ವಿಧಾನಸಭೆಯಲ್ಲಿ ಸಚಿವರ ಉತ್ತರದ ಕೊರತೆ: ಸ್ಪೀಕರ್ ಯು.ಟಿ. ಖಾದರ್ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿ, ಸಮಯ ಸೂಚನೆ ನೀಡದೇ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ. ಲಿಖಿತ ರೂಪದಲ್ಲಿ ಸಲ್ಲಿಸಲಾಗಿದ್ದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆಯ ವೇಳೆ ಈ ಘಟನೆ ನಡೆಯಿತು. ಸಚಿವ ಪರಮೇಶ್ವರ್ ಸದನದಲ್ಲಿ ಉತ್ತರಗಳನ್ನು ಮಂಡಿಸುತ್ತಿದ್ದಾಗಲೇ ವಿಪಕ್ಷ ಸದಸ್ಯರು ತೀವ್ರ ಟೀಕೆ ವ್ಯಕ್ತಪಡಿಸಿದರು. ಅಧಿವೇಶನ ಆರಂಭದಿಂದಲೇ ಸಚಿವರಿಂದ ನಿರೀಕ್ಷಿತ ಉತ್ತರಗಳು ಸಿಗುತ್ತಿಲ್ಲ ಎಂದು ವಿಪಕ್ಷಗಳು…

Read More

ಮಾರ್ಚ್ 20ರಂದು ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’

ಮಂಗಳೂರು: ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವ ಉದ್ದೇಶದಿಂದ ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಮಾರ್ಚ್ 20ರಂದು ನಗರದ ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’ವನ್ನು ಆಯೋಜಿಸಿವೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಳು ಪರಿಷತ್ ಅಧ್ಯಕ್ಷ ಶುಭೋದಯ್ ಆಳ್ವ, ಈ ಸಮ್ಮೇಳನ ಸಂಪೂರ್ಣವಾಗಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡಿದ್ದು, ಕಾರ್ಯಕ್ರಮದ ವಿವಿಧ ಭಾಗಗಳನ್ನು ವಿದ್ಯಾರ್ಥಿಗಳೇ ಮುನ್ನಡೆಸಲಿದ್ದಾರೆ ಎಂದು ಹೇಳಿದರು. ಈ ಬಾರಿ ಪ್ರತಿಭಾವಂತ ವಿದ್ಯಾರ್ಥಿಗಳೇ ಉದ್ಘಾಟಕರಾಗಿ…

Read More

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ನಿರ್ಲಕ್ಷ್ಯ ಆರೋಪ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು, ರಾಜ್ಯ ಸರಕಾರ 1.32ಲಕ್ಷ ಕೋಟಿ ಸಾಲ ಮಾಡಿ, ಗ್ಯಾರಂಟಿಯೇ ಅಭಿವೃದ್ಧಿ ಎಂಬ ಭ್ರಮೆಯಲ್ಲಿ ಕಾಲ ಕಳೆಯುತ್ತಿದೆ. ಜಿಲ್ಲೆಯ ಐದು ಮಂದಿ ಶಾಸಕರು, ಇಲ್ಲಿನ ಬೇಡಿಕೆಗಳು,…

Read More

ರಾಮಕೃಷ್ಣ ಮಿಷನ್‌ನಿಂದ ಧಾರ್ಮಿಕ ವಸ್ತುಗಳ ಗೌರವಯುತ ವಿಲೇವಾರಿಗೆ ‘ವಿಸರ್ಜನೆ’ ಅಭಿಯಾನಕ್ಕೆ ಚಾಲನೆ

ಮಂಗಳೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿರುವ ರಾಮಕೃಷ್ಣ ಮಿಷನ್ ‘ಸ್ವಚ್ಛ ಮಂಗಳೂರು’ ಅಭಿಯಾನದ ಅಡಿಯಲ್ಲಿ ಧಾರ್ಮಿಕ ತ್ಯಾಜ್ಯಗಳ ಸಮರ್ಪಕ ಹಾಗೂ ಗೌರವಯುತ ವಿಲೇವಾರಿಗಾಗಿ ‘ವಿಸರ್ಜನೆ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ಅಭಿಯಾನವು ಮಾರ್ಚ್ 16 ರಿಂದ 26 ರವರೆಗೆ ಮಂಗಳೂರಿನ ಆಯ್ದ ಆರು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ತಿಳಿಸಿದರು . ನಗರದ ರಾಮಕೃಷ್ಣ ಮಠದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ‘ವಿಸರ್ಜನೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು, ನಮ್ಮ ಜೀವನ ಶೈಲಿಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ವಿವರಿಸಿ, ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಇವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯವನ್ನು ಕಾಪಾಡಲು ಬಹಳ ಸಹಾಯಕವಾಗುತ್ತವೆ ಎಂದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಒಕ್ಕೂಟದ…

Read More

ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯಕ್ಷ ಶಿಕ್ಷಣ ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು…

Read More

ಜ್ಞಾನದ ಕೇಂದ್ರ ಪಸರಿಸುತ್ತಿದೆ ಇತಿಹಾಸದ ಹೊಂಗಿರಣ ….. !

ಮಂಗಳೂರು : ಮಂಗಳೂರು ಸಮೀಪದ ಮುಡಿಪು ಗುಡ್ಡದ ಮೇಲಿರುವ ಶ್ರೀಕೃಷ್ಣ ಧ್ಯಾನ ಕೇಂದ್ರವು ಇಂದು ಧ್ಯಾನ, ಆಧ್ಯಾತ್ಮಿಕತೆ ಮತ್ತು ಇತಿಹಾಸವನ್ನು ಒಂದೇ ಸ್ಥಳದಲ್ಲಿ ಪರಿಚಯಿಸುವ ವಿಶಿಷ್ಟ ತಾಣವಾಗಿ ಗುರುತಿಸಿಕೊಂಡಿದೆ. ಪ್ರಕೃತಿಯ ಸೊಬಗು ಮಧ್ಯೆ ನಿರ್ಮಾಣವಾಗಿರುವ ಈ ಭವ್ಯ ಧ್ಯಾನ ಮಂದಿರವು ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸಸ್ಯ ಸಿರಿರಾಶಿ ಪ್ರಕೃತಿಯ ನಡುವೆ ಎತ್ತರದ ಗುಡ್ಡದ ಮೇಲೆ ಭವ್ಯವಾಗಿ ವಿರಾಜಮಾನವಾಗಿರುವ ಶ್ರೀಕೃಷ್ಣ ಧ್ಯಾನ ಮಂದಿರವು ತನ್ನ ವಿಶಿಷ್ಟ ವಾಸ್ತುಶೈಲಿಯಿಂದಲೇ ಗಮನ ಸೆಳೆಯುತ್ತದೆ. ಪುರಿ ಜಗನ್ನಾಥ ಮಂದಿರವನ್ನು ಹೋಲುವ ಈ…

Read More

ಡಾ. ವಾಮನ್ ರಾವ್ ಬೇಕಲ್ ಅವರಿಗೆ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ’

ಕಾಸರಗೋಡು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ – 2025’ ಲಭಿಸಿದೆ. ಮೈಸೂರು ನಗರದ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗವು ಪ್ರತಿವರ್ಷ ನೀಡುವ ಈ ಪ್ರಶಸ್ತಿಗೆ, ಗಡಿನಾಡಿನಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೊಯ್ಸಳ…

Read More

ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ರಂಜಾನ್ ಹಾಗೂ ಯುಗಾದಿ ಹಬ್ಬ ಶಾಂತಿಯುತವಾಗಿ ಆಚರಿಸಲು ಕರೆ

ವಿಟ್ಲ: ಮುಖಂಡರ ಸಮ್ಮುಖದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮುಂಬರುವ ರಂಜಾನ್ ಹಾಗೂ ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ಸಮುದಾಯದ ನಾಯಕರು ಪರಸ್ಪರ ಸಹಕಾರದೊಂದಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಪೊಲೀಸ್ ಸಭ್ ಇನ್ಸ್ ಪೆಕ್ಟರ್ ರಾಮಕೃಷ್ಣ ಇಲಾಖೆಯ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದರು. ಸಭೆಯಲ್ಲಿ ಮಾತನಾಡಿದ ವಿಟ್ಲ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರು, ಹಬ್ಬದ ಸಂದರ್ಭದಲ್ಲಿ ಮಸೀದಿಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜಾಗರೂಕತೆ ವಹಿಸಬೇಕು…

Read More
error: Content is protected !!