ರಾಮಕುಂಜದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಸ್ಫೋಟ, ಮನೆಗಳಿಗೆ ಹಾನಿ – ಡಿವೈಎಸ್ಪಿ ಭೇಟಿ
ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಸ್ಫೋಟಿಸಿರುವುದರಿಂದ ಮನೆಗಳಿಗೆ ಹಾನಿಯಾಗಿರುವ ರಾಮಕುಂಜ ಗ್ರಾಮದ ಕಂಪಕ್ಕೆ ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ.ಅವರು ಮಾ.೧೧ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಜಾಗದಲ್ಲಿ ನೀರಿಗಾಗಿ ಬಾವಿ ತೋಡುವ ಕೆಲಸ ಮಾಡಿಸುತ್ತಿದ್ದು ಈ ವೇಳೆ ಕೋಡಿಂಬಾಳ ನಿವಾಸಿ ಶಿವರಾಮ ಎಂಬವರು ಬಾವಿಯೊಳಗೆ ಕಲ್ಲು ಹುಡಿ ಮಾಡಲು ಸ್ಫೋಟಕ ಸ್ಫೋಟಿಸಿದ ಪರಿಣಾಮ ಪರಿಸರದ ವಾಮನ ಮೂಲ್ಯ ಹಾಗೂ ಕೆ.ಟಿ.ಮೋಹನ…