ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಬೇಡಿ: ಉಳ್ಳಾಲದಲ್ಲಿ ಸಿಪಿಐಎಂ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ

ಳ್ಳಾಲ, ಜೂನ್ 12: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಉಳ್ಳಾಲ ವಲಯ ಸಮಿತಿಯ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆಯ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಖಾಸಗಿ ಆಸ್ಪತ್ರೆಗಳ ಏಕಸ್ವಾಮ್ಯದಿಂದ ಜಿಲ್ಲೆಯ…

Read More

ಕುದ್ರೋಳಿ ಭಗವತಿ ದೇವಸ್ಥಾನ–ಕಟ್ಟೆಮಾರು ರಸ್ತೆ ಅಗಲೀಕರಣಕ್ಕೆ ವೇಗ: ವಿಶೇಷ ಸಭೆಯಲ್ಲಿ ಚರ್ಚೆ

ನಗರದ ಕೊಡಿಯಲ್ ಬೈಲ್ ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ ನಡೆಯಬೇಕಿರುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ವಿಶೇಷ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಇಲ್ಲಿನ ರಸ್ತೆ ಅಗಲೀಕರಣವು ಸ್ಥಳೀಯ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಹಿಂದಿನ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ ಯಶಸ್ವಿಯಾಗಿರಲಿಲ್ಲ. ರಸ್ತೆಗಳು ಅಗಲವಾದಲ್ಲಿ ಸುತ್ತಮುತ್ತಲಿನ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಬೆಳೆಯುತ್ತಿರುವ ನಗರ, ಇಲ್ಲಿಗೆ ಆಗಮಿಸುವ ಭಕ್ತರ ಸಹಿತ…

Read More

ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ ಖಂಡನೀಯ: ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ – ಯುವ ಕಾಂಗ್ರೆಸ್ ಎಚ್ಚರಿಕೆ

ಮಂಗಳೂರು, ಜೂನ್ 12: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಪ್ರಮಾಣ ಪತ್ರಗಳಿಗಾಗಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಪಾಸ್‌ಪೋರ್ಟ್ ಅರ್ಜಿದಾರರು ಸೇರಿದಂತೆ ಅನೇಕ ನಾಗರಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ನಿಯೋಗವು ಆಯುಕ್ತರ ಗಮನಕ್ಕೆ ತಂದಿತು. ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಾಗರಿಕರ…

Read More

ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಬೆಂಗಳೂರು ಮೂಲದ ಆರೋಪಿ ಬಂಧನ

ಚಿಕ್ಕಮಗಳೂರು, ಜೂ.12: ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಮೂಲದ ಯೋಗೀಶ್ (25) ಎಂದು ಗುರುತಿಸಲಾಗಿದೆ. ಈತ ತರಿಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ರಾತ್ರಿ ವೇಳೆ ಮಹಿಳೆಗೆ ಕರೆ ಮಾಡಿ ಅಶ್ಲೀಲ ಫೋಟೋಗಳನ್ನು…

Read More

ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಬಂಧನ: ಬೆಂಗಳೂರಿನಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ

ಪುತ್ತೂರು, ಜೂ.12: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಮನ್ ನಾಯಕ್ ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2018ರಡಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ…

Read More

ಎರಡು ವರ್ಷಗಳಿಂದ ಆತಂಕ ಸೃಷ್ಟಿಸಿದ್ದ ಹುಲಿ ಬೋನಿಗೆ ಬಿತ್ತು; ಗ್ರಾಮಸ್ಥರ ನಿಟ್ಟುಸಿರು

ಹುಣಸೂರು: ಕಳೆದ ಎರಡು ವರ್ಷಗಳಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಹನಗೋಡು ಹೋಬಳಿಯ ಕೂಡ್ಲೂರು ಸಮೀಪ ನಡೆದಿದೆ. ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ಸೇರಿದ ತೋಟದಲ್ಲಿ ಅಳವಡಿಸಲಾಗಿದ್ದ ಬೋನಿನಲ್ಲಿ ಬುಧವಾರ ಮುಂಜಾನೆ ಸುಮಾರು 3ರಿಂದ 4 ವರ್ಷ ವಯಸ್ಸಿನ ಹೆಣ್ಣು ಹುಲಿ ಸೆರೆಯಾಗಿದೆ. ಹುಲಿ ಬಂಧನದಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿದ್ದ ಹುಲಿ ಹತ್ತಾರು ಜಾನುವಾರುಗಳನ್ನು…

Read More

ಮುಕ್ರಂಪಾಡಿಯಲ್ಲಿ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ, ಜೂ.12: ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಮತಿ ಪ್ರತಿಭಾ ಓಕುಣ್ಣಾಯ ಬೊಳ್ಳಿಂಬಳ ಹಾಗೂ ಶ್ರೀಮತಿ ರಜತಾ ಭಟ್ ಮುಕ್ರಂಪಾಡಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ವೀಣಾ ಬಲ್ಲಾಳ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ಪವಿತ್ರಾ ದೊಡ್ಡಡ್ಕ ಮತ್ತು ಶ್ರೀಮತಿ ಸ್ವಯಂಪ್ರಭಾ…

Read More

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ಅಪಘಾತಗಳ ಭೀತಿ: ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಬಂಟ್ವಾಳ, ಜೂ.12: ಗಡಿಯಾರ ಸಮೀಪ ನಿನ್ನೆ ನಡೆದ ಕಾರು ಅಪಘಾತದಲ್ಲಿ ಚಾಲಕ ಮೃತಪಟ್ಟ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆ ಮತ್ತು ಕಾಮಗಾರಿ ಅವ್ಯವಸ್ಥೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. “ಹೆದ್ದಾರಿಯಲ್ಲಿ ಅಪಾಯಕಾರಿ ಕಲ್ಲು ಹಾಗೂ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸದೆ ಅಮಾಯಕ ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟ ನಡೆಸಲಾಗುತ್ತಿದೆ” ಎಂಬ ಬರಹಗಳೊಂದಿಗೆ ಹಲವು ಸಂದೇಶಗಳು ವೈರಲ್ ಆಗಿವೆ. ಬಿಸಿರೋಡು–ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿ ಇನ್ನೂ ಸಂಪೂರ್ಣಗೊಂಡಿಲ್ಲ. ಅಲ್ಲಲ್ಲಿ ಹೊಂಡ-ಗುಂಡಿಗಳು, ಕಾಮಗಾರಿಗೆ ಸಂಬಂಧಿಸಿದ…

Read More

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಅನಿತಾ ಕಾಸರಗೋಡು ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ…

Read More

ಮಕ್ಕಳ ಹಕ್ಕುಗಳ ಆಯೋಗದ ನೇಮಕಾತಿ ರದ್ದುಪಡಿಸಲು ಆಗ್ರಹ: ಅರ್ಹತಾ ಮಾನದಂಡ ಉಲ್ಲಂಘನೆ ಆರೋಪ

ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲ. ಹೀಗಾಗಿ ಅವರ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ಕಾನೂನಿನ ಪ್ರಕಾರ ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಆಗ್ರಹಿಸಿವೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜಾ, ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯಲ್ಲಿ…

Read More
error: Content is protected !!