ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಮಣಿಪಾಲ, ಜೂ.15: ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಬಸ್‌ನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ…

Read More

ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ

ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು.ಮೇಲ್ಸೇತುವೆಯ ಕೆಳಭಾಗದ ಸರ್ವಿಸ್ ರಸ್ತೆ ಹೊಂಡಗಳಿಂದ ಕೂಡಿದ್ದು, ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ದುಸ್ತರವಾಗಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಕ್ರಮವಾಗಿ ಮೇಲ್ಸೇತುವೆಯ ಒಂದು ಬದಿಯನ್ನು ಸಂಚಾರಕ್ಕೆ ತೆರೆಯಲಾಗಿದೆ ಎಂದು ಅಧಿಕಾರಿಗಳು…

Read More

ಒಲವಿನಹಳ್ಳಿ ಆಶ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆ; ವೃಕ್ಷಾರೋಪಣ, ಸಂಗೀತ ಕಾರ್ಯಕ್ರಮ ಹಾಗೂ ಸೇವಾ ಕಾರ್ಯ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ SUEZ Projects Pvt. Ltd. ಹಾಗೂ ಹಾರ್ಮೋನಿ ವೈಬ್ಸ್ ಸಂಗೀತ ಬಳಗದ ಸಂಯುಕ್ತ ಆಶ್ರಯದಲ್ಲಿ ಒಲವಿನಹಳ್ಳಿ ಆಶ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸೇವೆಗೆ ಒತ್ತು ನೀಡುವ ವಿಶೇಷ ಕಾರ್ಯಕ್ರಮ ನಡೆಯಿತು. SUEZ Projects‌ನ ಆಡಳಿತ ವ್ಯವಸ್ಥಾಪಕ ರಾಕೇಶ್ ಶೆಟ್ಟಿ ಬಿ.ಎಸ್. ಅವರ ನೇತೃತ್ವದಲ್ಲಿ ಹಾಗೂ ಹಾರ್ಮೋನಿ ವೈಬ್ಸ್ ಬಳಗದ ಗೋಪಾಲಕೃಷ್ಣ ಕುಂದರ್ ಅವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಾ. ಅನಂತ ಪ್ರಭು ಜಿ., ಶೇಖ್ ಸಲೀಂ ಮತ್ತು ಸತೀಶ್…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಇಂದಿರಾ ಲಂಕೇಶ್ ನಿಧನ; ಸಾಹಿತ್ಯ, ಮಾಧ್ಯಮ ಕ್ಷೇತ್ರಕ್ಕೆ ಅಪಾರ ನಷ್ಟ

ಬೆಂಗಳೂರು: ಖ್ಯಾತ ಪತ್ರಕರ್ತ, ಸಾಹಿತಿ ಹಾಗೂ ‘ಲಂಕೇಶ್ ಪತ್ರಿಕೆ’ಯ ಸಂಸ್ಥಾಪಕ ದಿವಂಗತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಇಂದಿರಾ ಲಂಕೇಶ್ ಅವರು ದಿವಂಗತ ಪತ್ರಕರ್ತೆ ಮತ್ತು ಚಿಂತಕಿ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿಯಾಗಿದ್ದರು. ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ…

Read More

ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ; ಪ್ರಕರಣ ದಾಖಲು

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಜೂನ್ 13ರಂದು ರಾತ್ರಿ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹೋರಿಗಳನ್ನು ಅಕ್ರಮವಾಗಿ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ವಾಹನವು ಕುಲ್ಕುಂದ ದಾಟಿ ಸಾಗುತ್ತಿದ್ದ ವೇಳೆ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪಿಕಪ್‌ನಲ್ಲಿ ಎರಡು ಹೋರಿಗಳನ್ನು ಸಾಗಿಸಲಾಗುತ್ತಿದ್ದು, ಅವುಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ವಾಹನ ಪಲ್ಟಿಯಾದ ಬಳಿಕ ಜಾನುವಾರುಗಳ ಕೈಕಾಲುಗಳನ್ನು ಬಿಚ್ಚಿ ಸ್ಥಳದಿಂದ ಕರೆದೊಯ್ಯಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ….

Read More

ಪಂತಡ್ಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ; ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬಂಟ್ವಾಳ: ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಪಂತಡ್ಕದ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪಂಚಾಯಿತಿಯು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕಸ, ಕೊಳೆತ ಹಣ್ಣು, ತರಕಾರಿ ಮತ್ತು ಹೋಟೆಲ್ ಗಳ ಉಳಿಕೆ ಆಹಾರವನ್ನು ಎಸೆಯಲಾಗುತ್ತಿದೆ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುರ್ವಾಸನೆ ಈ ಪ್ರದೇಶ ವ್ಯಾಪಿಸಿ…

Read More

ಶ್ರೀರಾಮ ಕುರಿತು ಪ್ರೊ. ಕೆ.ಎಸ್. ಭಗವಾನ್ ಹೇಳಿಕೆ ಖಂಡನೆ; ಸುಮೊಟೊ ಪ್ರಕರಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಆಗ್ರಹ

ಪುತ್ತೂರು: ಪ್ರಭು ಶ್ರೀರಾಮಚಂದ್ರರ ಕುರಿತು ಪ್ರೊ. ಕೆ.ಎಸ್. ಭಗವಾನ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಅವರ ವಿರುದ್ಧ ಕೂಡಲೇ ಸುಮೊಟೊ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರೊ. ಭಗವಾನ್ ಯಾವ ಧರ್ಮವನ್ನು ನಂಬುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಅವರು ಪದೇಪದೇ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ…

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More
error: Content is protected !!