ಹೊಸ ನಾಯಕತ್ವದಲ್ಲಿ ಸರ್ಕಾರ, ಪಕ್ಷ ಇನ್ನಷ್ಟು ಬಲಿಷ್ಠ: ಜಿಲ್ಲಾ ಕಾಂಗ್ರೆಸ್
ಮಂಗಳೂರು:ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ನಡೆದಿರುವ ಇತ್ತೀಚಿನ ನೇಮಕಾತಿಗಳು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಲಿದ್ದು, ಹೊಸ ನಾಯಕತ್ವದಡಿ ಸರ್ಕಾರ ಹಾಗೂ ಪಕ್ಷ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದರು. ಇದೇ ವೇಳೆ…
