ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಮಗುಚಿದ ಗ್ಯಾಸ್ ಟ್ಯಾಂಕರ್ ತೆರವು: 16 ಗಂಟೆಗಳ ಕಾರ್ಯಾಚರಣೆಯ ಬಳಿಕ ಸಂಚಾರ ಪುನರಾರಂಭ
ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿಬಿದ್ದ ಗ್ಯಾಸ್ ಟ್ಯಾಂಕರ್ ಅನ್ನು ಸತತ 16 ಗಂಟೆಗಳ ಕಾರ್ಯಾಚರಣೆಯ ಮೂಲಕ ಅಧಿಕಾರಿಗಳು ಯಶಸ್ವಿಯಾಗಿ ತೆರವುಗೊಳಿಸಿದರು. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಪುನರಾರಂಭಿಸಲಾಯಿತು. ಟ್ಯಾಂಕರ್ ಮಗುಚಿದ ಸಂದರ್ಭದಲ್ಲಿ ಎಲ್ಪಿಜಿ ಅನಿಲ ಸೋರಿಕೆ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಾರ್ಯಾಚರಣೆಯ ಭಾಗವಾಗಿ ಮಂಗಳೂರಿನಿಂದ ಭಾರತ್ ಗ್ಯಾಸ್ನ…