ಜೀವದ ಹಂಗು ತೊರೆದು ಸೇವೆ: ಈಶ್ವರ್ ಮಲ್ಪೆಗೆ ಆಧುನಿಕ ರಕ್ಷಣಾ ಸಾಧನ ನೀಡಿದ ಟ್ರಸ್ಟ್
ಉಡುಪಿ: ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.ಅವರು ಭಾನುವಾರ ಸಂಜೆ ಚರ್ಚಿನ ಆವರಣದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಮಂಗಳೂರಿನ ಮೈಕಲ್ ಡಿಸೋಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು ರೂ 7 ಲಕ್ಷ ವೆಚ್ಚದಲ್ಲಿ ಕೊಡಲಾದ ನೀರಿನಡಿ ಮುಳುಗಿ ಜೀವರಕ್ಷಣೆ ಮಾಡುವಾಗ ಉಪಯೋಗಿಸುವ ಸಂವಹನ ಸಾಧನವನ್ನು ಹಸ್ತಾಂತರಿಸಿ ಮಾತನಾಡಿದರು….