ಜಾಗತಿಕ ಸವಾಲುಗಳ ನಡುವೆಯೂ ಭಾರತ 7.7% ಆರ್ಥಿಕ ಬೆಳವಣಿಗೆ ಸಾಧನೆ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು, ಜೂನ್ 13: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತವು ಶೇ.7.7ರ ಆರ್ಥಿಕ ಬೆಳವಣಿಗೆ ದರ ಸಾಧಿಸಿದ್ದು, ವಿಶ್ವದ ಪ್ರಮುಖ ಆರ್ಥಿಕ ರಾಷ್ಟ್ರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಇಂದು 4.1 ಟ್ರಿಲಿಯನ್ ಡಾಲರ್…

Read More

ಅಕ್ರಮ ಆನೆದಂತ ಸಾಗಾಟ ಪತ್ತೆ: ಮೂವರು ವಶ

ಮಂಗಳೂರು,- ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಕಾರು ಮತ್ತು 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೆÇಲೀಸ್ ಅಧೀಕ್ಷಕ ಪವನ್‍ನೆಜ್ಜೂರು ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೆÇಲೀಸ್ ಅರಣ್ಯ ಸಂಚಾರಿ…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು: ನ್ಯಾಯಾಧೀಶೆ ಜೈಬುನ್ನೀಸಾ

ಮಂಗಳೂರು, ಜೂನ್ 13: ಬಾಲಕಾರ್ಮಿಕ ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲಕಾರ್ಮಿಕ ನಿರ್ಮೂಲನೆ ಕುರಿತ…

Read More

ಕಣಪಗಾರು ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಲೋಕಾರ್ಪಣೆ: ಜನರ ಸಮಸ್ಯೆ ಆಲಿಸಿದ ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ, ಜೂನ್ 13: ಸಾಗರ ತಾಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದರು. ಮೊಬೈಲ್ ಸಂಪರ್ಕ ಸೌಲಭ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರ್ಮಿಸಲಾದ ಈ ಟವರ್‌ನಿಂದ ಕಣಪಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉತ್ತಮ ದೂರಸಂಪರ್ಕ ಸೇವೆ ದೊರೆಯಲಿದೆ. ಬಳಿಕ ಭಾನುಕುಳ್ಳಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನಸಂಪರ್ಕ ಸಭೆ ನಡೆಸಿದ ಸಂಸದರು, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ…

Read More

ಧರ್ಮಸ್ಥಳ ಪ್ರಕರಣ: ಅಂತಿಮ ವರದಿ ಸಲ್ಲಿಸಲು ಎಸ್‌ಐಟಿಗೆ ನಿರ್ದೇಶನ ನೀಡುವಂತೆ ಹೈಕೋರ್ಟ್‌ಗೆ ಚಿನ್ನಯ್ಯ ಅರ್ಜಿ

ಬೆಂಗಳೂರು: ಧರ್ಮಸ್ಥಳದಲ್ಲಿ ಸಂತ್ರಸ್ತರ ಮೃತದೇಹಗಳನ್ನು ತಾನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಸ್ವಚ್ಛತಾ ಕಾರ್ಮಿಕ ಚಿನ್ನಯ್ಯ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಪ್ರಾಥಮಿಕ ತನಿಖಾ ವರದಿಯಲ್ಲಿ ಹೆಸರು ಉಲ್ಲೇಖಗೊಂಡಿರುವ ವ್ಯಕ್ತಿಗಳು, ಯೂಟ್ಯೂಬರ್‌ಗಳು ಹಾಗೂ ಇತರ ಸಂಚುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ 2025ರ ಡಿಸೆಂಬರ್ 18ರಂದು ತಾನು ನೀಡಿದ್ದ ದೂರನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದೆ….

Read More

ಕೊಲ್ಲೂರು ದೇವಾಲಯದಲ್ಲಿ ವಿಜಯ್ ಭೇಟಿ; ಭದ್ರತೆ ಮತ್ತು ಭಕ್ತರ ಅನುಕೂಲದ ನಡುವೆ ಸಮತೋಲನದ ಪ್ರಶ್ನೆ

ವಿಐಪಿ ಭೇಟಿ ವೇಳೆ ಭಕ್ತರಿಗೆ ತೊಂದರೆ ತಪ್ಪಿಸಬೇಕು: ಕೊಲ್ಲೂರು ದರ್ಶನದ ಬಳಿಕ ಮತ್ತೆ ಚರ್ಚೆಗೆ ಬಂದ ವಿಶೇಷ ವ್ಯವಸ್ಥೆ ಉಡುಪಿ: ದೇವಾಲಯಗಳಲ್ಲಿ ಅತಿ ಗಣ್ಯ ವ್ಯಕ್ತಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ ಬಗ್ಗೆ ಆಗಾಗ ನಮ್ಮ ದೇಶದ ನ್ಯಾಯಾಲಯಗಳು ಸಂದರ್ಭಾನುಸಾರ ಅಸಮಾಧಾನ ವ್ಯಕ್ತಪಡಿಸಿವೆ. ತಮಿಳು ನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಖ್ಯಾತ ಶಕ್ತಿ ಪೀಠ ಕೊಲ್ಲೂರು‌ ಶ್ರೀ ಮೂಕಾಂಬಿಕಾ ದೇವಾಲಯ ಭೇಟಿಗೆ ಆಗಮಿಸಿದರು.ಅವರ ಭದ್ರತೆ ಹೇಗಿತ್ತು ಎಂಬುದರ ಒಂದು ನೋಟ ಇಲ್ಲಿದೆ. ವಿ.ಐ.ಪಿ. ದರ್ಶನ…

Read More

ಕಸದ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗೆ ತಕ್ಷಣ ಪರಿಹಾರ ನೀಡಿ: ಉಪ್ಪಿನಂಗಡಿ ಗ್ರಾ.ಪಂಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹ

ಪುತ್ತೂರು ತಾಲೂಕಿನ ೨ನೇ ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗಳೂ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಉಪ್ಪಿನಂಗಡಿ ಗ್ರಾಮಪಂಚಾಯತ್ ಯಾವುದೇ ವಿಚಾರಕ್ಕೆ ಸ್ಪಂಧಿಸದೆ ಮೌನಾಚರಣೆ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಬದುಕಿನ ಹಿತದೃಷ್ಟಿಯಿಂದ ತಕ್ಷಣ ಈ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಗ್ರಾಪಂ ಕ್ರಮಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹಿಸಿದೆ. ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ ಮತ್ತು ಕಾರ್ಯದರ್ಶಿ ಯೂನಿಕ್ ಅಬ್ದುಲ್ ರಹಿಮಾನ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಉಪ್ಪಿನಂಗಡಿ ಗ್ರಾಪಂ…

Read More

ಮತದಾರರ ಪಟ್ಟಿಯ ಎಸ್‌ಐಆರ್‌ನಲ್ಲಿ ಮಹಿಳಾ ಸ್ನೇಹಿ ಕ್ರಮ ಅನುಸರಿಸಿ: ಜಿಲ್ಲಾಡಳಿತಕ್ಕೆ ಜನವಾದಿ ಮಹಿಳಾ ಸಂಘಟನೆ ಮನವಿ

ಮಂಗಳೂರು, ಜೂನ್ 13: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮಹಿಳಾ ಸ್ನೇಹಿ ಕ್ರಮಗಳನ್ನು ಅನುಸರಿಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಶುದ್ಧೀಕರಣದ ಹೆಸರಿನಲ್ಲಿ ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ರಾಜ್ಯಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸಂಘಟನೆ ತಿಳಿಸಿದೆ. ಬಿಹಾರ, ಮಧ್ಯಪ್ರದೇಶ ಹಾಗೂ ಪಶ್ಚಿಮ…

Read More

ವಿಪತ್ತು ಸಂದರ್ಭಗಳಲ್ಲಿ ಧೈರ್ಯ ಮತ್ತು ಜಾಗೃತಿಯೇ ಜೀವ ರಕ್ಷಣೆ: ಎನ್‌ಡಿಆರ್‌ಎಫ್‌ನಿಂದ ವಿದ್ಯಾರ್ಥಿಗಳಿಗೆ ತರಬೇತಿ

ಪುತ್ತೂರು, ಜೂನ್ 13: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 10ನೇ ಬಟಾಲಿಯನ್ ತಂಡದ ವತಿಯಿಂದ ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಪತ್ತು ನಿರ್ವಹಣಾ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 10ನೇ ಬಟಾಲಿಯನ್‌ನ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ ಎಎಸ್‌ಐ ಸುಭಾಷ್ ಶಿಂಧೆ ಹಾಗೂ ತಂಡದ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿಪತ್ತುಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪ್ರವಾಹ, ಭೂಕುಸಿತ, ಚಂಡಮಾರುತ, ಸುನಾಮಿ ಹಾಗೂ ಅಗ್ನಿ…

Read More

ಕಾಂಗ್ರೆಸ್‌ಗಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಉತ್ತಮ ಅವಕಾಶ ಖಚಿತ: ಸಚಿವ ಯು.ಟಿ. ಖಾದರ್

ಮಂಗಳೂರು, ಜೂನ್ 13: ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೂ ಒಂದಲ್ಲಾ ಒಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತವಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಜನರ…

Read More
error: Content is protected !!