ಮಂಗಳೂರು–ಶಾರ್ಜಾ ದೈನಂದಿನ ವಿಮಾನ ಹಾರಾಟ ಪುನರಾರಂಭ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಮತ್ತೆ ದೈನಂದಿನ ವಿಮಾನ ಸೇವೆ ಆರಂಭವಾಗುತ್ತಿದೆ. ಮಾರ್ಚ್ 16 ರಿಂದ 28ರವರೆಗೆ ಮಂಗಳೂರು–ಶಾರ್ಜಾ ಮಾರ್ಗದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆ ದೈನಂದಿನ ವಿಮಾನ ಹಾರಾಟ ನಡೆಸಲಿದೆ. ವಿಮಾನ ವೇಳಾಪಟ್ಟಿಯ ಪ್ರಕಾರ ಮಂಗಳೂರಿನಿಂದ ವಿಮಾನವು **ಮಧ್ಯಾಹ್ನ 1:25 (IST)**ಕ್ಕೆ ಹೊರಟು ಶಾರ್ಜಾ ಸಮಯದ ಪ್ರಕಾರ ಸಂಜೆ 4:05ಕ್ಕೆ ತಲುಪಲಿದೆ. ವಾಪಸಾಗಿ ಶಾರ್ಜಾದಿಂದ ಸಂಜೆ 5:05ಕ್ಕೆ ಹೊರಡುವ ವಿಮಾನವು **ರಾತ್ರಿ 10:30 (IST)**ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಈ…

Read More

ಉಡುಪಿ: ವಾಣಿಜ್ಯ ಅನಿಲ ಕೊರತೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದ ಹಿನ್ನೆಲೆಯಲ್ಲಿ ಹೋಟೇಲ್ ಮಾಲಕರಿಗೆ ಎದುರಾಗುತ್ತಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನಗರದ ಡಯಾನ ಹೋಟೇಲ್‌ನಲ್ಲಿ ಉಡುಪಿ ಜಿಲ್ಲಾ ಹೋಟೇಲ್ ಮಾಲಕರ ಸಂಘದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಾಣಿಜ್ಯ ಬಳಕೆಯ ಅನಿಲ ಅಲಭ್ಯತೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ಜೊತೆ…

Read More

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಶಂಕರಪುರದಲ್ಲಿ ಘಟನೆ

ಉಡುಪಿ: ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಸಾಲ್ಮರದಲ್ಲಿರುವ ಕ್ಯಾಟರಿಂಗ್ ಸೆಡ್ ಸಮೀಪದ ಒಂದು ಕೊಠಡಿಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗೌತಮ್ ಪೂಜಾರಿ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ಸಂಸ್ಥೆಯಲ್ಲಿ…

Read More

ಬಿಲ್ ಪಾವತಿಸದ ಕಾರಣ ಕೊರಗ ಕುಟುಂಬಗಳ ನೀರು ಕಡಿತ: ಚೇಳ್ಯಾರು ಗ್ರಾ.ಪಂ ವಿರುದ್ಧ ಸಿಪಿಐಎಂ ಆಕ್ರೋಶ

ಮಂಗಳೂರು: ಮಂಗಳೂರಿನ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲವಾದ ಆರು ಕೊರಗ ಬುಡಕಟ್ಟು ಕುಟುಂಬಗಳ ಕುಡಿಯುವ ನೀರಿನ ಸಂಪರ್ಕವನ್ನು ಬಿಲ್ ಪಾವತಿಸದ ಕಾರಣಕ್ಕೆ ಕಡಿತಗೊಳಿಸಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುರುವಾರ ಗ್ರಾಮ ಪಂಚಾಯತ್ ಅಧಿಕಾರಿಗಳು ಈ ಕುಟುಂಬಗಳ ಮನೆಗಳಿಗೆ ನೀಡಿದ್ದ ನೀರಿನ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಷಯವನ್ನು ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೂ ತರಲಾಗಿತ್ತು. ಆದರೆ ಅದಾದ ಬಳಿಕ ಪಂಚಾಯತ್ ಆಡಳಿತ ಸೇಡು ತೀರಿಸುವ ರೀತಿಯಲ್ಲಿ ನಿರ್ದಯವಾಗಿ ವರ್ತಿಸಿದೆ ಎಂದು ಆರೋಪಿಸಲಾಗಿದೆ….

Read More

ಕುದ್ರೆಬೆಟ್ಟು ಪ್ರಯಾಣಿಕರ ತಂಗುದಾಣ ಮರುನಿರ್ಮಾಣ: ಸುರಕ್ಷತಾ ವ್ಯವಸ್ಥೆ ಕಲ್ಪಿಸುವ ಕಾರ್ಯ ವೇಗದಲ್ಲಿ

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಫ್ಲೈಓವರ್‌ನಿಂದ ಮುಂದೆ ದಾಸಕೋಡಿ ಮಾರ್ಗದ ಎಡಬದಿಯಲ್ಲಿ ಇರುವ ಕುದ್ರೆಬೆಟ್ಟು ಪ್ರದೇಶದಲ್ಲಿನ ಪ್ರಯಾಣಿಕರ ತಂಗುದಾಣವನ್ನು ಈಗ ಮರುನಿರ್ಮಾಣ ಮಾಡಲಾಗುತ್ತಿದೆ. ಸ್ಥಳೀಯರ ಮತ್ತು ಮಾಧ್ಯಮ ವರದಿಗಳಿಂದ ಎಚ್ಚೆತ್ತ ಸಂಬಂಧಿತ ಇಲಾಖೆ ಇದೀಗ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ವ್ಯವಸ್ಥೆ ಕಲ್ಪಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಹಿಂದೆ ಕುದ್ರೆಬೆಟ್ಟಿನಲ್ಲಿ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವು ಸರಿಯಾದ ರೀತಿಯಲ್ಲಿ ನಿರ್ಮಾಣವಾಗಿರಲಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಹೆಪ್ಪುಗಟ್ಟಿದ ಕೊಳಚೆ ನೀರು ಹರಿಯುವ ಚರಂಡಿಯ ಮೇಲೆಯೇ ಸ್ಲ್ಯಾಬ್ ಹಾಕಿ, ಅದರ ಮೇಲ್ಭಾಗದಲ್ಲಿ…

Read More

ಉಡುಪಿ ಶ್ರೀ ಕೃಷ್ಣಮಠದಲ್ಲಿ ಅನ್ನದಾನಕ್ಕೆ ಯಾವುದೇ ಸಮಸ್ಯೆ ಇಲ್ಲ : ಅಡುಗೆ ಅನಿಲ ಮುಗಿದರೂ ಕಟ್ಟಿಗೆ ಒಲೆಯಲ್ಲಿ ಭೋಜನ ವ್ಯವಸ್ಥೆ ಸಿದ್ಧ !

ಉಡುಪಿ:ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ. ಪ್ರತಿ ದಿನ ಸಾವಿರಾರು ಭಕ್ತರು ಭೋಜನ ಸ್ವೀಕರಿಸುವ ಉಡುಪಿ ಶ್ರೀ ಕೃಷ್ಣಮಠವನ್ನು “ಅನ್ನ ಬ್ರಹ್ಮನ ದೇಗುಲ” ಎಂದೇ ಕರೆಯಲಾಗುತ್ತದೆ. ಇಲ್ಲಿ ಪರಂಪರೆಯಿಂದ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವ ಪದ್ಧತಿ ಇದ್ದರೂ, ಇತ್ತೀಚಿನ ವರ್ಷಗಳಲ್ಲಿ ಅಡುಗೆ ಕಾರ್ಯಕ್ಕೆ ಅನಿಲದ ಅವಲಂಬನೆಯೂ ಹೆಚ್ಚಾಗಿದೆ.ಸದ್ಯ ಅಡುಗೆ ಅನಿಲ ಲಭ್ಯವಿದ್ದು, ಯಾವುದೇ ತೊಂದರೆ ಇಲ್ಲ….

Read More

ಅಮೆರಿಕಾ ನೀತಿಯಿಂದ ಜಾಗತಿಕ ಸಂಕಷ್ಟ: ಪ್ರಧಾನಿ ನಡೆ ಟೀಕಿಸಿದ ಹರೀಶ್ ಕುಮಾರ್

ಮಂಗಳೂರು: ಇರಾನ್–ಅಮೆರಿಕಾ–ಇಸ್ರೇಲ್ ನಡುವಿನ ಉದ್ವಿಗ್ನತೆ ಜಾಗತಿಕ ಮಟ್ಟದಲ್ಲಿ ಸಂಕಷ್ಟ ಉಂಟುಮಾಡುವ ಸಾಧ್ಯತೆ ಇದೆ. ಅಮೆರಿಕಾದ ಉದ್ದಟ ನೀತಿಯಿಂದ ವಿಶ್ವಕ್ಕೆ ದೊಡ್ಡ ಕಂಟಕ ಎದುರಾಗಿದ್ದು, ತೈಲ ರಾಷ್ಟ್ರಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಿಂದ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆ ಮೇಲೆ ಪರಿಣಾಮ ಬಿದ್ದು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ…

Read More

ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಟ್ರಸ್ಟ್ ವತಿಯಿಂದ 300 ಕುಟುಂಬಗಳಿಗೆ 50 ಲಕ್ಷ ರೂ. ಸಹಾಯ ಹಸ್ತ

ಮುಲ್ಕಿ: ಸಮಾಜದ ಉತ್ಕರ್ಷಕ್ಕಾಗಿ ಜೀವನವನ್ನೇ ಸಮರ್ಪಿಸಿದ್ದ ವಿಜಯ ಬ್ಯಾಂಕಿನ ವಿಜಯಶಿಲ್ಪಿ ಮುಲ್ಕಿ ಸುಂದರರಾಮ ಶೆಟ್ಟಿ ಅವರ ನೆನಪಿನಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ 300ಕ್ಕೂ ಹೆಚ್ಚು ಕುಟುಂಬಗಳಿಗೆ ಒಟ್ಟು ಸುಮಾರು 50 ಲಕ್ಷ ರೂ. ಮೌಲ್ಯದ ಸಹಾಯ ಹಸ್ತ ನೀಡಲಾಗುತ್ತಿದೆ. ಉನ್ನತ ಹುದ್ದೆ ಮತ್ತು ಅಧಿಕಾರದಲ್ಲಿದ್ದರೂ ಸಮಾಜದ ಸಂಪರ್ಕವನ್ನು ಉಳಿಸಿಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದವರು ಮುಲ್ಕಿ ಸುಂದರರಾಮ ಶೆಟ್ಟಿ. ರಾಷ್ಟ್ರೀಕೃತ ವಿಜಯ ಬ್ಯಾಂಕಿನಲ್ಲಿ ಕರಾವಳಿ ಭಾಗದ ಅನೇಕ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ, ಆ…

Read More

ಕಾನಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕದಲ್ಲಿರುವ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸುಮಾರು 25 ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಈ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಗತ್ಯ ಅನುದಾನವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಆದರೆ ಬಳಿಕ ಅನುದಾನ…

Read More

ಕೊಲ್ಲಾಡು–ಹೊಸಬೆಟ್ಟು ಪ್ರದೇಶಕ್ಕೆ ರಸ್ತೆ ನಿರ್ಮಿಸದಿದ್ದರೆ ಪ್ರತಿಭಟನೆ: ಗಿರಿಧರ ನಾಯ್ಕ ಎಚ್ಚರಿಕೆ

ಪುತ್ತೂರು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಲ್ಲಾಡು–ಹೊಸಬೆಟ್ಟು ಪ್ರದೇಶಕ್ಕೆ ರಸ್ತೆ ಇಲ್ಲದ ಕಾರಣ ಅಲ್ಲಿನ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಬೆಳ್ತಂಗಡಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಎಚ್ಚರಿಕೆ ನೀಡಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮಂತಡ್ಕ–ದಿಡುಪೆ ರಸ್ತೆಯಲ್ಲಿ ಪೊಟ್ಟುಕೆರೆ ಎಂಬಲ್ಲಿಂದ ಕವಲೊಡೆದ ಕೊಲ್ಲಾಡು–ಹೊಸಬೆಟ್ಟು ರಸ್ತೆ ಸುಮಾರು 150 ವರ್ಷಗಳ ಹಿಂದಿನಿಂದಲೂ ಎತ್ತಿನಗಾಡಿ ಹೋಗುವ ದಾರಿಯಾಗಿತ್ತು ಎಂದು…

Read More
error: Content is protected !!