ಬೆಂಗಳೂರು : ತುಳು ಚಿತ್ರ ‘ಕಟ್ಟೆಮಾರ್’ 50 ದಿನಗಳ ಸಂಭ್ರಮ: ಹಾಗೂ ಕನ್ನಡದಲ್ಲಿ ಬಿಡುಗಡೆಗೊಳ್ಳಲಿರುವ ಕಟ್ಟೆಮಾರ್ ಚಿತ್ರದ ಸೆಲೆಬ್ರೆಟಿ ಶೋ

ತುಳು ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡ “ಕಟ್ಟೆಮಾರ್” ಚಿತ್ರದ 50 ದಿನಗಳ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಚಿತ್ರದ ನಿರ್ಮಾಪಕರು ಲಂಚುಲಾಲ್ ಕೆ .ಎಸ್ ,ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಶಿ, ಕನ್ನಡ ನಟಿ ತಾರಾ, ವಾಣಿಶ್ರೀ ಸೇರಿದಂತೆ ಹಲವು ಕಲಾವಿದರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚಿತ್ರತಂಡದ ಸದಸ್ಯರು, ಕಲಾವಿದರು ಹಾಗೂ ಅಭಿಮಾನಿಗಳು ಸೇರಿಕೊಂಡು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ ಈ ಯಶಸ್ಸನ್ನು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಭಾಗವಹಿಸಿ, ಪ್ರೇಕ್ಷಕರ ಬೆಂಬಲವೇ…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆ

ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಹಲವಾರು ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ದಾರಕ್ಕೆ, ಅಭಿವೃದ್ಧಿಗೆ ಹೆಗಲು ಕೊಡುವ ಯೋಗ ಲಭಿಸಿರುವುದು ನನ್ನ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ಶೀಘ್ರದಲ್ಲಿ ಇಲ್ಲಿನ ಮೇಲ್ಛಾವಣಿ ಕಾಮಗಾರಿಯು ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೋಹನ್ ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಲಲೇಶ್…

Read More

ಚಿರತೆ ಭೀತಿಯಿಂದ ಗ್ರಾಮಸ್ಥರಲ್ಲಿ ಆತಂಕ – ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ

ಕುಂದಾಪುರ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ವಿಭಾಗದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಶುಕ್ರವಾರ (13-03-2026) ಬೆಳಿಗ್ಗೆ 11.30ಕ್ಕೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಇನ್ನಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹಲವು ಬಾರಿ…

Read More

ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿದ ಲಾರಿ – ಬೇಕರಿ, ಮೊಬೈಲ್ ಅಂಗಡಿಗೆ ಡಿಕ್ಕಿ

ಗುರುಪುರ: ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಘಟನೆ ಇಂದು ಸಂಭವಿಸಿದೆ. ಲಾರಿ ನಿಯಂತ್ರಣ ತಪ್ಪಿ ಜಂಕ್ಷನ್ ಬಳಿ ಇರುವ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅಂಗಡಿಗಳ ಮುಂಭಾಗಕ್ಕೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಕರಿಸಿದರು.

Read More

ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ-8.69 ಕೋಟಿ ಮೌಲ್ಯದ ಆಸ್ತಿ ಪತ್ತೆ !

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ…

Read More

ಉಡುಪಿ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎನ್‌ಆರ್‌ಸಿ ಕೇಂದ್ರ ಇಲ್ಲದಿರುವುದು ಖೇಧಕರ- ಶಶಿಧರ್ ಕೋಸಂಬೆ

ಉಡುಪಿ: ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ(ಎನ್‌ಆರ್‌ಸಿ)ವೇ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು….

Read More

ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ ಗುರುವಾರ ಆಫ್-ಸೈಟ್ ತುರ್ತು ಅಣಕು ಡ್ರಿಲ್ ಅನ್ನು ನಡೆಸಿತು. ಕಾರ್ಖಾನೆಗಳ ಉಪನಿರ್ದೇಶಕ ಡಾ.ರಾಜೇಶ್ ಮಿಶ್ರಿಕೋಟಿ, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿಜಯ್, ಕಂದಾಯ ಇಲಾಖೆ, ಕರ್ನಾಟಕ ಅಗ್ನಿಶಾಮಕ…

Read More

ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ ಪೀಳಿಗೆಗಳು ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು….

Read More

ನಾಳೆ ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಜರಂಗಿ ಪ್ರವೇಶ….

ಕಟಪಾಡಿ, ಮಾ. 12: ಶ್ರೀ ಕ್ಷೇತ್ರ ಶಂಕರಪುರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ 19 ಅಡಿ ಎತ್ತರದ ಏಕಶಿಲಾ ಬಜರಂಗಿ ಮೂರ್ತಿಯ ಪ್ರವೇಶವು ಮಾ. 14ರಂದು ಭವ್ಯ ಮೆರವಣಿಗೆಯೊಂದಿಗೆ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ ಗುರೂಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 14ರಂದು ಸಂಜೆ 3.30ಕ್ಕೆ ಉಡುಪಿ ಜೋಡುಕಟ್ಟೆಯಿಂದ ವಾಹನಗಳ ಭವ್ಯ ಮೆರವಣಿಗೆಯೊಂದಿಗೆ ಬಜರಂಗಿ ಮೂರ್ತಿಯ ಪ್ರವೇಶ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಕಳೆದ 11 ವರ್ಷಗಳಿಂದ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಶ್ರೀ…

Read More

ದೇವಸ್ಥಾನದ ಪವಿತ್ರ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ – ವಿ.ಹಿಂ.ಪ. ಮಾತೃಶಕ್ತಿಯಿಂದ ಖಂಡನೆ

ಕಡಬ : ಪುತ್ತೂರಿನ ಐತಿಹಾಸಿಕ ಮತ್ತು ಭಕ್ತರ ಭಾವನೆಗಳಿಗೆ ಅತ್ಯಂತ ಪವಿತ್ರವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆಯಿರುವುದು ಅತ್ಯಂತ ಖಂಡನೀಯ ಘಟನೆ ಎಂದು ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಅವರು ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಸ್ಥಾನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಾಗಿರುವ ಪವಿತ್ರ ಸ್ಥಳಗಳಾಗಿವೆ. ಇಂತಹ ಪವಿತ್ರ ವೇದಿಕೆಗಳನ್ನು ರಾಜಕೀಯ ವೇದಿಕೆಯಾಗಿ ಬಳಸುವುದು ದೇವಾಲಯದ ಪರಂಪರೆ ಮತ್ತು ಭಕ್ತರ ಭಾವನೆಗಳಿಗೆ…

Read More
error: Content is protected !!