ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ

ಮಂಗಳೂರು, ಮಾ. 8 (ಕ.ವಾ): ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಹಿಳಾ ವಾರ್ಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸಿಡ್ ದಾಳಿ ಸಂತ್ರಸ್ತೆಯೊಂದಿಗೆ ಮಾತುಕತೆ ನಡೆಸಿ ಆಕೆಗೆ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಅಗತ್ಯವಾದ ಪರಿಹಾರ ಮತ್ತು ಸರ್ಕಾರದ ನೆರವು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ…

Read More

ಐಆರ್ ಸಿಟಿಸಿ ಮಂಗಳೂರಿನಿಂದ ರೈಲು ಮತ್ತು ವಿಮಾನ ಪ್ರವಾಸ ಪ್ಯಾಕೇಜ್ಗಳ ಪರಿಚಯ

ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (ಐಆರ್ ಸಿಟಿಸಿ) ಭಾರತ ಸರ್ಕಾರದ ರೈಲ್ವೇ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿದೆ. ನಿಲ್ದಾಣಗಳಲ್ಲಿ, ರೈಲುಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕ್ಯಾಟರಿಂಗ್ ಮತ್ತು ಆತಿಥ್ಯ ಸೇವೆಗಳನ್ನು ಉನ್ನತೀಕರಿಸಲು, ವೃತ್ತಿಪರಗೊಳಿಸಲು ಮತ್ತು ನಿರ್ವಹಿಸಲು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಐಆರ್ ಸಿಟಿಸಿಯನ್ನು ಭಾರತೀಯ ರೈಲ್ವೇಯ ವಿಸ್ತೃತ ಅಂಗವಾಗಿ ಸ್ಥಾಪಿಸಲಾಗಿದೆ. ಕೈಗೆಟುಕುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಗಳನ್ನು ಆಯೋಜಿಸುವಲ್ಲಿ ಒಂದು ಪ್ರಮುಖ ಸಂಸ್ಥೆಯಾಗಿ, ಐಆರ್…

Read More

ತಣ್ಣೀರುಬಾವಿ ಬೀಚ್‌ನಲ್ಲಿ ಅಲ್ಟಿಮೇಟ್ ಫ್ರಿಸ್ಬಿ ನ್ಯಾಷನಲ್ಸ್: ಪಶ್ಚಿಮ ಕರಾವಳಿಯಲ್ಲಿ ಇದೇ ಮೊದಲ ಬಾರಿ

ಮಂಗಳೂರು: ಪಶ್ಚಿಮ ಕರಾವಳಿಯ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿ ಅಲ್ಟಿಮೇಟ್ ಫ್ರಿಸ್ಬಿ ಬೀಚ್ ನ್ಯಾಷನಲ್ಸ್ ರಾಷ್ಟ್ರೀಯ ಟೂರ್ನಮೆಂಟ್ ಮಂಗಳೂರಿನ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಮಾರ್ಚ್ 6 ರಿಂದ 8ರವರೆಗೆ ನಡೆಯಿತು. ಈ ಮೂಲಕ ತಣ್ಣೀರುಬಾವಿ ಬೀಚ್ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಸಾಕ್ಷಿಯಾಯಿತು. ಅಮೆರಿಕ ಮೂಲದ ಈ ಕ್ರೀಡೆ ಭಾರತದಲ್ಲಿ ಇನ್ನೂ ವ್ಯಾಪಕವಾಗಿ ಜನಪ್ರಿಯವಾಗದಿದ್ದರೂ, ಕಳೆದ ಕೆಲವು ವರ್ಷಗಳಿಂದ ನಿಧಾನವಾಗಿ ಬೆಳವಣಿಗೆ ಕಾಣುತ್ತಿದೆ. ಗುಜರಾತ್‌ನಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿರುವ ಪಶ್ಚಿಮ ಕರಾವಳಿಯಲ್ಲಿ ಈ ರೀತಿಯ ರಾಷ್ಟ್ರೀಯ ಮಟ್ಟದ ಟೂರ್ನಮೆಂಟ್ ಇದೇ…

Read More

ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗೆ “ಕನ್ನಡ ಕಟ್ಟಾಳು “ವಿಶೇಷ ಗೌರವ ಪ್ರಶಸ್ತಿ.

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿಗೆ “ಕನ್ನಡ ಕಟ್ಟಾಳು” ವಿಶೇಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶ್ರೀಮತಿ ರೇಖಾ ಸುದೇಶ್ ರಾವ್ ಅಧ್ಯಕ್ಷೆಯಾಗಿರುವ ಹಾಗೂ ಡಾ. ರವೀಂದ್ರ ಜೆಪ್ಪು ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ, ಕನ್ನಡ…

Read More

ಮಂಗಳೂರು ವಿವಿಯಲ್ಲಿ ಸಾಧಕರಿಗೆ ‘ಯಕ್ಷಮಂಗಳ’ ಪ್ರಶಸ್ತಿ ಪ್ರದಾನ

ಕೊಣಾಜೆ: ಯಕ್ಷಗಾನವು ಹಲವು ಕಲೆಯ ಸಮನ್ವಯದಿಂದ ರೂಪುಗೊಂಡ ಸಮೃದ್ಧ ಪರಂಪರೆಯ ಕಲೆ ಆಗಿದ್ದರೂ, ಅದರ ಕಲಾವಿದರ ಜೀವನ ಮಾತ್ರ ಇನ್ನೂ ಸಂಕಷ್ಟದಲ್ಲಿಯೇ ಇದೆ. ಕಲಾವಿದರಿಗೆ ಸರ್ಕಾರದಿಂದ ಸಮಗ್ರ ಯೋಜನೆಗಳ ಮೂಲಕ ಆರ್ಥಿಕ ರಕ್ಷಣೆ ದೊರಕಬೇಕು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ಪ್ರಾಯೋಜಕರಾದ ಡಾ. ಪಿ. ದಯಾನಂದ ಪೈ ಅಭಿಪ್ರಾಯಪಟ್ಟರು. ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಹಾಗೂ ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ 2025–26ನೇ ಸಾಲಿನ ‘ಯಕ್ಷಮಂಗಳ’ ಪ್ರಶಸ್ತಿ…

Read More

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಭಾಗ ಸಂಪೂರ್ಣ ಕಡೆಗಣನೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಈ ಭಾಗದ ಜನರು ಇಟ್ಟಿದ್ದ ಭರವಸೆ ಹುಸಿಯಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ₹4.48 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹51,591 ಕೋಟಿ ಮೀಸಲಿರಿಸಲಾಗಿದೆ. ಆದರೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದ್ದು, ಅದನ್ನು ಸರಿದೂಗಿಸಲು ಮುಖ್ಯಮಂತ್ರಿ…

Read More

ವಿಟ್ಲ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡುತ್ತಿದ್ದಾನೆ ಎನ್ನಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಸುಡುಮದ್ದುಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಳಗಾಗಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ‌ಬಂಧಿಸಲಾಗಿದೆ. ಆಂಧ್ರಪ್ರದೇಶದ ಲಕ್ಕು ಕೊಂಡಾ ರೆಡ್ಡಿ, ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 32/2015 ಕಲಂ 415, 417, 418, 419, 420, 421, 422, 406, 409, 120 (23) 3 149 ಅಡಿಯಲ್ಲಿ ‌ಪ್ರಕರಣ ದಾಖಲಾಗಿತ್ತು. Maithri Plantation and Horticulture Pvt Ltd ಎಂಬ ಸಂಸ್ಥೆಯ ಅಡಿಯಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣವನ್ನು ಡೆಪಾಸಿಟ್ ಮಾಡಿಸಿ ಸಾರ್ವಜನಿಕರಿಗೆ ಮೋಸ,…

Read More

6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

ಮಂಗಳೂರು: 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

Read More

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 21/2019, ಕಲ೦: 504, 323,,324, 326, 506 R./ w 34 IPC ಪ್ರಕರಣದಲ್ಲಿ ಆರೋಪಿಯಾಗಿರುವ ಕಡಬ ನಿವಾಸಿವಿನೋದ್ @.ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬುವವರು 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಅ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ….

Read More
error: Content is protected !!