2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಶಾಸಕ ಅಶೋಕ್ ರೈ

ಪುತ್ತೂರು, ಜೂ.13: ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರಾಜ್ಯಗಳಲ್ಲಿ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಕಾರಣ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಉಪ್ಪಿನಂಗಡಿಯ ರೋಟರಿ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷದ ಬಲವರ್ಧನೆಗೆ ಕಾರ್ಯಕರ್ತರ ಶ್ರಮ ಅತ್ಯಗತ್ಯ. ಜನರ…

Read More

ಕೆಂಗೇರಿಯಲ್ಲಿ ಭೀಕರ ರಸ್ತೆ ಅಪಘಾತ: ಕೇರಳದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ದುರ್ಮರಣ

ಬೆಂಗಳೂರು: ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಸಿ.ಬಿ. ಹಾಗೂ ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆಗೆ ಕೆಂಗೇರಿಯ ಆರ್.ಆರ್. ದಂತ ಕಾಲೇಜು ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ…

Read More

ವಾರೆಂಟ್ ಆರೋಪಿ ಬಂಧನ – ಬಂಟ್ವಾಳ ಪೊಲೀಸರ ಕಾರ್ಯಾಚರಣೆ

ಮಂಗಳೂರು: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು‌ ಬಂಟ್ವಾಳ ‌ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ:309/2017, ಕಲಂ 8 (c) 27 B NDPS ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ನಜಿರ್ ಅಹ್ಮದ್ (41) ಎಂಬಾತನ ಇರುವಿಕೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ PC 2456ನೇ ಶ್ರೀಕಾಂತ & PC 2468 ಅರುಣ್ ರವರು ಮಾಹಿತಿ ಸಂಗ್ರಹಿಸಿ, ಸದ್ರಿ ಆರೋಪಿಯನ್ನು ವಗ್ಗ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು‌ಪಡಿಸಿರುತ್ತಾರೆ. ಆರೋಪಿಗೆ ನ್ಯಾಯಾಧೀಶರು…

Read More

ಮಕ್ಕಳ ಸಮಗ್ರ ಬೆಳವಣಿಗೆಗೆ ಪೋಷಕರ ಪ್ರೋತ್ಸಾಹ ಅಗತ್ಯ: ವಂ. ಬೆಂಜಮೀನ್ ಪಿಂಟೊ

ಮಂಗಳೂರು: ಮಕ್ಕಳ ಸಮಗ್ರ ಬೆಳವಣಿಗೆಗೆ ಪೋಷಕರು ನಿರಂತರ ಪ್ರೋತ್ಸಾಹ ನೀಡಿದಾಗ ಅವರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಜೊತೆಗೆ ಮಕ್ಕಳನ್ನು ಅತಿಯಾದ ಮಾಧ್ಯಮ ಬಳಕೆಯಿಂದ ದೂರವಿರಿಸುವುದು ಅಗತ್ಯ ಎಂದು ಉರ್ವ ಇಮ್ಯಾನುಯೆಲ್ ಚರ್ಚ್ ಧರ್ಮಗುರು ಹಾಗೂ ಶಾಲಾ ಸಂಚಾಲಕರಾದ ವಂ. ಬೆಂಜಮೀನ್ ಪಿಂಟೊ ಹೇಳಿದರು. ಅವರು ಉರ್ವ ಚರ್ಚ್ ಸಭಾಂಗಣದಲ್ಲಿ ನಡೆದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಶಿಕ್ಷಕರಾದ ರಾಜ್ ಕಿರಣ್ ಡಿಕುನ್ಹಾ ಅವರು…

Read More

ಸುಂದರ್ ರಾಮ್ ಶೆಟ್ಟಿಯವರ ಸಮಾಧಿ ಮರುಸ್ಥಾಪನೆಗೆ ಒತ್ತಾಯ

ಮಂಗಳೂರು, ಜೂ.13: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಮುಲ್ಕಿಯ ಬಪ್ಪನಾಡು ಪ್ರವೇಶ ದ್ವಾರದ ಸಮೀಪವಿದ್ದ ವಿಜಯಾ ಬ್ಯಾಂಕಿನ ಆಧುನಿಕ ಶಿಲ್ಪಿ ದಿವಂಗತ ಸುಂದರ್ ರಾಮ್ ಶೆಟ್ಟಿಯವರ ಸಮಾಧಿಯನ್ನು ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವ ಕ್ರಮವನ್ನು ಸುಂದರ್ ರಾಮ್ ಶೆಟ್ಟಿ ಅಭಿಮಾನಿ ಬಳಗ ತೀವ್ರವಾಗಿ ಖಂಡಿಸಿದೆ. ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಸ್ಥಳೀಯ ಸಾರ್ವಜನಿಕರೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಸಮಾಧಿಯನ್ನು ಧ್ವಂಸಗೊಳಿಸಿರುವುದು ನೋವುಂಟುಮಾಡಿದೆ ಎಂದು ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಜಯಾ ಬ್ಯಾಂಕನ್ನು…

Read More

ಅಸ್ಸಾಂನಲ್ಲಿ IAF AN-32 ವಿಮಾನ ಅಪಘಾತ: ಜೋರ್ಹತ್ ವಾಯುನೆಲೆಯಲ್ಲಿ ಇಳಿಯುವ ವೇಳೆ ಬೆಂಕಿಗಾಹುತಿ

ಜೋರ್ಹತ್ (ಅಸ್ಸಾಂ), ಜೂನ್ 13: ಭಾರತೀಯ ವಾಯುಪಡೆಯ (IAF) AN-32 ಸಾರಿಗೆ ವಿಮಾನವು ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಶನಿವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದೆ. ಇಳಿಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ಬಳಿಕ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಜೋರ್ಹತ್‌ನ ರೌರಿಯಾ ವಾಯುನೆಲೆಯ ಆವರಣದಲ್ಲೇ ವಿಮಾನ ಪತನಗೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ…

Read More

ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆ

ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಬರಿಮಾರು ನಿವಾಸಿ ಮಾದೇವಿ (21) ಎಂದು ಗುರುತಿಸಲಾಗಿದೆ. ಈಕೆ ಸುಮಾರು ಆರು ತಿಂಗಳ ಕಾಲ ಧಾರವಾಡದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿದ್ದು, ಬಳಿಕ ಕೆಲಸ ಬಿಟ್ಟು ಕಳೆದ ಐದು ತಿಂಗಳಿನಿಂದ ತಂದೆ-ತಾಯಿ ಜತೆ ಮನೆಯಲ್ಲಿ…

Read More

‘ವೋಟ್ ಚೋರಿ, ಸೀಟ್ ಚೋರಿ ಪ್ರಜಾಪ್ರಭುತ್ವಕ್ಕೆ ಕಳಂಕ’: ಐವನ್ ಡಿ’ಸೋಜಾ ಆರೋಪ

ಮಂಗಳೂರು, ಜೂನ್ 13: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿಯಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಕುಸಿಯುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು. ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವೋಟ್ ಚೋರಿ” ಮತ್ತು “ಸೀಟ್ ಚೋರಿ” ಪ್ರಜಾಪ್ರಭುತ್ವಕ್ಕೆ ಗಂಭೀರ ಹೊಡೆತ ನೀಡಿದ್ದು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಮೌನ…

Read More

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ–ಎನ್‌ಡಿಪಿಎಸ್‌ ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್‌ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ. ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ…

Read More

‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಚಾಲನೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅವರ ಸ್ವಾಗತ ಸಮಾರಂಭದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಯಿತು. ಜಿಲ್ಲೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಸಮ್ಮುಖದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿ ಹಮ್ಮಿಕೊಳ್ಳಲಾದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ…

Read More
error: Content is protected !!