊಳಪಡಿಸಿದಾಗ ಈ ಪಿಕಪ್ ವಾಹನದಲ್ಲಿ…

Read More
error: Content is protected !!